NEWSನಮ್ಮಜಿಲ್ಲೆನಮ್ಮರಾಜ್ಯ

ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌ಗೆ 15 ಕೋಟಿ ರೂ.: ತನಿಖೆ ಕೋರಿ ಚುನಾವಣಾ ಆಯೋಗ, ಇಡಿಗೆ ಎಎಪಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಎಚ್‌.ವಿಶ್ವನಾಥ್‌ರವರಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಒಪ್ಪಿಕೊಂಡಿರುವ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿಯು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್‌ರವರಿಗೆ 15 ಕೋಟಿ ರೂಪಾಯಿ ಹಣ ನೀಡಿರುವುದು ಹಾಗೂ ಅದರಲ್ಲಿ ವಿಶ್ವನಾಥ್‌ರವರು 4ರಿಂದ 5 ಕೋಟಿ ರೂಪಾಯಿಯನ್ನು ಖರ್ಚು ಮಾಡಿರುವ ಗಂಭೀರ ವಿಚಾರವನ್ನು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಬಹಿರಂಗ ಪಡಿಸಿದ್ದಾರೆ.

ವಿ.ಶ್ರೀನಿವಾಸ್‌ ಪ್ರಸಾದ್‌ ಅವರು ಕೂಡ ಚುನಾವಣೆಗೆ ಹಣ ಪಡೆದಿದ್ದಾರೆ ಎಂದು ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ಈ 15 ಕೋಟಿ ರೂಪಾಯಿಯನ್ನು ಬಿಜೆಪಿ ಹೇಗೆ ಸಂಪಾದಿಸಿತು? ಅಭ್ಯರ್ಥಿ ಎಚ್.ವಿಶ್ವನಾಥ್‌ ಅವರಿಗೆ ಯಾಕಾಗಿ ವರ್ಗಾಯಿಸಲಾಯಿತು? ವಿಶ್ವನಾಥ್‌ ಅವರು 4 ಅಥವಾ 5 ಕೋಟಿ ರೂಪಾಯಿಯನ್ನು ಹೇಗೆ ಖರ್ಚು ಮಾಡಿದರು? ಉಳಿದ 10 ಕೋಟಿ ರೂಪಾಯಿ ಈಗ ಎಲ್ಲಿದೆ? ಚುನಾವಣಾ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಆದ್ದರಿಂದ ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯವು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದೊಂದು ಬಹುದೊಡ್ಡ ಚುನಾವಣಾ ಅಕ್ರಮ. 2019ರಲ್ಲಿದ್ದ ಚುನಾವಣಾ ಆಯೋಗದ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿಯು 28 ಲಕ್ಷ ರೂಪಾಯಿಯನ್ನು ಮಾತ್ರ ಖರ್ಚು ಮಾಡಲು ಅವಕಾಶ ಇರುತ್ತದೆ. ಬಿಜೆಪಿ ಸಂಸದರೇ ಬಹಿರಂಗವಾಗಿ ಒಪ್ಪಿಕೊಂಡಿರುವಂತೆ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್‌ರವರು 4ರಿಂದ 5 ಕೋಟಿ ರೂಪಾಯಿ ಖರ್ಚು ಮಾಡಿರುವುದು ಗರಿಷ್ಠ ಮಿತಿಗಿಂತ ಬರೋಬ್ಬರಿ 15 ಪಟ್ಟಿಗೂ ಹೆಚ್ಚು ಖರ್ಚು ಮಾಡಿದಂತಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್‌ ವಿ ಸದಂ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜಕೀಯ ಚಟುವಟಿಕೆ ವಿಭಾಗದ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, “ಕೋಟಿಗಟ್ಟಲೆ ಹಣ ಖರ್ಚು ಮಾಡಿ ಚುನಾವಣೆ ಎದುರಿಸುವುದಲ್ಲದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಅದನ್ನು ಹೇಳಿಕೊಳ್ಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ತಲುಪಿರುವುದು ನೋವಿನ ಸಂಗತಿ. ಎಚ್‌.ವಿಶ್ವನಾಥ್‌ ಹಾಗೂ ವಿ.ಶ್ರೀನಿವಾಸ್‌ ಪ್ರಸಾದ್‌ ಇವರಿಬ್ಬರನ್ನೂ ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು.

ಬಿಜೆಪಿಯೇತರ ಪಕ್ಷಗಳ ನಾಯಕರ ವಿರುದ್ಧ ನಿರಾಧಾರ ಆರೋಪ ಕೇಳಿಬಂದರೂ ಜಾರಿ ನಿರ್ದೇಶನಾಲಯ ಶೀಘ್ರವೇ ದಾಳಿ ಮಾಡುತ್ತದೆ. ನಾಯಕರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸುತ್ತದೆ. ಆದರೆ ಬಿಜೆಪಿ ಅಭ್ಯರ್ಥಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಸ್ವತಃ ಬಿಜೆಪಿ ಸಂಸದರೇ ಬಹಿರಂಗ ಪಡಿಸಿ ನಾಲ್ಕು ದಿನಗಳಾದರೂ ಇನ್ನೂ ಯಾವುದೇ ದಾಳಿ ಮಾಡದಿರಲು ಕಾರಣವೇನು ಎಂದು ಪ್ರಶ್ನಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ