NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಕಾನೂನು ಕೇಂದ್ರ ತೆರೆಯಲು ಇಚ್ಚೆಯುಳ್ಳ ಸಂಘಟನೆಗೆ 2 ಲಕ್ಷ ರೂ. ದೇಣಿಗೆ, ಪೀಠೋಪಕರಣಗಳ ಕೊಡುಗೆ ಜತೆಗೆ 243 ವಕೀಲರಿಂದ ನೆರವು: ಲಾಯರ್‌ ಶಿವರಾಜು ಕರೆ

ನೊಂದವರಿಗೆ ಹೆಗಲು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಕಾನೂನು ಕೇಂದ್ರ ತೆರೆಯಲು ಯಾವುದೇ ನೌಕರರ ಸಂಘಟನೆಗಳು ಮುಂದೆ ಬಂದರೆ ಆ ಸಂಘಟನೆಗೆ 2 ಲಕ್ಷ ರೂಪಾಯಿ ಜತೆಗೆ ಕೇಂದ್ರಕ್ಕೆ ಬೇಕಾಗುವ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡುವ  ಜತೆಗೆ ರಾಜ್ಯಾದ್ಯಂತ 243 ವಕೀಲರಿಂದ ನೆರವಿನ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಸುಪ್ರೀಂಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ತಿಳಿಸಿದ್ದಾರೆ.

ಇತ್ತೀಚೆಗೆ ಚಾಲನಾ ಸಿಬ್ಬಂದಿಗಳ ಮೇಲೆ ಕೆಲ ಕಿಡಿಗೇಡಿ ಪ್ರಯಾಣಿಕರು ನಡೆಸುತ್ತಿರುವ ಹಲ್ಲೆ ಪ್ರಕರಣಗಳು ಹಾಗೂ ಅಪಘಾತದ ವೇಳೆ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಹಾಗೂ ಕಾನೂನಾತ್ಮಕವಾಗಿ ಅವರಿಗೆ ರಕ್ಷಣೆಕೊಡುವ ನಿಟ್ಟಿನಲ್ಲಿ ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕಾನೂನು ಕೇಂದ್ರ ಕರ್ತವ್ಯ ನಿರ್ವಹಿಸಲಿದ್ದು, ಇದರ ಸಾಧಕ ಬಾಧಕಗಳನ್ನು ನೋಡಿಕೊಂಡು ಮುನ್ನಡೆಸಲು ಇಚ್ಚೆ ಇರುವ ನೌಕರರ ಸಂಘಟನೆಗಳು ಮುಂದೆ ಬಂದರೆ ಅಂಥ ಸಂಘಟನೆಗೆ ನಾವು ಈ ಸೌಲಭ್ಯವನ್ನು ಕೊಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕಾನೂನು ಕೇಂದ್ರವನ್ನು ಬೆಂಗಳೂರಿನಲ್ಲಿ ತೆರೆಯಬೇಕು. ಜತೆಗೆ ಇದನ್ನು ಯಾವುದೇ ಲೋಪವಾಗದಂತೆ ನೋಡಿಕೊಂಡು ಅಪಘಾತವಾದ ಸಮಯದಲ್ಲಿ ಯಾವ ಸ್ಥಳದಲ್ಲಿ ಘಟನೆ ಸಂಭವಿಸುತ್ತದೋ ಆ ವ್ಯಾಪ್ತಿಯಲ್ಲಿರುವ ವಕೀಲರನ್ನು ಈ ಕೇಂದ್ರದಲ್ಲಿರುವವರು ಸಂಪರ್ಕಿಸಿ ಮಾಹಿತಿ ನೀಡುವ ಜತೆಗೆ ನೌಕರರಿಗೆ ಕಾನೂನು ಬಲ ನೀಡಬೇಕು.

ಅಲ್ಲದೆ ಈ ಕೇಂದ್ರದಲ್ಲಿ ನಾವು ಭಾಗಿಯಾಗುವುದಿಲ್ಲ. ಕಾರಣ ನಾನು ಈಗಾಗಲೇ ಖಾಸಗಿ ಕಂಪನಿಯೊಂದರಲ್ಲಿ ವಕೀಲರಾಗಿರುವುದರಿಂದ ಅಲ್ಲಿನ ಕೇಸ್‌ಗಳನ್ನು ನೋಡಿಕೊಳ್ಳುವುದು ಮುಖ್ಯವಾಗುತ್ತದೆ. ಹೀಗಾಗಿ ನಾನು ಈ ಕೇಂದ್ರಕ್ಕೆ ಬರುವುದಿಲ್ಲ ಆದರೆ, ಈಗಾಗಲೇ ಆಯ್ಕೆ ಮಾಡಿಕೊಂಡಿರುವ ಅನುಭವವುಳ್ಳ 243 ಮಂದಿ ವಕೀಲರ ಪೂರ್ಣ ಮಾಹಿತಿಯನ್ನು ಕೇಂದ್ರ ನಡೆಸಲು ಮುಂದೆ ಬರುವ ಸಂಘಟನೆಗೆ ಕೊಡುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ನೌಕರರ ಬಗ್ಗೆ ಕಾಳಜಿ ಇರುವ ಸಂಘಟನೆಗಳು ಈ ಸಂಬಂಧ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕಾನೂನು ಕೇಂದ್ರ ತೆರೆಯುವುದಕ್ಕೆ ಇಚ್ಚೆ ಇದ್ದರೆ ತಮ್ಮ ಎಲ್ಲ ಅನುಭವವನ್ನು ಪೂರ್ಣ ಪ್ರಮಾಣದಲ್ಲಿ ವಿವರಿಸಿ ನಮಗೆ ಮನವಿ ಅರ್ಜಿ ನೀಡಿದ್ದಲ್ಲಿ ಅದನ್ನು ಪರಿಶೀಲಿಸಿ ಸೂಕ್ತ ಸಂಘಟನೆ ಯಾವುದು ಅನಿಸುತ್ತದೆಯೋ ಅದಕ್ಕೆ ಕೇಂದ್ರ ತೆರೆಯಲು ಬೇಕಾದ ಸವಲತ್ತುಗಳನ್ನು ಒಂದು ಬಾರಿಗೆ ಒದಗಿಸಿಕೊಡಲಾಗುವುದು.

ಈ ಉದ್ದೇಶ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ಕಾನೂನಾತ್ಮಕವಾಗಿ ತಡೆಯುವುದೇ ಆಗಿದೆ. ಹೀಗಾಗಿ  ನೌಕರರ ಬಗ್ಗೆ ಕಾಳಜಿ ಇರು ಸಂಘಟನೆಗಳು ಮುಂದೆ ಬರುವ ಮೂಲಕ ಈ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಅಭ್ಯರ್ಥಿಗಳಿಗೆ ನಿರಾಳ: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ಜು.8ರ ವರೆಗೆ ವಿಸ್ತರಣೆ! ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ 5ಮಂದಿ ಸಾವು, ನಲುಗಿದ ಜನತೆ, ಸಮುದ್ರದಂತೆ ಕಂಡುಬಂದ ರಸ್ತೆಗಳು BMTC: ಜುಲೈ 6ರಂದು ನೌಕರರ Pay fixation ಸಂಬಂಧ ಕೇಂದ್ರ ಕಚೇರಿಯಲ್ಲಿ ಸಭೆ ನಿಗದಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ SIRಗೆ ತೆರಳುತ್ತಿದ್ದ VAO ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಗ್ರಾಮಾಡಳಿತ ಲೆಕ್ಕಾಧಿಕಾರಿ ಸ್ಥಿತಿ ಗಂಭೀರ- ಆಸ್ಪತ್ರೆ ... KSRTC: ನಾಲ್ಕೂ ನಿಗಮಗಳ ಬಸ್‌ ಕಿಟಕಿಗಳಿಗೆ ರಾಡ್‌ ಅಳವಡಿಸಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮೋಹನ್ ಕುಮಾರ್ ದಾನಪ... BMTC: ಕೆ.ಆರ್.ಸರ್ಕಲ್ ಬಳಿ ಹಿಂದಿನಿಂದ ವಜ್ರ ಬಸ್‌ಗೆ ಡಿಕ್ಕಿ ಹೊಡೆದ ಎಲೆಕ್ಟ್ರಿಕ್‌ ಬಸ್‌: 14ಕ್ಕೂ ಹೆಚ್ಚು ಮಂದಿಗೆ ಗ... ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಗೃಹ ಜ್ಯೋತಿಗೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಬೆಸ್ಕಾಂ 4ಸಾರಿಗೆ ನಿಗಮಗಳ ನೌಕರರಿಗೆ ಶೇ.12.5ರಷ್ಟು ಮೂಲ ವೇತನ ಹೆಚ್ಚಳ ಜುಲೈ ವೇತನದಲ್ಲಿ ಅನುಷ್ಠಾನ: KSRTC ಎಂಡಿ ಅಧಿಕೃತ ಆದೇಶ