CRIMENEWSನಮ್ಮರಾಜ್ಯ

ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ

ಈಗಾಗಲೇ 5 ಲಕ್ಷ ರೂ. ಚೆಕ್ ನೀಡಲಾಗಿದೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ ಬ್ಯಾಂಕ್‌ ಖಾತೆಗೆ ಹಾಕಲು ಅರಣ್ಯ ಅಧಿಕಾರಿಗಳು ನಿರ್ಧರಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಹನೂರು: ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುತ್ತಿದ್ದಾಗ ಚಿರತೆ ದಾಳಿಗೆ ಒಳಗಾಗಿ ಮೃತಪಟ್ಟ ಬೆಂಗಳೂರು ಮೂಲದ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂಪಾಯಿ ಪರಿಹಾರ ಕೊಡುವುದಾಘಿ ಘೋಷಣೆ ಮಾಡಿದೆ.

ನಿನ್ನೆ ಅಂದರೆ, ಭಾನುವಾರ (ಮೇ 10) ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕನ ಎಳೆದುಕೊಂಡು ಹೋಗಿ ಕೊಂದಿತ್ತು. ಈಗ ಅರಣ್ಯ ಇಲಾಖೆ ಬಾಲಕನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೇ 5 ಲಕ್ಷ ರೂ. ಚೆಕ್ ನೀಡಲಾಗಿದೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ ಬ್ಯಾಂಕ್‌ ಖಾತೆಗೆ ಹಾಕಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಬಾಲಕನ ಕೊಂದ ಚಿರತೆಯ ಚಲನವಲನ ಥರ್ಮಲ್ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೀಗಾಗಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಮುಂದಾಗಿದ್ದು, ನಾಲ್ಕು ಬೋನ್ ಅಳವಡಿಕೆ ಮಾಡಿದೆ. ಅಲ್ಲದೇ ಸ್ಥಳದಲ್ಲಿ 30ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಥರ್ಮಲ್ ಡ್ರೋನ್ ಟೀಂ ಕೂಡ ರಾತ್ರಿಯಿಡಿ ಚಿರತೆಯ ಮೇಲೆ ನಿಗಾ ವಹಿಸಿದ್ದು, ಇತ್ತ ತಾತ್ಕಾಲಿಕವಾಗಿ ನಾಗಮಲೆಗೆ ಹೋಗಲೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಏನಿದು ಘಟನೆ?: ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ನಿವಾಸಿ ಬಾಲಕ ಹರ್ಷಿತ್ ಗೌಡನನ್ನು ಚಿರತೆ ಪೋಷಕರ ಕಣ್ಣೆದುರಲ್ಲೇ ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿತ್ತು.

ಭಾನುವಾರ ಬೆಳಗ್ಗೆ ಕುಟುಂಬದ 10 ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, ಅರಣ್ಯದೊಳಗೆ ಬಾಲಕನ ಶವ ಪತ್ತೆಯಾಗಿತ್ತು.

ಕಾಡಿನೊಳಗೆ ಹೋಗುವಾಗ 200 ರೂ. ಹೆಚ್ಚಿನ ಹಣ ತೆಗೆದುಕೊಂಡು ಒಳಗಡೆ ಬಿಟ್ಟಿದ್ದಾರೆ. ಮಗು ಮೇಲೆ ದಾಳಿಯಾಗಿ ಅರ್ಧ ಗಂಟೆಯಾದರೂ ಯಾವ ಅರಣ್ಯಾಧಿಕಾರಿಯೂ ಬಂದಿರಲಿಲ್ಲ. ನಂತರ ಜನ ಜಗಳ ಮಾಡಿದಾಗ ಮೃತದೇಹ ಹುಡುಕಿದ್ದಾರೆ. ನಮ್ಮ ಮಗುವಿಗಾದಂತೆ ಯಾರಿಗೂ ಆಗಬಾರದು. ಈ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ