ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ (National Forest Martyrs Day) ಕಾರ್ಯಕ್ರಮದಲ್ಲಿ ಮಾತನಾಡಿದರು.
ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ 62 ಮಂದಿ ಹುತಾತ್ಮರಾಗಿದ್ದು,ಈ ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದರು.
ಇನ್ನು ಈಗ ಹವಾಮಾನ ಬದಲಾವಣೆ ದೊಡ್ಡ ಮಟ್ಟದ ಸಮಸ್ಯೆಯಾಗುತ್ತಿದೆ. ಏಕಾಏಕಿ ಮೇಘಸ್ಫೋಟ, ಅತಿಯಾದ ಮಳೆ ಬರುತ್ತಿದೆ. ಮನುಕುಲವೇ ನಾಶವಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಕರ್ನಾಟಕವೂ ಕೂಡ ಡೇಂಜರ್ ಝೋನ್ನಲ್ಲಿದೆ. ಭೂ ಕುಸಿತ ಸಂಭವಿಸುತ್ತಿದೆ. ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಇದಕ್ಕೆ ಪರಿಹಾರ ಎಂದರು.
ರಾಜ್ಯದಲ್ಲಿ ಸಂಪತ್ಭರಿತ ಅರಣ್ಯವಿದೆ. ಪಶ್ಚಿಮ ಘಟ್ಟದಲ್ಲಿ ವಿವಿಧ ಪ್ರಭೇದಗಳ ಜೀವ ವೈವಿಧ್ಯ ತಾಣಗಳು ಇವೆ. ಮಳೆ ಮಾರುತವನ್ನು ಬದಲಾವಣೆ ಮಾಡಿ, ಮಳೆಯನ್ನು ತರಿಸುವ ಶಕ್ತಿ ಪಶ್ಚಿಮ ಘಟ್ಟಗಳಿಗೆ ಇದೆ. ಆದರೆ ಇಲ್ಲಿ 2 ಲಕ್ಷ ಎಕರೆ ಭೂಮಿಯ ಒತ್ತುವರಿಯಾಗಿದೆ. ಮೂವತ್ತು- ನಲವತ್ತು ಸಾವಿರ ಎಕರೆ ಭೂಮಿಯನ್ನು ಮರುವಶಪಡಿಸಿಕೊಂಡು ಸಂರಕ್ಷಿತ ತಾಣ ಅಂತಾ ಘೋಷಿಸಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಐದು ಹುಲಿಗಳು ಮೃತಪಟ್ಟಿದ್ದು ಬಹಳ ನೋವಾಗಿತ್ತು. ಸಿಎಂ ಕೂಡ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಅರಣ್ಯ ಭೂಮಿ ಕಡಿಮೆ ಇದೆ. ಹೀಗಾಗಿ ಈ ವ್ಯವಸ್ಥೆ ಬಗ್ಗೆಯೂ ಅಧ್ಯಯನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Related


You Might Also Like
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ
ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ...
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 47,848 ಮನೆಗಳು ಮಂಜೂರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303...
ಅರ್ಹರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಬೇಕು: ಅಧಿಕಾರಿಗಳಿಗೆ ಸಿಎಂ ತಾಕೀತು
ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ...
ಸಾರಿಗೆ ನೌಕರರ ವೇತನ ಹೆಚ್ಚಳ-38 ತಿಂಗಳ ಹಿಂಬಾಕಿ ಪ್ರಕರಣ ಸೆ.17ಕ್ಕೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ಭ್ರಷ್ಟ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದಿಂದ ನಾಗರೀಕ ಸನ್ಮಾನ
ಬೆಂಗಳೂರು: ಕಾರ್ಮಿಕ ಪರವಾನಿಗೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಗೆ ಸಿಕ್ಕಿದ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದ ವತಿಯಿಂದ ಸನ್ಮಾನ ಮಾಡಲು ಕಚೇರಿಗೆ ಹೋದಾಗ ಅಧಿಕಾರಿ...
KSRTC ಚಿಲ್ಲರೇ ಗಲಾಟೆ: ಸಂಸ್ಥೆ ನೌಕರನ ವಿರುದ್ಧ ಮೃಗದಂತೆ ವರ್ತಿಸಿ ರಾಜೀನಾಮೆ ಕೇಳಿದ ವಿಭಾಗೀಯ ನಿಯಂತ್ರಣಾಧಿಕಾರಿ
ನಾಲ್ಕೂ ಸಾರಿಗೆ ನಿಗಮಗಳ ನೌಕರರು ಹಾಗೂ ಸಂಘಟನೆಗಳ ಬಳಿ ನೋವು ತೋಡಿಕೊಂಡ ನೊಂದ ನೌಕರ ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್...
KSRTC: ಚಿಲ್ಲರೆಗಾಗಿ ಗಲಾಟೆ ಘಟನೆ- ಕಂಡಕ್ಟರ್ಗೆ ಬೈದು ರಾಜೀನಾಮೆ ಕೇಳಿದ ಡಿಸಿ ಅಶೋಕ್ ವಿರುದ್ಧ ದೂರು ದಾಖಲು
ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಚಿಲ್ಲರೆ ಹಣ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಈ...
ನೇಪಾಳ ಧಗಧಗ: ಅಧ್ಯಕ್ಷ, ಪ್ರಧಾನಿ, ಸಂಸತ್ಗೆ ದಾಳಿಯಿಟ್ಟು ಹಿಂಸಾಚಾರ
ಕಠ್ಮಂಡು: ಸಾಮಾಜಿಕ ಜಾಲತಾಣಗಳ ನಿರ್ಬಂಧ ಮಾಡಿದ್ದಕ್ಕೆ ಯುವಕರು ದಂಗೆ ಎದ್ದಿರುವ ಕಾರಣ ಭಾರತದ ನೆರೆಯ ರಾಷ್ಟ್ರ ನೇಪಾಳ ಹೊತ್ತಿ ಉರಿಯುತ್ತಿದೆ. ಸತತ 3ನೇ ದಿನವೂ ನೇಪಾಳ ಕುದಿಯುತ್ತಿದೆ....
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...