NEWSಕೃಷಿನಮ್ಮರಾಜ್ಯ

ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ (National Forest Martyrs Day) ಕಾರ್ಯಕ್ರಮದಲ್ಲಿ ಮಾತನಾಡಿದರು.

ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ 62 ಮಂದಿ ಹುತಾತ್ಮರಾಗಿದ್ದು,ಈ ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದರು.

ಇನ್ನು ಈಗ ಹವಾಮಾನ ಬದಲಾವಣೆ ದೊಡ್ಡ ಮಟ್ಟದ ಸಮಸ್ಯೆಯಾಗುತ್ತಿದೆ. ಏಕಾಏಕಿ ಮೇಘಸ್ಫೋಟ, ಅತಿಯಾದ ಮಳೆ ಬರುತ್ತಿದೆ. ಮನುಕುಲವೇ ನಾಶವಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಕರ್ನಾಟಕವೂ ಕೂಡ ಡೇಂಜರ್ ಝೋನ್‌ನಲ್ಲಿದೆ. ಭೂ ಕುಸಿತ ಸಂಭವಿಸುತ್ತಿದೆ. ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಇದಕ್ಕೆ ಪರಿಹಾರ ಎಂದರು.

ರಾಜ್ಯದಲ್ಲಿ ಸಂಪತ್ಭರಿತ ಅರಣ್ಯವಿದೆ. ಪಶ್ಚಿಮ ಘಟ್ಟದಲ್ಲಿ ವಿವಿಧ ಪ್ರಭೇದಗಳ ಜೀವ ವೈವಿಧ್ಯ ತಾಣಗಳು ಇವೆ. ಮಳೆ ಮಾರುತವನ್ನು ಬದಲಾವಣೆ ಮಾಡಿ, ಮಳೆಯನ್ನು ತರಿಸುವ ಶಕ್ತಿ ಪಶ್ಚಿಮ ಘಟ್ಟಗಳಿಗೆ ಇದೆ. ಆದರೆ ಇಲ್ಲಿ 2 ಲಕ್ಷ ಎಕರೆ ಭೂಮಿಯ ಒತ್ತುವರಿಯಾಗಿದೆ. ಮೂವತ್ತು- ನಲವತ್ತು ಸಾವಿರ ಎಕರೆ ಭೂಮಿಯನ್ನು ಮರುವಶಪಡಿಸಿಕೊಂಡು ಸಂರಕ್ಷಿತ ತಾಣ ಅಂತಾ ಘೋಷಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಐದು ಹುಲಿಗಳು ಮೃತಪಟ್ಟಿದ್ದು ಬಹಳ ನೋವಾಗಿತ್ತು. ಸಿಎಂ ಕೂಡ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಅರಣ್ಯ ಭೂಮಿ ಕಡಿಮೆ ಇದೆ. ಹೀಗಾಗಿ ಈ ವ್ಯವಸ್ಥೆ ಬಗ್ಗೆಯೂ ಅಧ್ಯಯನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...