NEWSಕೃಷಿನಮ್ಮಜಿಲ್ಲೆ

ಸುಳ್ಳು‌ ದಾಖಲೆಗಳ ಸೃಷ್ಟಿಸಿ ಜಮೀನು ಮಾರಾಟ : ಐವರ ವಿರುದ್ಧ ಪ್ರಕರಣ‌ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು: ಪಟ್ಟಣದ ಹುಲ್ಲೆಪುರದ ಸ.ನಂ 632/2 ರ ಜಮೀನಿಗೆ ಸುಳ್ಳು‌ ದಾಖಲಾತಿ ಸೃಷ್ಟಿಸಿ ಮಾರಾಟ ಮಾಡಿರುವ ಆರೋಪದ ಮೇರೆಗೆ ಐವರ ವಿರುದ್ದ ಹನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಪಟ್ಟಣದ ಹೊರ ವಲಯದ ಹುಲ್ಲೆಪುರದ ಸರ್ವೆ ನಂಬರ್ 632.2ರ ಜಮೀನಿನ ಮಾಲೀಕ ಆಗಾಗ್ಗೆ ಬಂದು ವ್ಯವಸಾಯ ಮಾಡಿಸಿ ನಂತರ ತಮಿಳುನಾಡಿಗೆ ಹೊಗುತ್ತಿರುತ್ತಾರೆ. ಇದರ ದುರುಪಯೋಗ ಮಾಡಿಕೊಂಡು ಕೆಲ ಆರೋಪಿಗಳು ಸಮಾನ ಉದ್ದೇಶದಿಂದ ಮೋಸಮಾಡಬೇಕೆಂದು ಹನೂರು ಉಪನೋಂದಣಿ ಅಧಿಕಾರಿ ಕಚೇರಿಯಲ್ಲಿ ಸುಳ್ಳು ಪತ್ರವನ್ನು ಸೃಷ್ಟಿಸಿಕೊಂಡು ನಂತರ ಮಾರಾಟ ಮಾಡಲು ಮುಂದಾಗಿದ್ದಾರೆ. ಈ ವಿಷಯ ತಿಳಿದ ಪಿರ್ಯಾದಿಯು ಕೊಳ್ಳೇಗಾಲ ನ್ಯಾಯಾಲಯಕ್ಕೆ ಧಾವೆ ಹೋಡಿದ್ದಾರೆ.

ಈ ಸಂಬಂಧ ಆರೋಪಿಗಳಿಗೆ ನೋಟಿಸ್ ಸಹ ಜಾರಿಮಾಡಿದ್ದು ಆರೋಪಿಗಳು ಯಾವುದೇ ಪ್ರತ್ಯುತ್ತರ ನೀಡಿಲ್ಲ. ಆರೋಪಿಗಳು ಕಾನೂನು ಬದ್ಧ ಹಕ್ಕಿಗೆ ಚ್ಯುತಿ ಉಂಟು ಮಾಡಿರುವುದಲ್ಲದೆ ಕಾನೂನು ಬಾಹಿರವಾಗಿ ಜಮೀನನ್ನು ಮಾರಾಟ ಮಾಡಿದ್ದಾರೆ ಎಂದು‌ 1 ರಿಂದ 5ರವರೆಗಿನ ಆರೋಪಿಗಳ ವಿರುದ್ದ ಹನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂತಹ ಪ್ರಕರಣಗಳು‌ ಈದೀಗ ತಾನೇ ಬೆಳಕಿಗೆ ಬಂದಿದೆ ಹನೂರಲ್ಲಿ ಈ ತರಹದ ಕರ್ಮಕಾಂಡ ಎಗ್ಗಿಲ್ಲದೆ ನಿತ್ಯ ನೆಡೆಯುತ್ತಿದೆ. ಜಮೀನುಗಳ ಮೂಲ ಮಾಲೀಕರು ಇಲ್ಲದೆ ಇರುವ ವಿಷಯವನ್ನು ತಿಳಿಯುವಂತಹ ಮಧ್ಯವರ್ತಿಗಳು‌ ಸಂಬಂಧ ಪಟ್ಟ ಕಚೇರಿಯಲ್ಲಿ‌ ಸಂಪರ್ಕ ಇಟ್ಟುಕೂಂಡು ತಮ್ಮ ಅಕ್ರಮಕೂಟದ ಮೂಲಕ ಕಾನೂನಿನ ವಿರುದ್ಧದ ಚಟುವಟಿಕೆ ಮುಂದಾಗುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಪೊಲೀಸರು ಈ ಪ್ರಕರಣದ ಮೂಲಕ ಇದರ ಹಿಂದೆ ಇರುವ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ಯುವಕರು ಒತ್ತಾಯ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...