- ನಿರ್ಲಕ್ಷ್ಯದ ಚಾಲನೆ ಆರೋಪ ಮಾಡಿದ್ದ ಸಾರಿಗೆ ಸಂಸ್ಥೆ
ಬೆಂಗಳೂರು: ರಸ್ತೆ ಅಪಘಾತ ಪ್ರಕರಣದಲ್ಲಿ ಚಾಲಕನ ನಿರ್ಲಕ್ಷ್ಯ ಬಗ್ಗೆ ಎರಡು ಪ್ರತ್ಯೇಕ ವಿಚಾರಣಾ ಪ್ರಕ್ರಿಯೆಯಲ್ಲಿ ತದ್ವಿರುದ್ದ ನಿಲುವು ತೆಗೆದು ಕೊಂಡ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಕಾರ್ಯ ವೈಖರಿಯನ್ನು ಆಕ್ಷೇಪಿಸಿರುವ ಹೈಕೋರ್ಟ್, ಸಾರಿಗೆ ನಿಗಮವು ಏಕರೂಪ ನಿಲುವು ತೆಗೆದು ಕೊಳ್ಳಬೇಕು ಎಂದು ತೀಕ್ಷ್ಯವಾಗಿ ಹೇಳಿದೆ.
ನಿರ್ಲಕ್ಷದ ಚಾಲನೆಯಿಂದ ಅಪಘಾತ ಉಂಟು ಮಾಡಿದ ಆರೋಪದ ಮೇಲೆ ಸೇವೆಯಿಂದ ವಜಾಗೊಳಿಸಿದ ಬಸ್ ಚಾಲಕ ಹುಬ್ಬಳ್ಳಿಯ ಹುಸೇನ್ ಸಾಬ್ ಅವರನ್ನು ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಆದೇಶಿಸಿದ್ದ ಕಾರ್ಮಿಕ ನ್ಯಾಯಾಲಯದ ಆದೇಶ ರದ್ದು ಕೋರಿ NWKRTC ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಈ ಆದೇಶ ಮಾಡಿದೆ.
ಅಲ್ಲದೆ, ಕಾರ್ಮಿಕ ನ್ಯಾಯಾಲಯದ ಆದೇಶ ಎತ್ತಿಹಿಡಿದಿರುವ ನ್ಯಾಯಪೀಠ, ಹುಸೇನ್ ಸಾಬ್ ಅವರನ್ನು ಸೇವೆಗೆ ಮರು ನಿಯೋಜಿಸುವಂತೆ ಸೂಚಿಸಿದೆ.
ಪ್ರಕರಣದ ವಿವರ: ಹುಸೇನ್ ಸಾಬ್ ಹುಬ್ಬಳ್ಳಿಯ2013ರ ಮಾ.24ರಂದು ಬೆಳಗಾವಿ ಮತ್ತು ಹುಬ್ಬಳ್ಳಿ ನಡುವೆ ಬಸ್ ಚಾಲನೆ ಮಾಡುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿ ಮೋಟಾರ್ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಆ ಕುರಿತು ಕ್ರಿಮಿನಲ್ ಕೇಸು ದಾಖಲಾಗಿತ್ತು. ಇತ್ತ ನಿಗಮ ಕೂಡ ಚಾಲಕನ ವಿರುದ್ಧ ಶಿಸ್ತು ಕ್ರಮ ಆರಂಭಿಸಿತ್ತು. ಜತೆಗೆ ಷೋಕಾಸ್ ನೋಟಿಸ್ ನೀಡಿ ವಿಚಾರಣೆ ನಡೆಸಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಆ ಕ್ರಮವನ್ನು ಪ್ರಶ್ನಿಸಿ ಚಾಲಕ ಕಾರ್ಮಿಕ ನ್ಯಾಯಾಲಯದ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಕಾರ್ಮಿಕರನ್ನು ಸೇವೆಗೆ ಮರು ನಿಯೋಜಿಸಬೇಕು ಎಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಾರಿಗೆ ನಿಮಗೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ವೇಳೆ ಹೈಕೋರ್ಟ್, ಈ ಅಪಘಾತದಲ್ಲಿ ಮೃತನ ಕುಟುಂಬದವರು ಪರಿಹಾರ ಕೋರಿಸಲ್ಲಿಸಿರುವ ಅರ್ಜಿ ವಿಚಾರಣೆಯಲ್ಲಿ ಸಾರಿಗೆ ನಿಗಮ ಯಾವ ನಿಲುವು ತೆಗೆದುಕೊಂಡಿತ್ತು ಎಂಬ ಬಗ್ಗೆ ತಿಳಿಯಲು ಬಯಸಿತು. ಕೋರ್ಟ್ ನಿರ್ದೇಶನದಂತೆ ಕ್ಷೇಮು ಅರ್ಜಿ ವಿಚಾರಣೆ ಪ್ರಕ್ರಿಯೆ ವಿವರಗಳನ್ನು ಸಲ್ಲಿಸಲಾಗಿತ್ತು.
ಮೃತನ ಕುಟುಂಬದವರು ಪರಿಹಾರ ಕೋರಿದ ಕ್ಲಮು ಅರ್ಜಿಯಲ್ಲಿ, ಸಾರಿಗೆ ನಿಗಮ ತನ್ನ ಚಾಲಕನ ಕ್ರಮವನ್ನು ಸಮರ್ಥಿಸಿಕೊಂಡಿತ್ತು. ಚಾಲಕ ವಾಹನವನ್ನು ಸರಿಯಾಗಿಯೇ ಚಲಾಯಿಸುತ್ತಿದ್ದ. ಅಪಘಾತದಲ್ಲಿ ಆತನ ನಿರ್ಲಕ್ಷ್ಯವಿರಲಿಲ್ಲ. ಮೃತನ ನಿರ್ಲಕ್ಷ್ಯದಿಂದ ಅಪಘಾತ ನಡೆದಿದೆ ಎಂದು ಹೇಳಿತ್ತು.
ಅದಕ್ಕೆ ಅಚ್ಚರಿ ವ್ಯಕ್ತಪಡಿಸಿದ ಹೈಕೋರ್ಟ್, ಕ್ಲಮು ಅರ್ಜಿಯಲ್ಲಿ ಚಾಲಕನ ನಿರ್ಲಕ್ಷ್ಯವಿಲ್ಲ ಎಂದು ಸಮರ್ಥಿಸಿಕೊಂಡರೂ ತಾನೇ ಆತನನ್ನು ಸೇವೆಯಿಂದ ವಜಾ ಮಾಡಿರುವುದು ಏತಕ್ಕೆ ಎಂದು ಸಾರಿಗೆ ನಿಗಮದ ಕ್ರಮವನ್ನು ತರಾಟೆಗೆ ತೆಗೆದುಕೊಂಡಿತು.
ಒಂದೆಡೆ ಅಪಘಾತದಲ್ಲಿ ಆತನ ನಿರ್ಲಕ್ಷ್ಯ ಎಲ್ಲ ಎಂದು ಚಾಲಕನ ಕ್ರಮ ಸಮರ್ಥಿಸಿಕೊಂಡ ನಿಗಮ, ಮತ್ತೊಂದು ಕಡೆ ವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಚಾಲಕನ ದುರ್ನಡತೆ ವಿರುದ್ಧ ಶಿಸ್ತು ಕ್ರಮ ಆರಂಭಿಸಿದೆ. ಇದು ಹೇಗೆ ಸಾಧ್ಯ? ಒಂದೇ ನಿಗಮ ಒಂದೇ ಘಟನೆ ಬಗ್ಗೆ ಎರಡು ನಿಲುವು ಕೈಗೊಳ್ಳುವುದು ಸರಿಯೇ ಎಂದು ಖಾರವಾಗಿ ಪ್ರಶ್ನಿಸಿದೆ.
ನಿಗಮ ಸರ್ಕಾರದ ಅಧೀನ ಸಂಸ್ಥೆ ಮತ್ತು ಅದು ಇತರೆ ಸಂಸ್ಥೆಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸಬೇಕು. ಸಾರಿಗೆ ನಿಗಮ ತೆಗೆದುಕೊಳ್ಳಬೇಕಾದ ನಿಲುವು ಏಕರೂಪವಾಗಿರ ಬೇಕು. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿಗಮಕ್ಕೆ ಯಾವಾಗಲೂ ಮುಕ್ತವಾಗಿರುತ್ತದೆ.
ಆದರೆ ಅದೇ ಸಮಯದಲ್ಲಿ ನಿಗಮವು ಮೋಟಾರು ವಾಹನ ಕ್ರೈಮ್ ಅರ್ಜಿಯಲ್ಲಿ ನ್ಯಾಯಯುತವಾಗಿ ಮತ್ತು ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೇ ಅದೇ ಸಂಸ್ಥೆ ವ್ಯತಿರಿಕ್ತ ನಿಲುವು ಕೈಗೊಂಡರೆ ಏನು ಮಾಡುವುದು. ಇಂಥ ನಿರ್ಧಾರ ಕೈಗೊಳ್ಳುವ ನಿಗಮದ ಉದ್ದೇಶದ ದುರುದ್ದೇಶದಿಂದ ಕೂಡಿದೆ ಎನಿಸಲಿದ್ದು, ಚಾಲಕನ ವಿರುದ್ಧ ಶಿಸ್ತು ಕ್ರಮ ಜರುಗಿಸಿರುವುದನ್ನು ಒಪ್ಪಲಾಗದು. ಹಾಗಾಗಿ ಕಾರ್ಮಿಕ ನ್ಯಾಯಾಲಯದ ಆದೇಶ ಸರಿಯಾಗಿಯೇ ಇದೆ ಎಂದು ತಿಳಿಸಿದ ಹೈಕೋರ್ಟ್, ನಿಗಮದ ಮೇಲ್ಮನವಿ ವಜಾಗೊಳಿಸಿತು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...