ಚಿಕಿತ್ಸೆಗಾಗಿ ಸ್ಯಾಂಡಲ್ವುಡ್ ನಿರ್ದೇಶಕ ಎಸ್. ಮುರಳಿ ಮೋಹನ್ ಪರದಾಟ: ನೆರವಿಗಾಗಿ ಬಹಿರಂಗ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ಬೆಳವಣಿಗೆಗೆ ಹಲವರ ಕೊಡುಗೆ ಇದೆ. ಅಂಥವರ ಸಾಲಿನಲ್ಲಿ ನಿಲ್ಲಲು ಯೋಗ್ಯರಾಗಿರುವ ಡಾ. ಶಿವರಾಜ್ ಕುಮಾರ್ ನಟನೆಯ ‘ಸಂತ’, ಉಪೇಂದ್ರ ನಟನೆಯ ‘ನಾಗರಹಾವು’ ಸಿನಿಮಾಗಳ ನಿರ್ದೇಶಕ ಎಸ್. ಮುರಳಿ ಮೋಹನ್ ಅವರು ಈಗ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆಗಾಗಿ ಒಂದು ದೊಡ್ಡ ಮೊತ್ತದ ಹಣಕಾಸಿನ ಅಗತ್ಯವಿದ್ದು, ನೆರವಿಗಾಗಿ ಮನವಿ ಮಾಡಿದ್ದಾರೆ.
ನಟ, ನಿರ್ದೇಶಕ ಉಪೇಂದ್ರ ಅವರ ಆಪ್ತರೂ ಆಗಿರುವ ಎಸ್.ಮುರಳಿ ಮೋಹನ್ ಸಿನಿಮಾ ನಿರ್ದೇಶನದ ಜತೆಗೆ ಹಲವಾರು ಸಿನಿಮಾಗಳಿಗೆ ಕತೆಗಾರ, ಸಂಭಾಷಣೆಕಾರ ಮತ್ತು ಗೀತ ರಚನೆಕಾರರಾಗಿಯೂ ಕೆಲಸ ಮಾಡಿದ್ದಾರೆ. ಈಗ ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿದ್ದು, ಈಗ ಅವರಿಗೆ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳ ಅಗತ್ಯವಿದೆ.
ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ನಿರ್ದೇಶಕ ಎಸ್.ಮುರಳಿ ಮೋಹನ್, ‘ನಾನು ಕಳೆದ 36 ವರ್ಷಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ನಿರ್ದೇಶಕನಾಗಿ, ಸಂಭಾಷಣೆಕಾರನಾಗಿ, ಗೀತ ರಚನೆಕಾರನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ 2018 ರಿಂದಲೂ ಆರೋಗ್ಯ ಸಮಸ್ಯೆ ಇದೆ.
ಮೂತ್ರಪಿಂಡ ವೈಫಲ್ಯ ಉಂಟಾಗಿದ್ದು, ವಾರಕ್ಕೆ ಮೂರು ದಿನ ಡಯಾಲಿಸಿಸ್ ಮಾಡಿಸುತ್ತಿದ್ದೇನೆ. 2020ರಲ್ಲಿ ನಾನು ಮೂತ್ರಪಿಂಡಕ್ಕಾಗಿ ಅಂಗಾಂಗ ಕಸಿ ಕಾರ್ಯಕ್ರಮ ಜೀವನಸಾರ್ಥಕತೆಯಲ್ಲಿ ನೋಂದಣಿ ಮಾಡಿಸಿದ್ದೇನೆ. ಈಗ ನನಗೆ ಮೂತ್ರಪಿಂಡ ಕಸಿ ಮಾಡಿಸುವ ಸಮಯ ಬಂದಿದೆ. ಬೆಂಗಳೂರಿನ ಜೆ.ಸಿ. ನಗರದಲ್ಲಿರುವ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಈ ಶಸ್ತ್ರಚಿಕಿತ್ಸೆಗೆ 25 ಲಕ್ಷ ರೂ.ಗಳ ಅವಶ್ಯವಿದೆ. ನಾನು ಈಗಾಗಲೇ ಹೃದಯ ಶಸ್ತ್ರಚಿಕಿತ್ಸೆ ಸೇರಿ ಇತರೆ ಚಿಕಿತ್ಸೆಗಳು ಮಾಡಿಸಿಕೊಂಡಿರುವ ಕಾರಣ ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇನೆ. ತಾವುಗಳು ದಯಮಾಡಿ ನನಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಧನ ಸಹಾಯ ಮಾಡಬೇಕಾಗಿ ತಮ್ಮಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ಬರೆದು ತಮ್ಮ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ್ದಾರೆ.
ಮುರಳಿ ಮೋಹನ್ ಅವರು ಕನ್ನಡದ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ನಟ ಉಪೇಂದ್ರ ಅವರ ಆಪ್ತರಾಗಿದ್ದ ಮುರಳಿ ಮೋಹನ್, ‘ಓಂ’ ಸೇರಿದಂತೆ ಆರಂಭದ ಅವರ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ, ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದಾರೆ. ಈಗ ಗಂಭೀರ ಆರೋಗ್ಯ ಸಮಸ್ಯೆಯಿಂದ ಮುರಳಿ ಬಳಲುತ್ತಿದ್ದು ಚಿಕಿತ್ಸೆಗಾಗಿ ನೆರವಿನ ಬಾಗಿಲು ಕಾಯುತ್ತಿದ್ದಾರೆ.
ಮುರಳಿ ಅವರ ಚಿಕಿತ್ಸೆಗೆ ನೆರವಾಗುವವರು ಈ ಕೆಳಗೆ ಕೊಟ್ಟಿರುವ ಬ್ಯಾಂಕ್ ಖಾತೆ ಅಥವಾ ಸ್ಕಾನರ್ ಮೂಲಕ ಹಣ ವರ್ಗಾಯಿಸಬಹುದು
UCO Bank .. (KR Road Branch)
Name: Murali S
Ac number: 1641011025178
IFSC: UCBA0001641
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...