NEWSಕೃಷಿದೇಶ-ವಿದೇಶನಮ್ಮರಾಜ್ಯ

ಫೆ.13ರಂದು ರೈತರಿಗೆ ನೀಡಿದ ಭರವಸೆ ಹುಸಿಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಚಲೋ: ಸಂಯುಕ್ತ ಕಿಸಾನ್ ಮೋರ್ಚಾ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರೈತರಿಗೆ ನೀಡಿದ ಭರವಸೆ ಹುಸಿಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರುವರಿ 13ರಂದು ದೆಹಲಿ ಚಲೋ ಆಂದೋಲನವನ್ನು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ದೇಶದ ವಿವಿಧ ರಾಜ್ಯಗಳ ನೂರಾರು ರೈತ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಇಂದು (ಜ.21) ದೆಹಲಿಯ ರಖಪ್‌ಚಂದ್ ಗುರುದ್ವಾರ ಸಭಾಂಗಣದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಆಯೋಜಿಸಿದ್ದ ರಾಷ್ಟ್ರೀಯ ರೈತ ಮುಖಂಡರ ಸಭೆಯಲ್ಲಿ ರೈತರ ದೆಹಲಿ ಚಲೋ ಆಂದೋಲನ ನಡೆಸಲು ತೀರ್ಮಾನಿಸಲಾಯಿತು ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಬೇಕು. ಡಾ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ದೇಶದ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಬೇಕು. ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರಬರಬೇಕು.

ಇವುಗಳಲ್ಲಿ ಪ್ರಮುಖವಾಗಿ ದೇಶಾದ್ಯಂತ 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10 ಸಾವಿರ ಪಿಂಚಣಿ ಯೋಜನೆ ಬರಬೇಕು ಎಂಬ ಒತ್ತಾಯಗಳ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರ ಕೈಗೊಳ್ಳದಿದ್ದರೆ ಫೆಬ್ರವರಿ 13ರಂದು ಎಲ್ಲ ರಾಜ್ಯಗಳಿಂದ ಲಕ್ಷಾಂತರ ರೈತರು ರ‍್ಯಾಲಿ ಮೂಲಕ ದೆಹಲಿ ಚಲೋ ಆಂದೋಲನ ನಡೆಸಲಿದ್ದೇವೆ ಎಂದರು.

ಫೆ.13ರಂದು ದೇಶದ ಎಲ್ಲ ರೈತ ಸಂಘಟನೆಗಳ ಮಹಾಸಂಗಮ ರ‍್ಯಾಲಿ ನಡೆಯಲಿದ್ದು, ಈಗಾಗಲೇ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶದ ವಿವಿಧ ರಾಜ್ಯಗಳಲ್ಲಿ 14 ಕಿಸಾನ್ ಮಹಾ ಪಂಚಾಯತ್ ಸಮಾವೇಶಗಳನ್ನು ನಡೆಸಿ ರೈತರ ಜಾಗೃತಿ ಪಡಿಸಲಾಗಿದೆ ಎಂದು ವಿವರಿಸಿದರು.

ಎಸ್.ಕೆ.ಎಂ (ರಾಜಕೀಯತರ ಮುಖಂಡರಾದ ಪಂಜಾಬ್‌ನ ಜಗಜಿತ್ ಸಿಂಗ್ ದಲೈವಾಲ್, ಮಧ್ಯಪ್ರದೇಶದ ಶಿವಕುಮಾರ್ ಕಕ್ಕ, ಹರಿಯಾಣದ ಅಭಿಮನ್ಯುಕೊಹರ್, ಬಿಹಾರದ ಅರುಣ್ ಸಿನ್ಹಾ, ಉತ್ತರ ಪ್ರದೇಶದ ಹರ್ಪಲ್ ಬಿಲಾರಿ, ಲಕ್ವೀನ್ದಂದರ್ ಸಿಂಗ್, ಜರ್ರನಲ್ ಸಿಂಗ್ , ಶಿರಸಾ ಸಿಂಗ್, ಇನ್ನು ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ