NEWSನಮ್ಮಜಿಲ್ಲೆನಮ್ಮರಾಜ್ಯ

ಎಎಪಿಯಿಂದ ಸೀರೆ ಕುಚ್ಚು ತರಬೇತಿ : ಪ್ರಯೋಜನ ಪಡೆದ ನೂರಾರು ಮಹಿಳೆಯರು

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ರಾಮರಾಜ್ಯ ನಿರ್ಮಾಣ ಪರಿಕಲ್ಪನೆಯಲ್ಲಿ ಮಹಿಳೆಯ ಸ್ವಾವಲಂಬನೆ ಮುಖ್ಯವಾಗಿದ್ದು, ಆಮ್ ಆದ್ಮಿ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಸೀರೆ ಕುಚ್ಚು ಹಾಕುವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶಾದ್ಯಂತ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನ ಸಂಭ್ರಮ ಇರುವ ಸಂದರ್ಭದಲ್ಲೇ, ಆಮ್ ಆದ್ಮಿ ಪಕ್ಷ ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ನಗರದ ಆಮ್ ಆದ್ಮಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಇಂದು ಒಂದು ದಿನದ ಸೀರೆ ಕುಚ್ಚು ಹಾಕುವ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ರಾಕೇಶ್ ಅವರ ನೇತೃತ್ವದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ ನಡೆದಿದ್ದು, ನೂರಾರು ಮಹಿಳೆಯರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು.

ಉದ್ಯೋಗಕ್ಕೆ ಅಗತ್ಯ ಕೌಶಲ್ಯಗಳ ಅಭಿವೃದ್ಧಿಪಡಿಸಿ ಹೇಗೆ ಹಣ ಸಂಪಾದನೆ ಮಾಡಿಕೊಳ್ಳಬಹುದೆಂದು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು. ಇದು ಗೃಹಿಣಿಯರಿಗೆ, ವಿದ್ಯಾರ್ಥಿನಿಯರಿಗೆ ಸಂಪಾದನೆಗೆ ಸಂಪಾದನೆಯ ಮಾರ್ಗವಾಗಲಿದ್ದು, ಆರ್ಥಿಕ ಸ್ವಾವಂಬನೆ ಹೊಂದಬಹುದಾಗಿದೆ.

ಮಹಿಳೆಯರಿಗೆ ಎಲ್ಲ ರಂಗದಲ್ಲಿ ಪ್ರಾತಿನಿಧ್ಯ ಸಿಗಬೇಕು ಎನ್ನುವುದು ಆಮ್ ಆದ್ಮಿ ಪಕ್ಷದ ಧ್ಯೇಯವಾಗಿದ್ದು, ಅದಕ್ಕೆ ತಕ್ಕಂತೆ ಮಹಿಳಾ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ದೆಹಲಿ, ಪಂಜಾಬ್‌ನಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಆಮ್ ಆದ್ಮಿ ಪಕ್ಷ, ಈಗ ರಾಜ್ಯದಲ್ಲೂ ಅದೇ ರೀತಿಯ ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಮಹಿಳಾ ಸಂಘಟನೆ, ಸ್ವಾವಲಂಬನೆಗೆ ಸಹಾಯ ಮಾಡುತ್ತಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ