ಏ.24ರಿಂದ ಮೇ8ರವರೆಗೆ ದ್ವಿತೀಯ ಪಿಯು ಪರೀಕ್ಷೆ-2: ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ವಿದ್ಯಾರ್ಥಿಗಳಿಗೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏ.24 ರಿಂದ ಮೇ 8ರವರೆಗೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಕರೆದುಕೊಂಡು ಹೋಗಬೇಕು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 24.04.2005 ರಿಂದ 08.05.2025 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ 02 ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವರ ಕಾಲೇಜು ಹೊರತಾಗಿ ಇತರೆ ಕಾಲೇಜಿನ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಬೇಕು ಎಂದು ಕೋರಲಾಗಿದೆ.
ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮೇ 8ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳ ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಬೇಕು. ಅಲ್ಲದೆ ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ ನಿಲುಗಡೆಯನ್ನು ನೀಡಲು ಚಾಲನಾ ನಿಬ್ಬಂದಿಗಳಿಗೆ ತಿಳಿಸಬೇಕು. ಇನ್ನು ಚಾಲನಾ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುಕ್ತವಾಗಿ ವರ್ತಿಸಬೇಕು.
ಈ ಅಂಶಗಳ ಬಗ್ಗೆ ಎಲ್ಲ ಚಾಲನಾ ಸಿಬ್ಬಂಬಗಳಿಗೆ ಸೂಕ್ತ ಮಾಹಿತಿ ಒದಗಿಸಲು ಮತ್ತು ಘಟಕಗಳ/ಎಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಘಟಕ ವ್ಯವಸ್ಥಾಪಕರು ನೋಡಿಕೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ನೀಡಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...