NEWSಮೈಸೂರುಸಿನಿಪಥ

ಮೈಸೂರು ದಸರಾ ಚಲನ ಚಿತ್ರೋತ್ಸವಕ್ಕೆ ಕಿರುಚಿತ್ರಗಳ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಚಲನಚಿತ್ರೋತ್ಸವ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಪ್ರವಾಸೋದ್ಯಮ ಇಲಾಖೆಯ ಕೆಎಸ್‌ಟಿಡಿ ಹಾಲ್‌ನಲ್ಲಿ ಕಿರು ಚಿತ್ರ ಸ್ಪರ್ಧೆಗೆ ಬಂದಂತಹ 65 ಕಿರು ಚಿತ್ರಗಳನ್ನು ಚಲನಚಿತ್ರ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರು ಉತ್ತಮ ಕಿರು ಚಿತ್ರಗಳ ಆಯ್ಕೆ ಸಂಬಂಧ ವೀಕ್ಷಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ ಸೇರಿದಂತೆ ಹಲವು ವಿಶೇಷತೆಗಳನ್ನು ನೀಡಲು ಚಲನ ಚಿತ್ರೋತ್ಸವ ಉಪ ಸಮಿತಿ ಸಿದ್ಧತೆ ನಡೆಸಿದ್ದು ತೀರ್ಪುಗಾರರಿಂದ ಆಯ್ಕೆಯಾದ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಹತ್ತು ಕಿರು ಚಿತ್ರಗಳನ್ನು ಐನಾಕ್ಸ್ ನಲ್ಲಿ ಪ್ರದರ್ಶನ ಮಾಡಲಾಗುವುದು.

ಸ್ಪರ್ಧೆಗೆ ಬಂದಂತಹ ಕಿರುಚಿತ್ರಗಳ ಆಯ್ಕೆ ಸಂಬಂಧ ತೀರ್ಪುಗಾರರಾಗಿ ಕಾವಾದ ಶಿಲ್ಪ ಕಲಾ ವಿಭಾಗದ ಉಪನ್ಯಾಸಕ ವೀರಣ್ಣ ಮಾ ಅರ್ಕಸಾಲಿ, ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಹೇಮಚಂದ್ರ, ರಂಗಭೂಮಿ ಕಲಾವಿದ ಮೈಮ್ ರಮೇಶ್, ಪತ್ರಕರ್ತ ಗುರುರಾಜ ಕೂಡ್ಲಿಗಿ ಹಾಗೂ ಸಿನಿಮಾ ರಂಗದ ಛಾಯಾಗ್ರಾಹಕ ನಿರೀಕ್ಷಿತ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವ ಉಪ ವಿಶೇಷಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ, ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಕೆಐಡಿಬಿ ಭೂ ಸ್ವಾಧೀನಾಧಿಕಾರಿ ಪ್ರಿಯಾ ದರ್ಶಿನಿ, ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಉಪ ನಿರ್ದೇಶಕ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹರೀಶ್.ಟಿ.ಕೆ. ಹಾಗೂ ಶ್ರೇಯಸ್ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ