NEWSದೇಶ-ವಿದೇಶರಾಜಕೀಯ

ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಒಂದು ವಾರ ಬಾಕಿ ಇರುವಾಗಲೇ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷದ ಏಳು ಶಾಸಕರು ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ.

ಏಳು ಹಾಲಿ ಶಾಸಕರಲ್ಲಿ ಆರು ಮಂದಿಗೆ ಈ ಬಾರಿ ಪಕ್ಷವು ಟಿಕೆಟ್ ನಿರಾಕರಿಸಿತ್ತು ಮತ್ತು ಪಕ್ಷವು ಆ ಸ್ಥಾನಗಳಿಂದ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಈ ಎಲ್ಲದರಿಂದ ಬೇಸರಗೊಂಡು ಪಕ್ಷ ತೊರೆದಿರುವುದಾಗಿ ತಿಳಿದು ಬಂದಿದೆ.

ಇನ್ನು ಪಾಲಂ ಶಾಸಕಿ ಭಾವನಾ ಗೌರ್ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಬರೆದ ಪತ್ರದಲ್ಲಿ, ತಮ್ಮ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡ ಕಾರಣ ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್ ಕೂಡಾ ಅವರ ಮಾತಿಗೆ ಧ್ವನಿಗೂಡಿಸಿದ್ದು, ಚುನಾವಣೆಗೆ ಒಂದು ವಾರ ಇರುವಾಗ ನಿಮ್ಮ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದರಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಭಾವನಾ ಗೌರ್ ಮತ್ತು ಮದನ್ ಲಾಲ್ ಇಬ್ಬರು ಪತ್ರ ಬರೆದಿದ್ದಾರೆ.

ತ್ರಿಲೋಕ್‌ಪುರಿ ಶಾಸಕ ರೋಹಿತ್ ಮೆಹ್ರೌಲಿಯಾ, ಜನಕ್‌ಪುರಿ ಶಾಸಕ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್ ಮತ್ತು ಮೆಹ್ರೌಲಿ ಶಾಸಕ ನರೇಶ್ ಯಾದವ್ ಕೂಡ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೊರೆದಿದ್ದಾರೆ. ಆದರ್ಶ ನಗರದ ಪವನ್ ಶರ್ಮಾ ಮತ್ತು ಬಿಜ್ವಾಸನ್‌ನ ಬಿ.ಎಸ್.ಜೂನ್ ಪಕ್ಷ ತೊರೆದ ಇತರ ಇಬ್ಬರು ಎಎಪಿ ಶಾಸಕರಾಗಿದ್ದಾರೆ.

ಈ ಎಲ್ಲ ಶಾಸಕರಿಗೆ 2025 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎಎಪಿ ಪಕ್ಷದಿಂದ ಟಿಕೆಟ್ ನೀಡಿಲ್ಲ. ದೆಹಲಿ ಚುನಾವಣೆಗೆ ಎಎಪಿ ಅಭ್ಯರ್ಥಿಗಳ ಪಟ್ಟಿಯ ಪ್ರಕಾರ, ಪಕ್ಷವು ಆದರ್ಶ ನಗರದಿಂದ ಮುಖೇಶ್ ಗೋಯೆಲ್, ಜನಕ್‌ ಪುರಿಯಿಂದ ಪ್ರವೀಣ್ ಕುಮಾರ್, ಬಿಜಿವಾಸನ್‌ನಿಂದ ಸುರೇಂದ್ರ ಭಾರದ್ವಾಜ್, ಪಾಲಂ ನಿಂದ ಜೋಗಿಂದರ್ ಸೋಲಂಕಿ, ಕಸ್ತೂರ್ಬಾ ನಗರದಿಂದ ರಮೇಶ್ ಪೆಹ್ಲ್ವಾನ್, ಮೆಹ್ರೌಲಿಯಿಂದ ನರೇಶ್ ಯಾದವ್ ಮತ್ತು ತ್ರಿಲೋಕ್ಪುರಿಯಿಂದ ಅಂಜನಾ ಪರ್ಚಾ ಅವರನ್ನು ಕಣಕ್ಕಿಳಿಸಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ