CrimeNEWSನಮ್ಮರಾಜ್ಯ

ಲೈಂಗಿಕ ದೌರ್ಜನ್ಯ ಆರೋಪ: ಬಿಎಸ್‌ವೈ ವಶಕ್ಕೆ ಪಡೆಯುವ ಬಗ್ಗೆ ತನಿಖೆ ನಂತರ ನಿರ್ಧಾರ – ಪರಮೇಶ್ವರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬಿಎಸ್‌ವೈ ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆ ನಂತರ ನಿರ್ಧಾರ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.

ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಜತೆಗೆ ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ ಎಂದರು.

ಇನ್ನು ಈ ಬಗ್ಗೆ ಡಿಸಿಎಂ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ. ಆಕೆ ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಇನ್ನು ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿರುವುದರಿಂದ ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದರು.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಉಮಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಈ ಬಗ್ಗೆ ನಿಮಗೆ ತಿಳಿಸಲಿದ್ದಾರೆ ಎಂದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ