NEWSನಮ್ಮಜಿಲ್ಲೆಸಂಸ್ಕೃತಿ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ – ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು ವಿಜಯಪಥ   ಪ್ರಕಟ ಮಾಡುತ್ತಿದೆ. ಇನ್ನು ಬೆಂಗಳೂರಿನ ಇಸ್ಕಾನ್‌ ದೇವಾಲಯ ಸೇರಿದಂತೆ ಹಲವೆಡೆ ಕೃಷ್ಣ ಜನ್ಮಾಷ್ಟಮಿ ವಿಶೇಷ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ.

ಹೌದು! ರಾಜ್ಯವಷ್ಟೇ ಅಲ್ಲ ಶ್ರೀಕೃಷ್ಣ ಜನ್ಮಾಷ್ಟಮಿಯಾದ ಇಂದು ದೇಶ – ವಿದೇಶಗಳಲ್ಲೂ ಅತ್ಯಂತ ಭಕ್ತಿ ಭಾವ ಮತ್ತು ವಿಜೃಂಭಣೆಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಶ್ರೀಕೃಷ್ಣನು ವಿಷ್ಣುವಿನ 8ನೇ ಅವತಾರವಾಗಿದ್ದು, ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಜನಿಸಿದರು ಎಂದು ಪ್ರತೀತಿ. ಹೀಗಾಗಿ ಈ ದಿನವನ್ನೇ ನಾವು ಶ್ರೀಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುತ್ತ ಬರುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ದಿನದ ಪೂಜೆಯು ಮನೆಗೆ ಶಾಂತಿ, ಸಮೃದ್ಧಿ, ಸಂತಾನ ಭಾಗ್ಯ ಮತ್ತು ಉತ್ತಮ ಆರೋಗ್ಯವನ್ನು ತರುತ್ತದೆ ಎನ್ನುವ ನಂಬಿಕೆಯಿದೆ. ಇನ್ನು ಮಕ್ಕಳು ಕೃಷ್ಣನನ್ನು ಹೆಚ್ಚಾಗಿ ಇಷ್ಟಪಡುತ್ತಾರೆ. ಜತೆಗೆ ಕೃಷ್ಣನ ಜೀವನ ಚರಿತ್ರೆಯ ಕಥೆಗಳನ್ನು ಹೇಳುವುದರಿಂದ ಅವರಿಗೆ ಜೀವನ ಮೌಲ್ಯವನ್ನು ತಿಳಿಸಬಹುದು. ಈ ಹಿನ್ನೆಲೆಯಲ್ಲಿ ಬಹುತೇಕ ತಾಯಿಯವರು ದೇವಕಿ ನಂದನ ಕೃಷ್ಣನ ವೇಷದಲ್ಲಿ ತಮ್ಮ ಮಕ್ಕಳನ್ನು ನೋಡಲು ಇಷ್ಟಪಡುತ್ತಾರೆ. ಹೀಗಾಗಿ ಕೃಷ್ಣನ ವೇಷಭೂಷಣ ತೋಡಿಸಿ ಶೃಂಗರಿ ಸಂತಸಪಡುತ್ತಾರೆ.

ಮಕ್ಕಳಿಗೆ ಕೃಷ್ಣ ವೇಷ ತೊಡಿಸಿದಾಗ ಆ ನಿಷ್ಕಲ್ಮಷ ಮನಸ್ಸಿನ ಮಕ್ಕಳು ಥೇಟ್‌ ಭಗವಾನ್ ಸ್ವರೂಪದಂತೆಯೇ ಕಾಣುವರು. ಅದರಂತೆ ಬೆಂಗಳೂರಿನ ವಿದ್ಯಾರಣ್ಯಪುರದ ಚಿಕ್ಕಬೆಟ್ಟಹಳ್ಳಿಯ ಬಿ.ಜೆ.ದಿಲೀಪ್ ಕುಮಾರ್ ಹಾಗೂ ಪತ್ರಕರ್ತೆ ಅರುಣಾ ಶಿರಗುಪ್ಪಿ ದಂಪತಿಯ ಪುತ್ರ ಲಿಶಾನ್ ಡಿ. ಜೈನ್‌ ಕೃಷ್ಣನ ಕಲರ್ ಪುಲ್ ಡ್ರೇಸಿಂಗ್‌ನಲ್ಲಿ ಮಿಂಚುತ್ತಿದ್ದು ಮುದ್ದು ಮುದ್ದಾಗಿ ಕಾಣಿಸುತ್ತಿದ್ದಾನೆ.

ಲಿಶಾನ್ ಶ್ರೀಕೃಷ್ಣನಾಗಿ ಜೋಕಾಲೆಯಲ್ಲಿ ಒಂದೆಡೆ ತೂಗುತ್ತಿದ್ದರೇ, ಗೋಪಿಕೆಯರಾದ ಅದ್ವಿಕಾ ಹಾಗೂ ಭುವಿಕಾ ಜತೆ ತುಂಟಾಟವಾಡುತ್ತಿದ್ದಾನೆ. ಹೂವಿನ ಪೇಟಾ ಅಥವಾ ರೂಮಾಲು ತೊಟ್ಟು ತಲೆಗೆ ನವಿಲು ಗಿರಿ ಇಟ್ಟುಕೊಂಡು ಮಿಂಚುತ್ತಿದ್ದಾರೆ. ಮತ್ತೊಂದೆಡೆ ಬೆಣ್ಣೆ ಕಡೆಯುವ ಮುರಾರಿ ವೇಷದಲ್ಲಿ ಲಿಶಾನ್ ಮಿಂಚಿದ್ದಾನೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ