NEWSನಮ್ಮಜಿಲ್ಲೆನಮ್ಮರಾಜ್ಯ

ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಶೇ.10 ಯೂನಿಟ್‌ ಬದಲು ಹೆಚ್ಚುವರಿ 10 ಅರ್ಹತಾ ಯೂನಿಟ್‌ ಫ್ರೀ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, 48 ಯೂನಿಟ್‌ಗಿಂತ ಕಡಿಮೆ ಬಳಸುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ.

ಅದೇನಂಪ್ಪ ಅಂದರೆ ಈವರೆಗೂ ಶೇ.10ರಷ್ಟು ಮಾತ್ರ ಸಾಮೂಹಿಕವಾಗಿ ಎಲ್ಲರಿಗೂ ಕೊಡಲಾಗುತ್ತಿತ್ತು. ಆದರೆ, ಇಂದು ಸಚಿವ ಸಂಪುಟ ಸಭೆಯಲ್ಲಿ ಈ ಶೇ.10 ಬದಲು 48ಯೂನಿಟ್‌ ಒಳಗೆ ಬಳಸುತ್ತಿರುವವರಿಗೆ 10 ಯೂನಿಟ್‌ ಫ್ರೀ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಎಚ್​.ಕೆ. ಪಾಟೀಲ್, ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯೂನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯೂನಿಟ್ ಅರ್ಹತಾ ಯೂನಿಟ್‌ಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್​​ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತ ಕುರಿತು ಚರ್ಚೆಯಾಗಿದೆ ಎಂದು ತಿಳಿಸಿದರು.

ಇನ್ನು ಸೆಂಟ್ರಲ್ ಇಆರ್​ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿವೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಸಚಿವ ಎಚ್​.ಕೆ. ಪಾಟೀಲ್​ ವಿವರಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ