Search By Date & Category

NEWSಕೃಷಿದೇಶ-ವಿದೇಶ

ರೈತರ ಸಮಸ್ಯೆ ಪರಿಹರಿಸಿ: ಕೇಂದ್ರ ಸಚಿವರ ಭೇಟಿ ಮಾಡಿದ ಕುರುಬೂರು ಶಾಂತಕುಮಾರ್ ನೇತೃತ್ವದ ನೀಯೋಗ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕ ರಾಜ್ಯದ ರೈತರ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತಕೂಬ ಅವರನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರ ನೀಯೋಗ ಭೇಟಿ ಹಲವಾರು ಸಮಸ್ಯೆಗಳನ್ನು ಮಂಡಿಸಿ ಗಮನ ಸೆಳೆಯಿತು.

ಕೃಷಿ ಉತ್ಪನ್ನಗಳ ಮೇಲೆ ರಸಗೊಬ್ಬರ, ಕೀಟನಾಶಕ ಹನಿ, ನೀರಾವರಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸಬೇಕು. ಪ್ರಸಕ್ತ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಉತ್ಪಾದನಾ ಸಾಲ ಬಡ್ಡಿ ರಹಿತವಾಗಿರಬೇಕು. ಕೃಷಿ ಭೂಮಿ ಮೌಲ್ಯದ ಶೇಕಡ 75ರಷ್ಟು ಸಾಲ ನೀಡುವಂತೆ ನೀತಿ ರೂಪಿಸಿ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಮಾನದಂಡ ಕೈಬಿಡಬೇಕು.

ಕಬ್ಬಿನ ಎಫ್‌ಆರ್‌ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು. ಆಕಸ್ಮಿಕ ಬೆಂಕಿಗೆ ಸುಟ್ಟು ಹೋದ ಕಬ್ಬಿನಿಂದ ಸಕ್ಕರೆ ಕಾರ್ಖಾನೆಗಳು 25% ರಷ್ಟು ಹಣ ಕಡಿತ ಮಾಡುವುದನ್ನು ನಿಲ್ಲಿಸಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕನಿಷ್ಠ 9:5ಕ್ಕೆ ಇಳಿಸಬೇಕು. ಕಬ್ಬು ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ಎಫ್‌ಆರ್‌ಪಿ ದರವನ್ನು 2023-24ನೆ ಸಾಲಿಗೆ ಕನಿಷ್ಠ ಟನ್‌ಗೆ ₹3500 ನಿಗದಿ ಮಾಡಬೇಕು.

ಕಬ್ಬಿನಿಂದ ಉತ್ಪಾದಿಸುವ ಎತನಾಲ್ ನೀತಿ ಬದಲಾಯಿಸಿ ಮುಕ್ತ ಅವಕಾಶ ಕಲ್ಪಿಸಬೇಕು. ರೈತರ ಬೆಲ್ಲದ ಗಾಣದಲ್ಲಿ ಉತ್ಪಾದನೆಗೆ ಅವಕಾಶ ಕಲ್ಪಿಸಬೇಕು. ಎಲ್ಲ ಕೃಷಿ ಉತ್ಪನ್ನ ಬೆಳೆಗಳಿಗೂ ಪಸಲ್ ಬಿಮಾ ಬೆಳೆ ವಿಮೆ ಯೋಜನೆ ಜಾರಿ ತರಭೇಕು ಈ ಯೋಜನೆ ಕೆಲವು ತಿದ್ದುಪಡಿಗಳು ಆಗಬೇಕು. ಅತಿವೃಷ್ಟಿ-ಅನಾವೃಷ್ಟಿ ಆಕಸ್ಮಿಕ ಬೆಂಕಿ ಪ್ರವಾಹ ಹಾನಿ ಬೆಳೆ ನಾಶ ಪರಿಹಾರ ಮಾನದಂಡ ವೈಜ್ಞಾನಿಕವಾಗಿ ಬದಲಾಗಬೇಕು.

ವನ್ಯಮೃಗಗಳ ಸಂರಕ್ಷಣೆ, ಮಾನವ ರಕ್ಷಣಾ ಕಾಯ್ದೆ ಕಾಡು ಪ್ರಾಣಿಗಳ ಹಾವಳಿ ತಡೆ ಕಾನೂನು1972 ಕ್ಕೆ ತಿದ್ದುಪಡಿ ತರಬೇಕು. ಕಾಡು ಪ್ರಾಣಿಗಳ ದಾಳಿಗೆ ತುತ್ತಾದ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತ 50 ಲಕ್ಷ ರೂ.ಗಳಿಗೆ ಏರಿಸಬೇಕು. ಕೇಂದ್ರ ಸರ್ಕಾರವೇ ಆರಂಭಿಸಿರುವ. ಕೊರೊನಾ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ಎಲ್ಲ ರೈತ ಉತ್ಪಾದಕ ಸಂಸ್ಥೆಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾಮಾಡಿ ಹೊಸ ಸಾಲ ಎಂದು ಪರಿಗಣಿಸಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಮುನ್ನಡೆಸಲು ಪುನಶ್ಚೇತನ ಸಾಲ ನೀಡಿ ಪ್ರೋತ್ಸಾಹಿಸಬೇಕು ಎಂಬ ಒತ್ತಾಯದ ಪತ್ರ ನೀಡಿದರು.

ಕೃಷಿ ಸಾಲನೀತಿ, ಸಿಬಿಲ್ ಸ್ಕೋರ್ ಬಗ್ಗೆ, ಹಣಕಾಸು ಸಚಿವರ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಸಚಿವ ಜೋಶಿ ಅವರು ತಿಳಿಸಿದರು. ರೈತರ ನಿಯೋಗದಲ್ಲಿ ಪರಶುರಾಮ್ ಎತ್ತಿನಗುಡ್ಡ, ನಂಜುಂಡಸ್ವಾಮಿ ಮತ್ತಿತರರು ಇದ್ದರು.

Leave a Reply

error: Content is protected !!