NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆಯ ಕೆಲ ಅವಿವೇಕಿಗಳು..!

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಒಕ್ಕೂಟ ಹಮ್ಮಿಕೊಂಡಿರುವ ಪಾದಯಾತ್ರೆ 9ನೇ ದಿನ ಪೂರ್ಣಗೊಳಿಸಿ ಶುಕ್ರವಾರಕ್ಕೆ ಅಂದರೆ ಇಂದಿಗೆ 10ನೇ ದಿನಕ್ಕೆ ಕಾಲಿಟ್ಟಿದೆ.

ಗುರುವಾರ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ತಂಗಿದ್ದ ಪಾದಯಾತ್ರೆ ಇಂದು ಬೆಳಗ್ಗೆ ಮಠದಿಂದ ಪಾದಯಾತ್ರೆ ಮುಂದುವರಿದ್ದಿದ್ದು ಇಂದು ರಾತ್ರಿ ನೆಲಮಂಗಲ ತಲುಪಲಿದೆ.

ಹೌದು! ಇದೇ ಏ.8ರ ಬುಧವಾರ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡ ಸಾರಿಗೆ ನೌಕರರ ಪಾದಯಾತ್ರೆ ಇಂದು ಸುಮಾರು 135 ಕಿಮೀ ಸಾಗಿದ್ದು ಇನ್ನು ಸುಮಾರು 70 ಕಿಮೀ ಸಾಗಿದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ ತಲುಪಲಿದೆ.

ಪಾದಯಾತ್ರೆ ಸಾಗಿದ ವಿವರ: ಏ.8ರ  ರಾತ್ರಿ ಬುರುಜನರೊಪ್ಪ ಗ್ರಾಮದ ಶ್ರೀ ರಕ್ಷಾ ಗಣಪತಿ ದೇವಸ್ಥಾನದಲ್ಲಿ ವಾಸ್ತವ್ಯ ಹೂಡಿತ್ತು. ಗುರುವಾರ ಏ.9ರಂದು ಬೆಳಗ್ಗೆ 6 ಗಂಟೆಗೆ ಎರಡನೇ ದಿನದ ಪಾದಯಾತ್ರೆ ದೇವಸ್ಥಾನದಿಂದ ಆರಂಭವಾಗಿ ಸುಮಾರು 30 ಕಿಮೀ ಕ್ರಮಿಸಿತ್ತು.

ಗುರುವಾರ ರಾತ್ರಿ ಹಿರಿಯೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಏ.10ರಂದು ಬೆಳಗ್ಗೆ ಹಿರಿಯೂರಿಂದ ಪಾದಯಾತ್ರೆ ಮುಂದುವರಿದು 18-20 ಕಿಮೀ ಕ್ರಮಿಸಿದ ಜೆ.ಜೆ. ಹಳ್ಳಿ ತಲುಪಿ ಅಂದು ರಾತ್ರಿ ಪಾದಯಾತ್ರೆ ತಂಡ ತಂಗಿತ್ತು. ಶನಿವಾರ ಏ.11ರಂದು ಬೆಳಗ್ಗೆ ಜೆಜೆ ಹಳ್ಳಿಯಿಂದ ಪಾದಯಾತ್ರೆ ಮುಂದುವರಿದು ತುಮಕೂರು ಜಿಲ್ಲೆಯ ಶಿರಾ ತಲುಪಲಿತ್ತು.

ಶಿರಾದಲ್ಲಿ ರಾತ್ರಿ ತಂಗಲಿದ್ದು ಭಾನುವಾರ ಏ.12ರಂದು ಬೆಳಗ್ಗೆ 5ನೇ ದಿನದ ಪಾದಯಾತ್ರೆ ಶಿರಾದಿಂದ ಮುಂದುವರಿದಿತ್ತು. ಶಿರಾ ತಾಲೂಕಿನ ಕಳ್ಳಂಬೆಳ್ಳದಿಂದ 6ನೇ ದಿನದ ಪಾದಯಾತ್ರೆ ಮುಂದುವರಿ ಸೀಬಿ ತಲುಪಿತ್ತು.   ಸೋಮವಾರಕ್ಕೆ 6ನೇ ದಿನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಮತ್ತೆ ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ನಿಮಿತ್ತ ಪಾದಯಾತ್ರೆಗೆ ವಿರಮಿಸಿತು.

ಇನ್ನು ಏ.15ರಿಂದ ಇದೇ ಸೀಬಿಯಿಂದ ಪಾದಯಾತ್ರೆ ಮುಂದುವರಿತ್ತು. ಬಳಿಕ ಏ.16ರಂದು ತುಮಕೂರು ತಲುಪಿ ಸಿದ್ಧಗಂಗಾ ಮಠದಲ್ಲಿ ತಂಗಿತ್ತು. 10ನೇ ದಿನವಾದ ಇಂದು ಪಾದಯಾತ್ರೆಯಲ್ಲಿ ವಿವಿಧೆಡೆಯಿಂದ ಹಲವಾರು ನೌಕರರು ಭಾಗಿಯಾಗಿದ್ದು ಪಾದಯಾತ್ರೆ ಮಠದಿಂದ ಮುಂದುವರಿದಿದೆ.

ಏ.8ರಂದು ಚಿತ್ರದುರ್ಗದಿಂದ ಬೆಂಗಳೂರಿನವರೆಗೆ ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು,  ಅಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕೆಲಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ಬೆಂಗಳೂರಿನತ್ತ ಪಾದಯಾತ್ರೆ ಆರಂಭಿಸಿದ್ದರು.

ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ನೀಡಬೇಕು ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಜಟಾಪಟಿ ಗೋಜು ಗೊಂದಲಗಳಿಗೆ ಮುಕ್ತಿಯಾಡಬೇಕು. ಅಲ್ಲದೆ ಕಾಂಗ್ರೆಸ್‌ ಪಕ್ಷ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಸಾರಿಗೆ ನೌಕರರಿಗೆ ಕೊಟ್ಟಿರುವ ಪ್ರಣಾಳಿಕೆ ಭರವಸೆಯನ್ನು ಈಡೇರಿಸಬೇಕು ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಲೇ ಬೇಕು ಜತೆಗೆ ಸಂಘಟನೆಗಳ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಜಂಟಿಯ ಕೆಲ ಅವಿವೇಕಿಗಳಿಂದ ಅಡ್ಡಿ: ಇನ್ನು ನೌಕರರ ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಕೂಟ ಮತ್ತು ಒಕ್ಕೂಟ ಮಾಡುತ್ತಿರುವ ಈ ಪಾದಯಾತ್ರೆಗೆ ಜಂಟಿ ಸಂಘಟನೆಗಳ ಕೆಲ ಅವಿವೇಕಿಗಳು ಡಿಪೋ ವ್ಯವಸ್ತಾಪಕರು ಸೇರಿದಂತೆ ಕೆಲ ಅಧಿಕಾರಿಗಳಿಗೆ ಫೋನ್‌ ಕರೆ ಮಾಡಿ ಸಂಸ್ಥೆ ಏನು ಕಡಿಮೆ ಮಾಡಿದೆ ಅಂತ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ನಿಮ್ಮ ಘಟಕದ ನೌಕರರ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತಿದ್ದೀರಿ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳುತ್ತಿರುವುದಲ್ಲದೆ ಈ ಪಾದಯಾತ್ರೆಯನ್ನು ಹೇಗಾದರೂ ಮಾಡಿ ತಡೆಯಬೇಕು ಎಂಬ ನೀಚ ಕೃತ್ಯಕ್ಕೆ ಕೈಹಾಕಿದ್ದಾರೆ.

ಜಂಟಿ ಸಂಘಟನೆಯಲ್ಲಿರುವ ಇಂಥ ಅವಿವೇಕಿಗಳಿಂದ ನೌಕರರಿಗೆ ಸರ್ಕಾರದಿಂದ ನ್ಯಾಯಯುತವಾಗಿ ಸಿಗಬೇಕಿರುವ ಸೌಲಭ್ಯಗಳು ಕೈ ತಪ್ಪಿಹೋಗುತ್ತಿವೆ. ಆದರೆ, ನೌಕರರ ಮುಂದೆ ಮಾತ್ರ ನಾವು ನಿಮ್ಮಪರ ಇದ್ದೇವೆ ಎಂದು ಹೇಳಿ ದಾರಿತಪ್ಪಿಸುವ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ಇಂಥ ನೀಚರಿಗೆ ನೌಕರರೇ ಬುದ್ಧಿ ಕಲಿಸಬೇಕು. ಇಲ್ಲದಿದ್ದರೆ ಸರ್ಕಾರ ಕೊಟ್ಟರೂ ಇಂಥ ಅವಿವೇಕಿಗಳು ಕೊಡಬೇಡಿ ಎಂದು ಹೇಳಿ ಸರ್ಕಾರ, ಸಾರಿಗೆ ಸಚಿವರು ಹಾಗೂ ಅಧಿಕಾರಿಗಳ ದಾರಿಯನ್ನೇ ತಪ್ಪಿಸಿ ನೌಕರಿಗೆ ಸಿಗಬೇಕಿರುವುದನ್ನು ಮೊಟಕುಗೊಳಿಸುತ್ತಾರೆ.

ಸಾರಿಗೆ ನೌಕರರು ಎಚ್ಚೆತ್ತುಕೊಳ್ಳಬೇಕಿದೆ. ನೀವು ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಡ್ಯೂಟಿಗೆ ಗೈರಾಗದೆ ರಜೆ ದಿನಗಳಲ್ಲಿ ಭಾಗವಹಿಸುವುದರಿಂದ ನಿಮ್ಮ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ. ಈ ಬಗ್ಗೆ ಅರಿತು ರಜೆ ದಿನಗಳಲ್ಲಿ ಎಲ್ಲ ನೌಕರರು ಭಾಗವಹಿಸಿ ನಿಮ್ಮ ಬೇಡಿಕೆಗಳ ಈಡೇರಿಸಿಕೊಳ್ಳುವುದಕ್ಕೆ ಭಯವಪಡದೆ ಮುಂದಾಗಿ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ