NEWSನಮ್ಮಜಿಲ್ಲೆಶಿಕ್ಷಣ

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ – ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

ವಿಜಯಪಥ ಸಮಗ್ರ ಸುದ್ದಿ
  • ಶೇಕಡ 95.62 ರಷ್ಟು ಫಲಿತಾಂಶ

ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.

ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.

ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.

ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.

ತಾಲೂಕು ವಾರು ಫಲಿತಾಂಶ
ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%

ದೊಡ್ಡಬಳ್ಳಾಪುರ
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%

ಹೊಸಕೋಟೆ
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%

ನೆಲಮಂಗಲ
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%

ಶಾಲಾವಾರು ಫಲಿತಾಂಶ
* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%

625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್‌ಗಳು
1. ಹೇಮ ಜಿ. ಎಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾ;ಲೂಕು.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!