RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ: ವಿಪಕ್ಷ ನಾಯಕ ಅಶೋಕ್ ಕಿಡಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೊಳಗಾಗಿ 11 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಬಿಜೆಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಪ್ಪು ನಮ್ಮದು ಸರಿ, ಆದರೆ ತಪ್ಪು ಯಾರದ್ದೆಂದು ಜನರು ಕೇಳುತ್ತಿದ್ದಾರೆ. ಕೂಗಳತೆ ಅಂತರದಲ್ಲೇ ಎರಡೆರಡು ಕಾರ್ಯಕ್ರಮಗಳು. ಈ ಕಾರ್ಯಕ್ರಮದ ಬಗ್ಗೆ ಐಪಿಎಲ್ ಚೇರ್ಮನ್ಗೊತ್ತೇ ಇಲ್ಲ ಎಂದು ಹೇಳಿದ್ದಾರೆ. ಸರ್ಕಾರ ಕೇಳಿದ್ದಕ್ಕೆ ಗ್ರೌಂಡ್ ಕೊಟ್ಟಿದ್ದೇನೆ ಎಂದು ಕೆಎಸ್ಸಿಎ ಹೇಳಿದೆ. ಇದರಲ್ಲಿ ಕೆಎಸ್ಸಿಎ ಅವರದ್ದು ತಪ್ಪಿಲ್ಲ. ಆರ್ಸಿಬಿಯವರು ಎರಡು ಕಿಮೀ ಮೆರವಣಿಗೆಗೆ ಕೇಳಿದ್ದರು. ಆದರೆ ಅವರನ್ನು ವಿಧಾನಸೌಧಕ್ಕೆ ಕರೆದುಕೊಂಡು ಬಂದಿದ್ದು ಯಾರು ಎಂದು ಪ್ರಶ್ನಿಸಿದರು.
ಇನ್ನು ಪಂದ್ಯ ಮುಗಿದ ಮೇಲೆ ನಮ್ಮ ಪೊಲೀಸರು ಬೆಳಗ್ಗೆ 3 ಗಂಟೆವರೆಗೂ ಕೆಲಸ ಮಾಡಿದ್ದಾರೆ. ಪಾಪ ನಮ್ಮ ಪೊಲೀಸರಿಗೆ ರಾತ್ರಿ ಎಲ್ಲ ನಿದ್ದೆನೇ ಇರಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಕಾಮನ್ ಸೆನ್ಸ್ ಇಲ್ಲ. ಅದೇ ಪೊಲೀಸರನ್ನು ನಿಯೋಜನೆ ಮಾಡಿದರೆ ಅವರು ಹೇಗೆ ಕೆಲಸ ಮಾಡಲು ಆಗುತ್ತದೆ ಎಂದು ಪ್ರಶ್ನಿಸಿದರು.
ಅಲ್ಲದೆ ಪೊಲೀಸರು ಈ ಕಾರ್ಯಕ್ರಮಕ್ಕೆ ನಿರಾಕರಣೆ ಮಾಡಿದ್ದರು. ಆದರೂ ಬಲತ್ಕಾರದಿಂದ ಸರ್ಕಾರದಲ್ಲಿರುವುದು ನಾನಾ ನೀನಾ ಎಂದು ಪ್ರಶ್ನೆ ಕೇಳಿ, ವಿಧಾನ ಸೌಧದ ಮುಂದೆ ಡ್ರೋನ್ ಎಲ್ಲ ಬಳಕೆ ಮಾಡಿದ್ದಾರೆ. ಹೈಕೋರ್ಟ್ ನಿರ್ಬಂಧಿತ ಸ್ಥಳ, ಎಂತಹ ಮುಟ್ಟಾಳ ಕೆಲಸ ಮಾಡಿದೆ. ಇವತ್ತು ಕೋರ್ಟ್ ಕೂಡ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ.
ಇನ್ನು ಇಷ್ಟಾದರೂ ಕೂಡ ಮುಖ್ಯಮಂತ್ರಿಗಳು, ಇಷ್ಟು ಜನ ಸೇರುತ್ತಾರೆ ಎಂದು ನಾವು ಅಂದಾಜಿಸಿಲ್ಲ ಅಂದಿದ್ದಾರೆ. ಎಲ್ಲೆಲ್ಲಿ ಎಷ್ಟೆಷ್ಟು ಜನರು ಸೇರುತ್ತಾರೆ ಎಂದು ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಅಶೋಕ್ ಕಿಡಿಕಾರಿದರು.
ಒಂದು ಕಾರ್ಯಕ್ರಮ ಆಯೋಜಿಸುವ ಮುನ್ನ ಅದರ ಬಗ್ಗೆ ಪೂರ್ವಪರ ಯೋಚನೆ ಮಾಡುವುದನ್ನು ಬಿಟ್ಟು ಈ ರೀತಿ ಬೇಕಾಬಿಟ್ಟಿಯಾಗಿ ಸರ್ಕಾರ ನಡೆದುಕೊಂಡರ ಪರಿಣಾಮ ಇಂದು ಭವಿಷ್ಯದ 11 ಪ್ರಜೆಗಳನ್ನು ಕಳೆದುಕೊಂಡಿದ್ದೇವೆ ಎಂದರು.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...