NEWSಕೃಷಿನಮ್ಮರಾಜ್ಯ

ಗ್ಯಾರಂಟಿ ನೆಪದಲ್ಲಿ ರೈತರ ಹಿತ ಮರೆತ ರಾಜ್ಯ ಸರ್ಕಾರ: ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನೆಪದಲ್ಲಿ ರೈತರ ಹಿತವನ್ನು ಮರೆತಿದೆ ಎಂದು ವಿಜಯಪುರ ಶಾಸಕ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಮಂಗಳವಾರ ತಾಲೂಕಿನ ಮಾಕೋಡು ಬೋರೆ, ರಾವಂದೂರು ಎಸ್.ಕೊಪ್ಪಲು, ಅಲ್ಪನಾಯಕನಹಳ್ಳಿ ಗ್ರಾಮಗಳಲ್ಲಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಬೆಟ್ಟದಪುರದ ಸಲಿಲೈಕ್ಯ ಮಠದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ರಾಜ್ಯದಲ್ಲಿ ಈ ಬಾರಿ ಎಂದೂ ಕಂಡು ಕೇಳರಿಯದ ರೀತಿಯಲ್ಲಿ ಬರ ಆವರಿಸಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದರೂ ನಾವು ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದೇವೆ ಎಂಬ ಹುಂಬುತನದಲ್ಲಿ ರೈತರ ಹಿತವನ್ನು ಮರೆತಿದ್ದಾರೆ. ಸರ್ಕಾರದ ಜವಾಬ್ದಾರಿಯುತ ಖಾತೆ ನಿರ್ವಹಿಸುತ್ತಿರುವ ಶಿವಾನಂದ ಪಾಟೀಲ್ ಎಂಬ ಸಚಿವ ರೈತರು 5 ಲಕ್ಷ ಹಣ ಸಿಗುತ್ತದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.ಅವರಿಗೆ ನಾನು ಹೇಳಬಯಸುತ್ತೇನೆ 5 ಕೋಟಿ ಹಣ ನೀಡುತ್ತಿದ್ದೇನೆ ನೀವೇ ಆತ್ಮಹತ್ಯೆ ಮಾಡಿಕೊಳ್ಳಿ ನೋಡೋಣ ಎಂದರು.

ಇನ್ನು ಮಳೆ ಇಲ್ಲದೆ, ವಿದ್ಯುತ್‌ನ ಸಮಸ್ಯೆಯೂ ಹೆಚ್ಚಾಗಿದೆ. ರೈತರಿಗೆ ಸಮರ್ಪಕ ವಿದ್ಯುತ್‌ ಸೌಲಭ್ಯ ನೀಡಿದ್ದರೆ ಕೊಳವೆ ಬಾವಿಯಲ್ಲಿರುವ ಅಲ್ಪಸ್ವಲ್ಪ ನೀರು ಬಿಟ್ಟುಕೊಂಡು ಬೆಳೆಗಳನ್ನು ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ರಾಜ್ಯ ಸರ್ಕಾರ ಇಂತಹ ಯಾವುದೇ ಜನಪರ ಕಾರ್ಯಕ್ರಮಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಇದನ್ನು ಬಿಟ್ಟು ಪ್ರಧಾನಿ ಮೋದಿ ಅವರ ಮೇಲೆ ಟೀಕೆಗಳನ್ನು ಮಾಡುವುದರಲ್ಲೇ ಮಗ್ನವಾಗಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಗೂ ಮೊದಲು ರೈತರೊಂದಿಗೆ ಮಳೆಯ ಕೊರತೆ, ಬೆಳೆ ಹಾನಿ, ನಷ್ಟ, ದೊರೆಯಬೇಕಾದ ಪರಿಹಾರ, ಸರ್ಕಾರದಿಂದ ಪರಿಹಾರ ಪಡೆಯುವ ನಿಟ್ಟಿನಲ್ಲಿ ಇರುವ ಸಾಧಕ-ಬಾಧಕ ಬಗ್ಗೆ ಕೂಲಂಕಷವಾಗಿ ಚರ್ಚಿಸಿ, ಮಾಹಿತಿ ಪಡೆದರು. ಬರ ಅಧ್ಯಯನ ಪ್ರವಾಸದ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ಅಂತಿಮ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸ ಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ರೈತರ ಪರ ಬಿಜೆಪಿ ಧ್ವನಿ ಎತ್ತಲಿದೆ ಎಂದರು.

ಈ ನಡುವೆ ಅಧ್ಯಯನ ತಂಡದಲ್ಲಿದ್ದ ಶಾಸಕ ಶ್ರೀವತ್ಸ, ಕೊಡಗು ಜಿಲ್ಲೆಯ ರೈತ ಮೋರ್ಚಾದ ಕಾರ್ಯದರ್ಶಿ ಡಾ| ನವೀನ್‌ಕುಮಾರ್‌, ಮಾಜಿ ಸಂಸದ ಸಿ.ಎಚ್‌.ವಿಜಯಶಂಕರ್‌ ಗ್ರಾಮದ ಹಲವಾರು ಹೊಲಗಳಲ್ಲಿ ಒಣಗಿ ಹೋಗಿರುವ ಮೆಕ್ಕೆಜೋಳ, ಜೋಳ ಇತರ ಬೆಳೆಗಳನ್ನು ವೀಕ್ಷಿಸಿದರು.

ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಮಾಜಿ ಶಾಸಕರಾದ ಎನ್.ಮಹೇಶ್, ನಿರಂಜನ್ ಕುಮಾರ್, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಉಪಾಧ್ಯಕ್ಷ ನಂದಿಪುರ ಲೋಕೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಪ್ರಧಾನ ಕಾರ್ಯದರ್ಶಿ ಬೆಮ್ಮತ್ತಿ ಚಂದ್ರು, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಡಾ.ನವೀನ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಪುಟ್ಟಬುದ್ದಿ, ಮಾಜಿ ಸದಸ್ಯ ಪಿ.ರಾಜೇಂದ್ರ, ಮಾಜಿ ಸಿಂಡಿಕೇಟ್ ಸದಸ್ಯ ವಸಂತಕುಮಾರ್, ಮುಖಂಡರಾದ ರಮೇಶ್ ಕುಮಾರ್, ಆರ್.ಟಿ.ಸತೀಶ್, ಕೌಲನಹಳ್ಳಿ ಸೋಮಶೇಖರ್, ಲೋಕಪಾಲಯ್ಯ, ಬೆಟ್ಟದಪುರ ಬೆಟ್ಟದಪುರದ ಮೈಲಾರಿ, ಮನುಗನಹಳ್ಳಿ ಮಧು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ