NEWSಕೃಷಿನಮ್ಮರಾಜ್ಯ

ಟನ್ ಕಬ್ಬಿಗೆ ₹4500 ಬೆಲೆ ನಿಗದಿ ಪಡಿಸಲು ರಾಜ್ಯ ಕಬ್ಬು ಬೆಳೆಗಾರರ ಸಂಘ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಬ್ಬಿನ ಎಫ್ಆರ್‌ಪಿ ದರ 2025-2026ನೇ ಸಾಲಿನಲ್ಲಿ ಟನ್‌ಗೆ ಕೇವಲ ₹150 ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದ್ದು ಪುನರ್ ಪರಿಶೀಲನೆ ಮಾಡಿಸಿ ಸಿಎಸಿಪಿ ವರದಿಯಂತೆ ಟನ್ ಕಬ್ಬಿಗೆ ₹4500 ಬೆಲೆ ನಿಗದಿ ಪಡಿಸಬೇಕು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಬುಧವಾರ ಬೆಂಗಳೂರಿನಲ್ಲಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರನ್ನು ಬೇಟಿ ಮಾಡಿ ಕಬ್ಬು ಬೆಳೆಗಾರ ರೈತರ ಸಮಸ್ಯೆಗಳನ್ನು ಚರ್ಚಿಸಿ ಒತ್ತಾಯ ಪತ್ರ ಸಲ್ಲಿಸಿದರು.

ಸಕ್ಕರೆ ಕಾರ್ಖಾನೆಗಳಿಂದ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡಿಸಬೇಕು. ಕಳೆದ ವರ್ಷ ಸರ್ಕಾರ ಹೆಚ್ಚುವರಿಯಾಗಿ ಟನ್‌ಗೆ ₹150 ಬೆಲೆ ನಿಗದಿಪಡಿಸಿದ್ದು, ಕಾರ್ಖಾನೆಗಳು ಇನ್ನು ಕೊಟ್ಟಿಲ್ಲ ₹950 ಕೋಟಿ ಹಣ ಬಾಕಿ ಇದ್ದು ತಕ್ಷಣವೇ ಕೊಡಿಸಬೇಕು ಎಂದು ಆಗ್ರಹಿಸಿದರು.

ಇನ್ನು ಕಬ್ಬಿನ ಎಫ್‌ಆರ್‌ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಸಕ್ಕರೆ ಕಾರ್ಖಾನೆಗಳಿಂದ ಸಕ್ಕರೆ ಮೋಸ ತಪ್ಪಿಸಲು ಇಳುವರಿ ಮಿತಿ ಕನಿಷ್ಠ 9ಕೆ ಜಾರಿ ಆಗಬೇಕು. ಬೆಂಕಿ ಬಿದ್ದು ಸುಟ್ಟ ಕಬ್ಬಿಗೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇ.25 ರಷ್ಟು ಹಣ ಕಡಿತ ಮಾಡುವುದನ್ನು ತಪ್ಪಿಸಬೇಕು ಎಂದು ಒತ್ಥಾಯಿಸಿದರು.

ಕಬ್ಬಿನ ತೂಕದಲ್ಲಿ ಮೋಸ ತಪ್ಪಿಸಲು ಕಾರ್ಖಾನೆಗಳ ಮುಂದೆ ತೂಕದ ಯಂತ್ರ ಸ್ಥಾಪಿಸಬೇಕು. ಕಬ್ಬು ಕಟಾವು ಯಂತ್ರದ ಮೂಲಕ ಕಟಾವು ಮಾಡುವಾಗ ಶೇ.8 ರಷ್ಟು ಕಬ್ಬು ವೇಸ್ಟೇಜ್ ಎಂದು ಕಡಿತ ಮಾಡುವುದನ್ನು ತಪ್ಪಿಸಬೇಕು ಹಾಗೂ ಕಾನೂನು ಬಾಹಿರವಾಗಿ ಕಬ್ಬು ಕಡಿತ ಮಾಡಿದ ಕಾರ್ಖಾನೆಗಳಿಗೆ ದಂಡ ಹಾಕಿ ಕಡಿತ ಮಾಡಿದ ಹಣ ರೈತರಿಗೆ ವಾಪಸ್ ಕೊಡಿಸಬೇಕು.

ಈ ವೇಳೆ ಮೈಸೂರು – ಚಾಮರಾಜ ನಗರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ದೊಡ್ಡ ಕಾಟೂರು ನಾಗೇಶ್, ಕೋಟೆಪುರ ಜಗದೀಶ್, ಬಳ್ಳಾರಿ ಪರಮೇಶ್ ಇದ್ದರು.

Megha
the authorMegha

Leave a Reply

error: Content is protected !!
Latest news
KSRTC ನೌಕರ ಕೇಶವಮೂರ್ತಿ ಹೃದಯಾಘಾತದಿಂದ ನಿಧನ ರೈತರ ನಿರ್ಲಕ್ಷ್ಯ ಮಾಡಿದರೆ ಬೀದಿಗಿಳಿದು ಹೋರಾಟ: ಕೇಂದ್ರ-ರಾಜ್ಯ. ಸರ್ಕಾರಗಳಿಗೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ BMTC "ವಜ್ರ ವಿಸ್ತಾರ" ಬಸ್‌ಗಳಲ್ಲಿ ಮಕ್ಕಳಿಗೆ ಶೇ.25ರಷ್ಟು ರಿಯಾಯಿತಿ, ಹಿರಿಯ ನಾಗರಿಕರಿಗೆ ರಿಯಾಯಿತಿ ಇಲ್ಲ- ಸಿಟಿಎಂ ... ನಾಳೆ ಕನಿಷ್ಠ ಪಿಂಚಣಿ 7,500 ರೂ. ಮಾಡಲು ಆಗ್ರಹಿಸಿ ಪಿಎಫ್ ಕಚೇರಿ ಮುಂದೆ EPS-95, BMTC-KSRTC ನಿವೃತ್ತ ನೌಕರರ ಪ್ರತ... KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು!