NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವದ ದುಡಿಯುವ ವರ್ಗದ ಹೋರಾಟಕ್ಕೆ ಮುನ್ನುಡಿ ಬರೆದ ವಿಶ್ವ ಕಾರ್ಮಿಕ ದಿನಾಚರಣೆಯು ಕರ್ನಾಟಕ ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ನಾಲ್ಕೂ ನಿಗಮಗಳ ಸಮಸ್ತ ಸಾರಿಗೆ ನೌಕರರುಗಳಿಂದ ಸರ್ಕಾರದ ಧೋರಣೆಯನ್ನು ಖಂಡಿಸಿ ಕರಾಳ ಕಾರ್ಮಿಕ ದಿನಾಚರಣೆ ಆಚರಿಸುವ ಮೂಲಕ ಸರ್ಕಾರಕ್ಕೆ ನಮ್ಮ ಶ್ರಮದ ನೋವು ತಲುಪಿಸುತ್ತಿದ್ದೇವೆ.

ನಮ್ಮ ದುಡಿಮೆಯ ಬೆವರಿಗೆ ತಕ್ಕ ವೇತನ ನೀಡಿ. 650 ಕೋಟಿ ಟಿಕೆಟ್ ಕೊಟ್ಟಿದ್ದು ನಿರ್ವಾಹಕರು, ಬಸ್ಸುಗಳನ್ನು ಚಲಾಯಿಸಿದ್ದು ಚಾಲಕರು, ಬಸ್ಸುಗಳನ್ನು ಸುಸ್ಥಿತಿಯಲ್ಲಿಟ್ಟಿದ್ದು ತಾಂತ್ರಿಕ ಸಿಬ್ಬಂದಿ, ವಾಹನ ಸ್ವಚ್ಚವಾಗಿಟ್ಚಿದ್ದು ಸ್ವಚ್ಚತಗಾರರು, ವ್ಯವಸ್ಥಿತ ವಾಹನಗಳ ಕಾರ್ಯಾಚರಣೆ ಮಾಡಿದ್ದು ಸಂಚಾರ ಸಿಬ್ಬಂದಿ, ಶಿಸ್ತು ಬದ್ಧ ಆಚರಣೆಯ ಉಸ್ತುವಾರಿ ವಹಿಸಿದ್ದು ಅಧಿಕಾರಿಗಳು ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಗಳ ಸಿಬ್ಬಂದಿಗಳು.

ಪ್ರಶಸ್ತಿಯ ಲಾಭ ಪಡೆದದ್ದು ಸರ್ಕಾರ, ಅದು ಸಾರಿಗೆ ನೌಕರರ ಹೊಟ್ಟೆಗೆ ತಣ್ಣೀರು ಬಟ್ಟೆಹಾಕಿದೆ. ಸರ್ಕಾರಕ್ಕೆ ಕೀರ್ತಿ ತಂದುಕೊಡುತ್ತಿರುವ ನಮ್ಮನ್ನು ಕಡೆಗಣಿಸಿ ನಮಗೆ ನ್ಯಾಯಯುತವಾಗಿ ಲೊಡಬೇಕಿರುವ ವೇತನ ಹೆಚ್ಚಳ ಮಾಡದೆ ತಾರತಮ್ಯಧೋರಣೆ ತಣಳೆದಿರುವ ಸರ್ಕಾರದ ನಡೆ ಖಂಡನೀಯ.

ಹೀಗಾಗಿ ಸಾರಿಗೆ ನೌಕರರ ಕರಾಳ ಕಾರ್ಮಿಕ ದಿನಾಚರಣೆಗೆ ಯಶಸ್ಸು ದೊರೆಯಲಿ ಎಂದು ಅಧಿಕಾರಿ ವರ್ಗ ಸೇರಿದಂತೆ ಸಮಸ್ತ 1.20ಲಕ್ಷ ನೌಕರರು ಇಂದು ಸಾರಿಗೆ ನೌಕರರ ಕರಾಳ ಕಾರ್ಮಿಕ ದಿನಾಚರಣೆ ಮಾಡುತ್ತಿದ್ದೇವೆ.

ಈಗಲೂ ನಾವು ಕಪ್ಪುಪಟ್ಟಿ ಕಟ್ಟಿಕೊಂಡು ಡ್ಯೂಟಿ ಮಾಡಿದರೆ ಎಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೋ ಎಂಬ ಕಳಕಳಿಯಿಂದ ಯಾವುದೇ ಕಪ್ಪುಪಟ್ಟಿ ಕಟ್ಟಿಕೊಳ್ಳದೆ ಮೌನವಾಗಿ ಈ ಸಾರಿಗೆ ನೌಕರರ ಕರಾಳ ಕಾರ್ಮಿಕ ದಿನಾಚರಣೆ ಮಾಡುತ್ತಿದ್ದೇವೆ. ಇನ್ನಾದರೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರುಸುವತ್ತ ಮನಸು ಮಾಡಲಿ ಎಂಬುವುದು ನಮ್ಮ ಆಶಯ. -ಸಮಸ್ತ ಸಾರಿಗೆ ನೌಕರರು.

Megha
the authorMegha

Leave a Reply

error: Content is protected !!
Latest news
KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ