ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ

ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್ ಅವರ ಪ್ರತಿಮೆ
ನಗರದ ಶಾಂತಲಾ ಸಿಲ್ಕ್ ಹೌಸ್ ಎದುರು ಇಂದು (ಮೇ 14) ಅನಾವರಣವಾಯಿತು.
ಈ ನಿಲ್ದಾಣ ನಿರ್ಮಾಣ ಹಾಗೂ ಗುಂಡೂರಾಯರ ಸಾಧನೆಯ ಬಗ್ಗೆ ಒಂದು ಇತಿಹಾಸವೇ ಇದೆ. ಈ ಸ್ಥಳ ಒಂದು ಕಾಲಕ್ಕೆ ಕೆಂಪಾಬುಧಿ ಕೆರೆ ಎನಿಸಿಕೊಂಡಿತ್ತು. ಈ ಕೆರೆಯನ್ನು ಎರಡು ಭಾಗ ಮಾಡುವ ರಸ್ತೆಯೊಂದು ಹಾದು ಹೋಗುತ್ತದೆ. ಎಡ ಭಾಗ ರಾಜ್ಯ ರಸ್ತೆಸಾರಿಗೆ ಮತ್ತು ಬಲ ಭಾಗ ನಗರ ಸಾರಿಗೆ ನಿಲ್ದಾಣಗಳಿವೆ.
ನಿಲ್ದಾಣ ಆಗುವ ಮೊದಲು ಬಲಭಾಗದ ಖಾಲಿ ಜಾಗದಲ್ಲಿ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಮುಂತಾದ ಚಟುವಟಿಕೆಗಳು ನಡೆಯುತ್ತಿದ್ದವು. ಅನಂತರ ಇಡೀ ಕೆರೆಯ ಜಾಗವನ್ನು ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ರಾಜ್ಯ ಸಾರಿಗೆ ಸಂಸ್ಥೆಗೆ ನೀಡ ಲಾಯಿತು.
ಒಮ್ಮೆ ಪ್ರದೇಶ ಕಾಂಗ್ರೆಸ್ ಸಮಿತಿಯು ರಾಜ್ಯ ಸರ್ಕಾರದ ಸಾಧನೆಗಳನ್ನು ಪರಿಚಯಿಸುವ ವಸ್ತುಪ್ರದರ್ಶನ ಆಯೋಜಿಸಲು ನಿರ್ಧರಿಸಿ ಸಾರಿಗೆ ಸಂಸ್ಥೆಗೆ ಅರ್ಜಿ ಸಲ್ಲಿಸಿತು. ದೇವರಾಜ ಅರಸು ಮುಖ್ಯಮಂತ್ರಿ ಕೀ. ಶೇ. ಆರ್. ಗುಂಡೂರಾವ್ ಸಾರಿಗೆ ಸಚಿವ ಹಾಗೂ ಸಂಸ್ಥೆ ಅಧ್ಯಕ್ಷರು.
ಅವರು ಈ ಅರ್ಜಿಯನ್ನು ತಿರಸ್ಕರಿಸಿದರು.
ಆ ಸಂದರ್ಭದಲ್ಲಿ ಡಿ.ಎಂ.ಸಿದ್ದಯ್ಯ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ದೇವರಾಜ ಅರಸರ ಪರಮಾಪ್ತ ವೇ.ಬ್ರ.ಶ್ರೀ ಬೆಳ್ಳೂರು ಶಂಕರ ನಾರಾಯಣ್ ಅವರ ಪುತ್ರ ಬಿ.ಎಸ್. ಸತ್ಯನಾರಾಯಣ ಅವರು ಪಕ್ಷದ ಇಂಜಿನಿಯರ್ ಮತ್ತು ಸಾರ್ವಜನಿಕ ಸಂಪರ್ಕಧಿಕಾರಿ.
ಸಿದ್ದಯ್ಯನವರು ಇವರನ್ನು ಕರೆದು ಅನುಮತಿ ದೊರಕಿಸುವ ಅಧಿಕಾರ ವಹಿಸಿದರು. ಸತ್ಯನಾರಾಯಣರ ಮನವೊಲಿಕೆಗೆ ಮಣಿದ ಗುಂಡೂರಾವ್ ಎರಡು ಷರತ್ತಿನ ಮೇಲೆ ಅನುಮತಿ ನೀಡಿದರು. ರ್ಪ್ರದರ್ಶನ ಮುಗಿದ ಮೇಲೆ ಆ ಜಾಗವನ್ನು ಸಂಸ್ಥೆಗೆ ವಾಪಸು ಮಾಡಬೇಕು ಮತ್ತು ಮಧ್ಯದಲ್ಲಿದ್ದ ಚಿಕ್ಕ ರಸ್ತೆಯನ್ನು ಅಗಲಿಕರಣ ಮಾಡಿಸಿಕೊಡಬೇಕು ಎಂಬ ಒಪ್ಪಂದಕ್ಕೆ ಪಕ್ಷದ ಪರಾಗಿ ಸತ್ಯನಾರಾಯಣರೇ ಸಹಿ ಹಾಕಬೇಕು ಎಂಬ ಷರತ್ತು ಹಾಕಿದರು.
ಅದರಂತೆಯೇ ಸಾರಿಗೆ ಸಂಸ್ಥೆಗೆ ವಾಪಸಾಗಿ ಇಂದಿನ ಈ ನಿಲ್ದಾಣಗಳು ತಲೆ ಎತ್ತಿ ನಿಂತಿವೆ. ನಗರದ ಹೃದಯಭಾಗ ಹಾಗೂ ರೈಲ್ವೆ ನಿಲ್ದಾಣಗಳೆರಡಕ್ಕೂ ಹತ್ತಿರ ಇರುವ ಬಸ್ ನಿಲ್ದಾಣ ಇನ್ನೆಲ್ಲೂ ಇಲ್ಲ.
ಮಾಹಿತಿ: ವೆಂಕಟಾನರಾಯಣ, ಹಿರಿಯ ಪತ್ರಕರ್ತರು
Related

You Might Also Like
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...