ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ

ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್ ಅವರ ಪ್ರತಿಮೆ
ನಗರದ ಶಾಂತಲಾ ಸಿಲ್ಕ್ ಹೌಸ್ ಎದುರು ಇಂದು (ಮೇ 14) ಅನಾವರಣವಾಯಿತು.
ಈ ನಿಲ್ದಾಣ ನಿರ್ಮಾಣ ಹಾಗೂ ಗುಂಡೂರಾಯರ ಸಾಧನೆಯ ಬಗ್ಗೆ ಒಂದು ಇತಿಹಾಸವೇ ಇದೆ. ಈ ಸ್ಥಳ ಒಂದು ಕಾಲಕ್ಕೆ ಕೆಂಪಾಬುಧಿ ಕೆರೆ ಎನಿಸಿಕೊಂಡಿತ್ತು. ಈ ಕೆರೆಯನ್ನು ಎರಡು ಭಾಗ ಮಾಡುವ ರಸ್ತೆಯೊಂದು ಹಾದು ಹೋಗುತ್ತದೆ. ಎಡ ಭಾಗ ರಾಜ್ಯ ರಸ್ತೆಸಾರಿಗೆ ಮತ್ತು ಬಲ ಭಾಗ ನಗರ ಸಾರಿಗೆ ನಿಲ್ದಾಣಗಳಿವೆ.
ನಿಲ್ದಾಣ ಆಗುವ ಮೊದಲು ಬಲಭಾಗದ ಖಾಲಿ ಜಾಗದಲ್ಲಿ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಮುಂತಾದ ಚಟುವಟಿಕೆಗಳು ನಡೆಯುತ್ತಿದ್ದವು. ಅನಂತರ ಇಡೀ ಕೆರೆಯ ಜಾಗವನ್ನು ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ರಾಜ್ಯ ಸಾರಿಗೆ ಸಂಸ್ಥೆಗೆ ನೀಡ ಲಾಯಿತು.
ಒಮ್ಮೆ ಪ್ರದೇಶ ಕಾಂಗ್ರೆಸ್ ಸಮಿತಿಯು ರಾಜ್ಯ ಸರ್ಕಾರದ ಸಾಧನೆಗಳನ್ನು ಪರಿಚಯಿಸುವ ವಸ್ತುಪ್ರದರ್ಶನ ಆಯೋಜಿಸಲು ನಿರ್ಧರಿಸಿ ಸಾರಿಗೆ ಸಂಸ್ಥೆಗೆ ಅರ್ಜಿ ಸಲ್ಲಿಸಿತು. ದೇವರಾಜ ಅರಸು ಮುಖ್ಯಮಂತ್ರಿ ಕೀ. ಶೇ. ಆರ್. ಗುಂಡೂರಾವ್ ಸಾರಿಗೆ ಸಚಿವ ಹಾಗೂ ಸಂಸ್ಥೆ ಅಧ್ಯಕ್ಷರು.
ಅವರು ಈ ಅರ್ಜಿಯನ್ನು ತಿರಸ್ಕರಿಸಿದರು.
ಆ ಸಂದರ್ಭದಲ್ಲಿ ಡಿ.ಎಂ.ಸಿದ್ದಯ್ಯ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ದೇವರಾಜ ಅರಸರ ಪರಮಾಪ್ತ ವೇ.ಬ್ರ.ಶ್ರೀ ಬೆಳ್ಳೂರು ಶಂಕರ ನಾರಾಯಣ್ ಅವರ ಪುತ್ರ ಬಿ.ಎಸ್. ಸತ್ಯನಾರಾಯಣ ಅವರು ಪಕ್ಷದ ಇಂಜಿನಿಯರ್ ಮತ್ತು ಸಾರ್ವಜನಿಕ ಸಂಪರ್ಕಧಿಕಾರಿ.
ಸಿದ್ದಯ್ಯನವರು ಇವರನ್ನು ಕರೆದು ಅನುಮತಿ ದೊರಕಿಸುವ ಅಧಿಕಾರ ವಹಿಸಿದರು. ಸತ್ಯನಾರಾಯಣರ ಮನವೊಲಿಕೆಗೆ ಮಣಿದ ಗುಂಡೂರಾವ್ ಎರಡು ಷರತ್ತಿನ ಮೇಲೆ ಅನುಮತಿ ನೀಡಿದರು. ರ್ಪ್ರದರ್ಶನ ಮುಗಿದ ಮೇಲೆ ಆ ಜಾಗವನ್ನು ಸಂಸ್ಥೆಗೆ ವಾಪಸು ಮಾಡಬೇಕು ಮತ್ತು ಮಧ್ಯದಲ್ಲಿದ್ದ ಚಿಕ್ಕ ರಸ್ತೆಯನ್ನು ಅಗಲಿಕರಣ ಮಾಡಿಸಿಕೊಡಬೇಕು ಎಂಬ ಒಪ್ಪಂದಕ್ಕೆ ಪಕ್ಷದ ಪರಾಗಿ ಸತ್ಯನಾರಾಯಣರೇ ಸಹಿ ಹಾಕಬೇಕು ಎಂಬ ಷರತ್ತು ಹಾಕಿದರು.
ಅದರಂತೆಯೇ ಸಾರಿಗೆ ಸಂಸ್ಥೆಗೆ ವಾಪಸಾಗಿ ಇಂದಿನ ಈ ನಿಲ್ದಾಣಗಳು ತಲೆ ಎತ್ತಿ ನಿಂತಿವೆ. ನಗರದ ಹೃದಯಭಾಗ ಹಾಗೂ ರೈಲ್ವೆ ನಿಲ್ದಾಣಗಳೆರಡಕ್ಕೂ ಹತ್ತಿರ ಇರುವ ಬಸ್ ನಿಲ್ದಾಣ ಇನ್ನೆಲ್ಲೂ ಇಲ್ಲ.
ಮಾಹಿತಿ: ವೆಂಕಟಾನರಾಯಣ, ಹಿರಿಯ ಪತ್ರಕರ್ತರು
Related

You Might Also Like
KSRTC ಕೋಲಾರ: ನೌಕರರ ದುಡಿಮೆಗೆ ತಕ್ಕ ವೇತನಕೊಡದೆ ಕಾಡುತ್ತಿರುವ ಡಿಸಿ, ಡಿಟಿಒಗಳ ಅಮಾನತು ಮಾಡಿ- ಸಾರಿಗೆ ಸಚಿವರಿಗೆ ಸೈಕಲ್ ರೆಡ್ಡಿ ಪತ್ರ
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೋಲಾರ ವಿಭಾಗದ ನಿಯಂತ್ರಣಾಧಿಕಾರಿಗಳ ಅಧಿಕಾರ ದುರ್ಬಳಕೆ, ನೌಕರರಿಗೆ ಕಿರುಕುಳ ಮತ್ತು ಲಂಚಾವತಾರ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು...
KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ...
ನಿವೃತ್ತಿಗೆ ಮುನ್ನವೇ ನೌಕರರ ವಿಚಾರಣೆ ಮುಗಿದಿರಬೇಕು ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮದ ಖಡಕ್ ಎಚ್ಚರಿಕೆ
ಬೆಂಗಳೂರು: ವೃತ್ತಿಯಲ್ಲಿರುವ ಸಂದರ್ಭದಲ್ಲಿ ದುರ್ನಡತೆ, ಕರ್ತವ್ಯಲೋಪದಂತಹ ಆರೋಪಗಳನ್ನು ಎದುರಿಸುವ ಸರ್ಕಾರಿ ನೌಕರರು, ಅವರು ನಿವೃತ್ತರಾಗುವ ಮುನ್ನವೇ ಅವರ ವಿರುದ್ಧದ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ...
KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್ ಮುಖಂಡ, ವಕೀಲ ಶಂಕರೇಗೌಡ ಆಗ್ರಹ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ....
ಮೈಸೂರು: ಶೀಘ್ರದಲ್ಲೇ ಕಬಿನಿ ನೀರು ಹೊರ ವಲಯ ಬಡಾವಣೆಗಳಿಗೆ ಪೂರೈಕೆ: ಶಾಸಕ ಜಿಟಿಡಿ
ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರೂಪಾ ನಗರದಲ್ಲಿ ಸ್ಥಳೀಯ...
ಜಮೀರ್ ರಾಜೀನಾಮೆಗೆ ಸಾಗರ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯ
ಶಿವಮೊಗ್ಗ: ವಸತಿ ಇಲಾಖೆಯಿಂದ ಮನೆಗಳನ್ನು ಪಡೆಯಲು ಲಂಚ ನೀಡಬೇಕು ಎಂಬ ಶಾಸಕ ಬಿ. ಆರ್. ಪಾಟೀಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ...
ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ- 2-3 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದ NWKRTC ಅಧ್ಯಕ್ಷ ರಾಜುಕಾಗೆ
ಕಾಗವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿಡುತ್ತಿದ್ದಾರೆ. ಜತೆಗೆ ಸರ್ಕಾರ...
KSRTC ಮೈಸೂರು: ಸರಿಸಮಾನ ವೇತನ ಕೊಡಿ- ಎಂಡಿಗೆ ಮನವಿ ಮಾಡಿದ ಸಂಸ್ಥೆಯ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಸನ್ಮಾನ ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ಪಾಷ ಅವರನ್ನು ಕರ್ನಾಟಕ...
ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಸ್ವೀಕರಿಸಿದ ಮಾಜಿ ಪ್ರಧಾನಿ ದೇವೇಗೌಡ್ರು
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ನಗರದಲ್ಲಿ ಇಂದು ದೇವೇಗೌಡ ಅಭಿನಂದನಾ ಸಮಿತಿ...