NEWSನಮ್ಮಜಿಲ್ಲೆ

ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದವು- ತಮಗಾದ ಅನುಭವ ಹಂಚಿಕೊಂಡ ದಾವಣಗೆರೆ ಡಿಸಿ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ನಗರದಲ್ಲಿ ‌ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್ಲು ಹೊಡೆದು ಓಡಿಸಿದ್ದೇನೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಜನಸಾಮಾನ್ಯರು ರಸ್ತೆಯಲ್ಲಿ ಒಡಾಡುವುದಕ್ಕೂ ಭಯ ಪಡುವಂತಾಗಿದೆ. ಈ ನಾಯಿಗಳ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವರು ಎಂದರು.

ಇನ್ನು ಈ ವೇಳೆ, ಜಿಲ್ಲೆಯಲ್ಲಿ ವರ್ಷಕ್ಕೆ 5 ರಿಂದ 6 ಸಾವಿರ ಜನರು ಈ ಬೀದಿ ನಾಯಿಗಳ ದಾಳಿಗೆ ತುತ್ತಾಗುತ್ತಿದ್ದಾರೆ. ನನಗೂ ಅದರ ಅನುಭವ ಆಗಿದೆ. ಬೆಳಗ್ಗೆ ಜಾಗಿಂಗ್ ಹೋಗುತ್ತಿದ್ದಾಗ ಐದಾರು ನಾಯಿಗಳು ನನ್ನನ್ನು ಅಟ್ಟಾಡಿಸಿಕೊಂಡು ಬಂದಿದ್ದವು. ಅವುಗಳನ್ನು ನಾನು ಕಲ್ಲು ತೆಗೆದುಕೊಂಡು ಓಡಿಸಿದ್ದೆ ಎಂದು ಹೇಳಿದ್ದಾರೆ.

ಈಗಾಗಲೇ ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಲು ಸಭೆ ಕರೆಯಲಾಗಿದೆ.‌ ನಗರ ಹಾಗೂ ತಾಲೂಕು ಮಟ್ಟದಲ್ಲಿ ಕೂಡ ಸಭೆ ನಡೆಸಲಾಗಿದೆ ಎಂದ ಅವರು, ಏಡ್ಸ್ ಕಾಯಿಲೆ ಬಂದರೂ 10-50 ವರ್ಷ ಮನುಷ್ಯ ಬದುಕುತ್ತಾನೆ. ಆದರೆ ನಾಯಿ ಕಡಿತ ಅದಕ್ಕಿಂತ ಗಂಭೀರವಾದದ್ದು ಎಂದರು.

ಇನ್ನು ನಾಯಿ ಕಡಿತಕ್ಕೆ ಪೂರ್ಣ ಪ್ರಮಾಣದ ಔಷಧಿಯೇ ಇಲ್ಲ. ಹಾಗಾಗಿ ತಡೆಗಟ್ಟಲು ಅಗತ್ಯವಾದ ಕ್ರಮ ಕೈಗೊಳ್ಳಲಾಗಿದೆ. ನಾಯಿಗಳನ್ನು ಕೊಲ್ಲಲು ಬರುವುದಿಲ್ಲ. ಹಾಗಾಗಿ ಎನ್‌ಜಿಒ ಜತೆ ಮಾತನಾಡಲಾಗಿದೆ ಅವುಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ