ಬಸ್ ಅಪಘಾತಕ್ಕೆ ತಾಂತ್ರಿಕ ದೋಷ ಅಂತ ಖಚಿತವಾದರೆ ಹಿರಿಯ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಸುಸ್ತಿತಿಯಲ್ಲಿದೆ ತಾಂತ್ರಿಕ ದೋಷದಿಂದ ಅಪಘಾತಕ್ಕೀಡಾದರೆ ಅದಕ್ಕೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ವಿರುದ್ಧವೇ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೋಮವಾರ ಆಯೋಜಿಸಿದ್ದ ಹೊಸದಾಗಿ ನೇಮಕಗೊಂಡಿರುವ 2285 ನಿರ್ವಾಹಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಆಯ್ಕೆಗೊಂಡಿರುವ ನಿರ್ವಾಹಕರಿಕೆ ಆದೇಶ ಪತ್ರ ನೀಡಿ ಅವರು ಮಾತನಾಡಿದರು.
ಅಪಘಾತಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸುವ ಮೂಲಕ ಬೇಕಾಬಿಟ್ಟಿಯಾಗಿ ಬಸ್ಗಳ ದುರಸ್ತಿ ಮಾಡಿ ರಸ್ತೆಮೇಲೆ ಬಿಡುವ ಅಧಿಕಾರಿಗಳ ನಡೆಗೆ ತೀವ್ರ ಕಿಡಿಕಾರಿದ ಅವರು ಇಂಥ ಅಪಘಾತಗಳಿಗೆ ಚಾಲನಾ ಸಿಬ್ಬಂದಿಗಳನ್ನು ಹೊಣೆ ಮಾಡುವ ಅಧಿಕಾರಿಗಳ ವಿರುದ್ಧವೇ ಮೊದಲು ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಬಗ್ಗೆ ಅವಲೋಕಿಸಿದಾಗ, ಭಾರತ ದೇಶವು ರಸ್ತೆ ಅಪಘಾತದಲ್ಲಿ ಮೊದಲ ಸ್ಥಾನದಲ್ಲಿದೆ. ಅತೀ ಹೆಚ್ಚು ಅಪಘಾತ, ಸಾವು ನೋವು ದಾಖಲಾಗುತ್ತಿರುವುದು ನಮ್ಮ ದೇಶದಲ್ಲಿ ಇದು ಅತ್ಯಂತ ಕಳವಳಕಾರಿ. ಅದನ್ನು ತಡೆಗಟ್ಟಲು ನಮ್ಮ ಸಾರಿಗೆ ಇಲಾಖೆಯಿಂದ ( RTO – ROAD Safety Fund) ಸಹ ವಿವಿಧ ಅಭಿಯಾನಗಳನ್ನು ಸಹ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ನಮ್ಮ ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್ಸುಗಳ ಅಪಘಾತಗಳು ಅಧಿಕವಾಗುತ್ತಿವೆ. ಅಪಘಾತಕ್ಕೆ ಯಾರೇ ಕಾರಣವಿರಬಹುದು, ಆದರೆ ಅಪಘಾತದಿಂದ ನಡೆಯುವ ಸಾವು ನೋವುಗಳಿಗೆ ಯಾವುದೇ ಕಾರಣ/ ಪರಿಹಾರವು ನ್ಯಾಯ ಒದಗಿಸುವುದಿಲ್ಲ. ಅಪಘಾತದಿಂದ ಕಳೆದುಕೊಂಡ ಅಮೂಲ್ಯ ಜೀವಗಳನ್ನು ವಾಪಸ್ ತರಲು ಸಾಧ್ಯವೇ? ಅವರ ಅವಲಂಬಿತರು ಅನುಭವಿಸುವ ನೋವಿಗೆ ಪರ್ಯಾಯವಿದೆಯೇ? ಎಂದು ಬೇಸರ ವ್ಯಕ್ತಪಡಿಸಿದರು.
ಎರಡು ವಾರದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಚಾಲನಾ ಸಿಬ್ಬಂದಿಯೊಬ್ಬರಿಗೆ ₹25 ಲಕ್ಷ ಪರಿಹಾರವನ್ನು ನಾವು ನೀಡುವಾಗ ನನಗೆ ಅರ್ಥವಾಗಿದ್ದು ಒಂದೇ ವಿಷಯ. ಯಾವುದೇ ಆರ್ಥಿಕ ಸೌಲಭ್ಯವು ಆ ಸಿಬ್ಬಂದಿಗೆ ತನ್ನ ಹಿಂದಿನ ಸಂತೋಷದ ಜೀವನ ತಂದು ಕೊಡುವುದಿಲ್ಲ. ಬೇರೆಯವರನ್ನು ನೋಡಿದಾಗ ಅವನಿಗಾಗುವ ಮಾನಸಿಕ ವೇದನೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದು ಅವವರು ವಿಷಾಧಿಸಿದರು.
ಬಸ್ಸು ರಸ್ತೆಯಲ್ಲಿ ಸಂಚರಿಸುವ ದೊಡ್ಡ ವಾಹನ, ಆದ್ದರಿಂದ ನಮ್ಮ ಚಾಲಕರು ಮತ್ತಷ್ಟು ತಾಳ್ಮೆ, ಜಾಗ್ರತೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ನಿರ್ವಾಹಕರು ಚಾಲಕರಿಗೆ ವೇಗ ತಗ್ಗಿಸಲು, ಜಾಗ್ರತೆ ವಹಿಸಲು ಮನವರಿಕೆ ಮಾಡಿಕೊಡಬೇಕು ಎಂದರು.
ಕೆಲ ಸಂದರ್ಭಗಳಲ್ಲಿ ಬಸ್ಸುಗಳ ಅಪಘಾತಕ್ಕೆ ಬಸ್ಸುಗಳ ಸ್ಥಿತಿಗತಿಗಳು/ತಾಂತ್ರಿಕ ದೋಷಗಳು ಕಾರಣವಿರಬಹುದು. ಆ ನಿಟ್ಟಿನಲ್ಲಿಯೂ ನಾವು ಗಮನವಹಿಸಬೇಕು ತಾಂತ್ರಿಕ ಇಲಾಖೆಯ ಅಧಿಕಾರಿಗಳು, ಮೇಲ್ವಿಚಾರಕ ಸಿಬ್ಬಂದಿಗಳ ಅಜಾಗರೂಕತೆ ನಿರ್ಲಕ್ಷತೆ ಕಾರಣವಾಗಿರುತ್ತದೆ. ತಾಂತ್ರಿಕ ತೊಂದರೆಗಳಿಗೆ ಇನ್ನು ಮುಂದೆ, ಚಾಲನಾ ಸಿಬ್ಬಂದಿಗಳ ಬದಲಾಗಿ ತಾಂತ್ರಿಕ ಇಲಾಖೆಯ ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಘಟಕ ವ್ಯವಸ್ಥಾಪಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ತಾಂತ್ರಿಕ ತೊಂದರೆ ವಿಚಾರವಾಗಿ ಇಷ್ಟು ತೀಕ್ಷ್ಣವಾಗಿ ಪ್ರತಿಕ್ರಿಯಿಸಲು ಕಾರಣವೇನೆಂದರೆ ಇತ್ತೀಚಿನ ದಿನಗಳಲ್ಲಿ ಅಪಘಾತದ ಬಗ್ಗೆ ಭಯ ಮತ್ತು ಸಂವೇದನಾ ಶೀಲತೆ ಇಲ್ಲದಂತಾಗಿದೆ. ನೂರು ಅಪಘಾತಗಳಲ್ಲಿ ನನ್ನದೊಂದು ಎಂಬ ಅಸಹನೀಯ ಭಾವನೆ ಚಾಲನಾ ಸಿಬ್ಬಂದಿಗಳಲ್ಲಿ ಇರಬಾರದು. ಇಂತಹ ಭಾವನೆ ಆಘಾತಕಾರಿ ಎಂದು ಹೇಳಿದರು.
ಸಾರಿಗೆ ಇಲಾಖೆಯು ಮುಂದೆ ಅಪಘಾತಗಳ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳದೆ ಅನ್ಯ ಮಾರ್ಗವಿಲ್ಲದಂತಾಗಿದೆ. ಅಪಘಾತಗಳನ್ನು ತಗ್ಗಿಸಲು ಕಠಿಣ ಕ್ರಮಗಳನ್ನು ಸಹ ಕೆಲವೊಮ್ಮೆ ಜಾರಿಗೊಳಿಸುವುದು ಪ್ರಯಾಣಿಕರ ಹಿತ ದೃಷ್ಟಿಯಿಂದ ಅಗತ್ಯವಾಗಿದೆ. ಅಪಘಾತಗಳು ಆಕಸ್ಮಿಕವೇ ಆದರೂ ಅದನ್ನು ತಡೆಗಟ್ಟಲು ಎಲ್ಲ ರೀತಿಯ ಕ್ರಮಗಳನ್ನು ತೆಗದುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದುಹೇಳಿದರು.
2285 ನಿರ್ವಾಹಕರಿಗೆ ಆದೇಶ ಪತ್ರ: 2018 ರಿಂದ ಇಲ್ಲಿಯವರೆಗೂ ಬಿಎಂಟಿಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ. ಇದೀಗ ನೇಮಕಗೊಂಡ 2285 ನಿರ್ವಾಹಕರಿಗೆ ಆದೇಶ ಪತ್ರ ನೀಡಿದ್ದೇವೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಾಲ್ಕು ಸಾರಿಗೆ ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಹಿಂದಿನ ಎರಡು ವರ್ಷದಲ್ಲಿ ಅತ್ಯಂತ ಪಾರದರ್ಶಕವಾಗಿ 4700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಉಳಿದ 4300 ನೇಮಕಾತಿಗಳು ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.
ಇನ್ನು ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುವುದು ನನ್ನ ಭಾವನೆ ಎಂದ ಅವರು, ಈಗ ಸರ್ಕಾರಿ/ ಖಾಸಗಿವಲಯಗಳಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ಹುದ್ದೆ ಕಡಿತ ಜಾರಿಯಲ್ಲಿದೆ. ಈ ವೇಳೆ 10,000 ನೇಮಕಾತಿ ಪಾರದರ್ಶಕವಾಗಿ ನಡೆಸಿ ಉದ್ಯೋಗ ನೀಡಿರುವುದು, ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...