NEWSನಮ್ಮರಾಜ್ಯರಾಜಕೀಯ

ಸಚಿವ ಸ್ಥಾನದಿಂದ ಸಚಿವ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಮಧುಗಿರಿ ಪಟ್ಟಣ ಬಂದ್ ಮಾಡಿದ ಬೆಂಬಲಿಗರು-ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಮಧುಗಿರಿ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಮಧುಗಿರಿ ಪಟ್ಟಣ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪ್ರತಿಭಟನೆ ನಡೆಸಿದ ರಾಜಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಮಧುಗಿರಿ ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದರು. ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು.

ಬಳಿಕ ಪಾದಯಾತ್ರೆ ಮೂಲಕ ಎಸಿ ಕಚೇರಿ ವರೆಗೆ ಅಭಿಮಾನಿಗಳು ಸಾಗಿದರು. ಬೇಕೆಬೇಕು ನ್ಯಾಯ ಬೇಕು ಎಂದು ಎಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.

ತುಮಕೂರು ಗೇಟ್‌ನ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತರು. ಇದೇ ವೇಳೆ, ಬೇಕರಿಯೊಂದಕ್ಕೆ ನುಗ್ಗಲು ಪ್ರಯತ್ನಿಸಿದರು. ಎಂಜಿ ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಕುಡಿಯಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು. ಆತನನ್ನು ತಕ್ಷಣವೇ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.

ತಮ್ಮ ಸಡಿಲ ಹೇಳಿಕೆಗಳ ಮೂಲಕವೇ ಪಕ್ಷದೊಳಗಡೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸೋವಾರ ಸಂಪುಟದಿಂದ ವಜಾಗೊಳಿಸಿದರು. ಈ ಸಂಬಂಧ ರಾಜಣ್ಣ ಬೇಸರಗೊಂಡಿದ್ದಾರೆ. ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ