NEWSನಮ್ಮರಾಜ್ಯರಾಜಕೀಯ

ಬಿಜೆಪಿ ಸೇರುತ್ತಾರ ಸುಪ್ರೀಂಕೋರ್ಟ್‌, ಹೈಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಬಾ ಚುನಾವಣೆ ರಂಗೇರುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಾರ್ಯಕರ್ತರು ಉತ್ಸಾಹದಿಂದ ಮತಬೇಟೆಯಲ್ಲಿ ತೊಡಗಿದ್ದಾರೆ.

ಈ ನಡುವೆ ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಅವರು ನೂರಕ್ಕೆ 200% ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ಅದರಲ್ಲೂ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಜತೆಗೆ ಕೇರಳ ಮತ್ತು ತಮಿಳುನಾಡಿನಲ್ಲಿ ಖಾತೆ ತೆರೆಯಲಿದೆ ಎಂಬ ವಿಶ್ವಾಸ ಕೂಡ ವ್ಯಕ್ತಪಡಿಸಿದ್ದರು.

ಇನ್ನು  ಈ ಎಲ್ಲವನ್ನು ಗಮನಿಸಿದರೆ ಈ ಬಾರಿಯೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಇತ್ತೀಚೆಗೆ ಮಾಧ್ಯಮವೊಂದರ ಸಂದರ್ಶನದಲ್ಲೂ ಹೇಳಿಕೆ ನೀಡಿದ್ದರು. ಇದರಿಂದ ಉತ್ತೇಜಿತರಾಗಿರುವ ಬಿಜೆಪಿಯ ಹಲವು ನಾಯಕರು ಶಿವರಾಜು ಅವರನ್ನು ಪಕ್ಷಕ್ಕೆ ಬರುವಂತೆ ಆಹ್ವಾನ ಮಾಡಿದ್ದಾರೆ ಎನ್ನಲಾಗಿದೆ.

ಅದರಂತೆ ವಕೀಲ ಶಿವರಾಜು ಅವರು ಕೂಡ ದೊಡ್ಡಮಟ್ಟದಲ್ಲಿ ಪಕ್ಷ ಸೇರ್ಪಡೆ ಬಗ್ಗೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಆದರೆ ಇದರ ಇದರ ಬಗ್ಗೆ ಶಿವರಾಜು ಅವರು ಯಾವುದೇ ಅಧಿಕೃತ್‌ ಹೇಳಿಕೆ ನೀಡಿಲ್ಲ.

ಇನ್ನು ದೇಶದಲ್ಲಿ ಬಿಜೆಪಿಯ ಆಡಳಿತದಿಂದ ಜನರು ಪ್ರೇರೇಪಿತಗೊಂಡು ಮೋದಿಯವರನ್ನು ಮೊಗದೊಮ್ಮೆ ಅಧಿಕಾರಕ್ಕೆ ತರಲು ಮುಂದಾಗಿದ್ದಾರೆ ಎಂದು ಶಿವರಾಜು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಈವರೆಗೂ ರಾಜ್ಯ ಬಿಜೆಪಿಯ ಹಲವಾರು ಹಿರಿಯ ವ್ಯಕ್ತಿಗಳ ಜತೆ ಒಡನಾಟ ಹೊಂದಿದ್ದು, ಪಕ್ಷದ ಮುಖಂಡರು ಕೂಡ ಪಕ್ಷಕ್ಕೆ ಬರಲೇಬೇಕು ಎಂದು ಆಹ್ವಾನಿಸುತ್ತಿದ್ದಾರೆ. ಆದರೆ, ನಮಗೆ ನ್ಯಾಯವಾದಿ ಆಗಿರುವುದೇ ಇಷ್ಟವಾಗಿದ್ದು, ಈ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿರುವುದರಿಂದ ಸ್ವಲ್ಪ ಕಾಲವಕಾಶ ಕೊಡಿ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು