KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೆ ಈ ಸಂಬಂಧ ಹನುಮಂತರಾಯ ಜಳಕಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದರು. ಈ ವಿಷಯ ತಿಳದ ಕೂಡಲೇ ಘಟಕ ವ್ಯವಸ್ಥಾಪಕರು ಸ್ಥಳಕ್ಕೆ ಹೋಗಿ ಆತನ ರಕ್ಷಣೆ ಮಾಡಿ ಬಳಿಕ ಅವರ ಮನೆಯವರೆಗೂ ಹೋಗಿ ಬಿಟ್ಟು ಬಂದಿದ್ದಾರೆ.
ಇದು ಕಳೆದ ಶನಿವಾರ ಅಂದರೆ ಜೂನ್ 21ರ ಸಂಜೆ ಘಟನೆ ನಡೆದಿತ್ತು. ಪಾಪ ಘಟಕ ವ್ಯವಸ್ಥಾಪಕರು ರಾತ್ರಿ 9 ಗಂಟೆವರೆಗೂ ಆತನಿಗೆ ಬುದ್ದಿ ಹೇಳಿ ಮನೆ ತನಕ ಹೋಗಿ ಬಿಟ್ಟು ಬಂದಿದ್ದಾರೆ. ಈ ವೇಳೆ ಹನುಮಂತರಾಯ ಜಳಕಿಯ ಪತ್ನಿಗೂ ಈತನಿಗೆ ಬುದ್ದಿ ಹೇಳಿ ಮದ್ಯಪಾನವನ್ನು ಬಿಡುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿ ಬಂದಿದ್ದಾರೆ.
ಈ ನಡುವೆ ಘಟಕದ ಡೀಸೆಲ್ ವಿಭಾಗದಲ್ಲಿ ಡ್ಯೂಟಿ ಮಾಡುತ್ತಿರುವ ಕಿರಾತಕ ಸುರೇಶ್ ಬಾಬು ಎಂಬಾತ ನನಗೆ ಭಾರಿ ಕಿರುಕುಳ ಕೊಡುತ್ತಿದ್ದಾನೆ ಈತನ ಜತೆಗೆ ಒಬ್ಬ ಸಂಚಾರ ಸಿಬ್ಬಂದಿಕೂಡ ಸೇರಿಕೊಂಡಿದ್ದು, ಈಗಾಗಲೇ ನಾನು 5 ಸಾವಿರ ರೂಪಾಯಿ ಲಂಚಕೊಟ್ಟಿದ್ದೇನೆ.
ಇಷ್ಟಾದರೂ ಮತ್ತೆ ನಿನಗೆ ಕೆಲಸ ಕಾಯಂ ಆಗಿರುವ ಪ್ರಮಾಣಪತ್ರ ಕೊಡಬೇಕಾದರೆ ನೀನು 15 ಸಾವಿರ ರೂಪಾಯಿಯನ್ನು ಕೊಡಬೇಕು ಎಂದು ಪೀಡಿಸಿದ್ದಾನೆ. ಅದನ್ನು ಕೊಡದೆ ಇರುವುದಕ್ಕೆ ಈಗ ನನ್ನನ್ನು ದೊಡ್ಡಬಳ್ಳಾಪುರ ಘಟಕದಿಂದ ವರ್ಗಾವಣೆ ಮಾಡಿಸಿದ್ದಾನೆ ಎಂಬ ಆರೋಪವನ್ನು ಹನುಮಂತರಾಯ ಜಳಕಿ ಮಾಡಿದ್ದಾರೆ.
ಈ ನಡುವೆ ದೊಡ್ಡಬಳ್ಳಾಪುರ ಘಟಕದ ಘಟಕ ವ್ಯವಸ್ಥಾಪಕ ವೆಂಕಟ ರಾಘವ್ ಅವರು ತುಂಬ ಒಳ್ಳೆಯವರು ಅವರಿಂದ ನನಗೆ ಯಾವುದೇ ಕಿರುಕುಳವಾಗಿಲ್ಲ. ಆದರೆ ಈ ಸುರೇಶ್ ಬಾಬು ಮತ್ತೊಬ್ಬ ಸಿಬ್ಬಂದಿ ಸೇರಿಕೊಂಡು ನನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಎಲ್ಲ ಆರೋಪಗಳನ್ನು ಮಾಡಿ ಜತೆಗೆ ಫೋನ್ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ರೈಲಿಗೆ ತಲೆ ಕೊಡುವುದಕ್ಕೆ ಜೂನ್ 21ರಂದು ಹೋಗಿದ್ದರು. ಸದ್ಯ ಡಿಎಂ ವೆಂಕಟ ರಾಘವ್ ಅವರು ಹೋಗಿ ಜೀವ ಉಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಜಯಪಥ ಕಚೇರಿಗೆ ಫೋನ್ ನಂಬರ್ಗೆ ಚಾಲಕ ಜಳಕಿ ವಾಟ್ಸ್ಆಪ್ ಮಾಡಿದ್ದರೂ ಅದನ್ನು ನೋಡಿದ ಕೂಡಲೇ ಸಂಪಾದಕರು ಡಿಎಂ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದರು. ಬಳಿಕ ಡಿಎಂ ಅವರು ಎಲ್ಲವು ತಕ್ಕ ಮಟ್ಟಿಗೆ ಸರಿಯಾಗಿದೆ ನಾವು ಅವರ ಮನೆಯವರೆಗೂ ಹೋಗಿ ಬಿಟ್ಟು ಬಂದಿದ್ದೇವೆ ಎಂದು ತಿಳಿಸಿದ್ದರು.
ಆದರೆ ಇಂದು ಮತ್ತೆ ಚಾಲಕ ಕಂ ನಿರ್ವಾಹಕ ಜಲಕಿಗೆ ಈ ಸುರೇಶ್ ಬಾಬು ಮತ್ತೊಬ್ಬ ಸಿಬ್ಬಂದಿ ಕಿರುಕುಳ ಕೊಡುತ್ತಿದ್ದಾರೆ ಎಂದು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಸಂಬಂಧಟ್ಟ ಮೇಲಧಿಕಾರಿಗಳು ಚಾಲಕ ಕಂ ನಿರ್ವಾಹಕನಿಗೆ ಆಗುತ್ತಿರುವ ಕಿರುಕುಳನ್ನು ತಪ್ಪಿಸಬೇಕು ಜತೆಗೆ ಕಿರುಕುಳ ನೀಡುತ್ತಿರುವ ನೌಕರರ ಸಿಬ್ಬಂದಿಯನ್ನು ಕೂಡಲೆ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Related

You Might Also Like
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....
ಚಲಿಸುತ್ತಿದ್ದ ಬಸ್ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ
ಮುಂಬೈ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...
ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ನೀಡಲು ಪಟ್ಟು: ಡಿಸಿ ಕಚೇರಿ ಬಳಿ ರೈತ ಮುಖಂಡರ ಪ್ರತಿಭಟನೆ
ಮೈಸೂರು: 66/11 ಕೆ.ವಿ. ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ರೈತರ ಜಮೀನಿನ ಮೇಲೆ ಹಾದು ಹೋಗಿರುವುದರಿಂದ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ...
ಬಿ.ಸರೋಜಾದೇವಿ ಮೇರು ನಟಿ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ...
ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ...
KKRTC ವೋಲ್ವೋ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕನ ಕಾಲು ಮುರಿದಿದ್ದು,...
KSRTC “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ”: ನೌಕರರಿಗೆ 38 ತಿಂಗಳ ಹಿಂಬಾಕಿ, 2024ರ ವೇತನ ಹೆಚ್ಚಳ ಮಾಡಲಾಗದಿದ್ದರೂ ಸರ್ಕಾರದಿಂದ “ಶಕ್ತಿಯ” ಒಣಾಡಂಬರ..!
ಬೆಂಗಳೂರು: "ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ" ಅಂದಂಗೆ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ...
KSRTC: ಹೆಚ್ಚು ಅಪಘಾತಕ್ಕೀಡಾಗುತ್ತಿರುವ ಬಸ್ಗಳು- ಎಂಡಿ ಅಕ್ರಮ್ ಪಾಷ ಕಳವಳ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹೊಸದಾಗಿ ನೇಮಕಗೊಂಡ ಚಾಲಕ ಕಂ ನಿರ್ವಾಹಕರಿಗೆ ಪರಿಣಾಮಕಾರಿ ತರಬೇತಿ ನೀಡಿ ಕರ್ತವ್ಯಕ್ಕೆ ನಿಯೋಜಿಸಲು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್...
ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಸಾಥ್
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ...