KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೆ ಈ ಸಂಬಂಧ ಹನುಮಂತರಾಯ ಜಳಕಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದರು. ಈ ವಿಷಯ ತಿಳದ ಕೂಡಲೇ ಘಟಕ ವ್ಯವಸ್ಥಾಪಕರು ಸ್ಥಳಕ್ಕೆ ಹೋಗಿ ಆತನ ರಕ್ಷಣೆ ಮಾಡಿ ಬಳಿಕ ಅವರ ಮನೆಯವರೆಗೂ ಹೋಗಿ ಬಿಟ್ಟು ಬಂದಿದ್ದಾರೆ.
ಇದು ಕಳೆದ ಶನಿವಾರ ಅಂದರೆ ಜೂನ್ 21ರ ಸಂಜೆ ಘಟನೆ ನಡೆದಿತ್ತು. ಪಾಪ ಘಟಕ ವ್ಯವಸ್ಥಾಪಕರು ರಾತ್ರಿ 9 ಗಂಟೆವರೆಗೂ ಆತನಿಗೆ ಬುದ್ದಿ ಹೇಳಿ ಮನೆ ತನಕ ಹೋಗಿ ಬಿಟ್ಟು ಬಂದಿದ್ದಾರೆ. ಈ ವೇಳೆ ಹನುಮಂತರಾಯ ಜಳಕಿಯ ಪತ್ನಿಗೂ ಈತನಿಗೆ ಬುದ್ದಿ ಹೇಳಿ ಮದ್ಯಪಾನವನ್ನು ಬಿಡುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿ ಬಂದಿದ್ದಾರೆ.
ಈ ನಡುವೆ ಘಟಕದ ಡೀಸೆಲ್ ವಿಭಾಗದಲ್ಲಿ ಡ್ಯೂಟಿ ಮಾಡುತ್ತಿರುವ ಕಿರಾತಕ ಸುರೇಶ್ ಬಾಬು ಎಂಬಾತ ನನಗೆ ಭಾರಿ ಕಿರುಕುಳ ಕೊಡುತ್ತಿದ್ದಾನೆ ಈತನ ಜತೆಗೆ ಒಬ್ಬ ಸಂಚಾರ ಸಿಬ್ಬಂದಿಕೂಡ ಸೇರಿಕೊಂಡಿದ್ದು, ಈಗಾಗಲೇ ನಾನು 5 ಸಾವಿರ ರೂಪಾಯಿ ಲಂಚಕೊಟ್ಟಿದ್ದೇನೆ.
ಇಷ್ಟಾದರೂ ಮತ್ತೆ ನಿನಗೆ ಕೆಲಸ ಕಾಯಂ ಆಗಿರುವ ಪ್ರಮಾಣಪತ್ರ ಕೊಡಬೇಕಾದರೆ ನೀನು 15 ಸಾವಿರ ರೂಪಾಯಿಯನ್ನು ಕೊಡಬೇಕು ಎಂದು ಪೀಡಿಸಿದ್ದಾನೆ. ಅದನ್ನು ಕೊಡದೆ ಇರುವುದಕ್ಕೆ ಈಗ ನನ್ನನ್ನು ದೊಡ್ಡಬಳ್ಳಾಪುರ ಘಟಕದಿಂದ ವರ್ಗಾವಣೆ ಮಾಡಿಸಿದ್ದಾನೆ ಎಂಬ ಆರೋಪವನ್ನು ಹನುಮಂತರಾಯ ಜಳಕಿ ಮಾಡಿದ್ದಾರೆ.
ಈ ನಡುವೆ ದೊಡ್ಡಬಳ್ಳಾಪುರ ಘಟಕದ ಘಟಕ ವ್ಯವಸ್ಥಾಪಕ ವೆಂಕಟ ರಾಘವ್ ಅವರು ತುಂಬ ಒಳ್ಳೆಯವರು ಅವರಿಂದ ನನಗೆ ಯಾವುದೇ ಕಿರುಕುಳವಾಗಿಲ್ಲ. ಆದರೆ ಈ ಸುರೇಶ್ ಬಾಬು ಮತ್ತೊಬ್ಬ ಸಿಬ್ಬಂದಿ ಸೇರಿಕೊಂಡು ನನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಎಲ್ಲ ಆರೋಪಗಳನ್ನು ಮಾಡಿ ಜತೆಗೆ ಫೋನ್ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ರೈಲಿಗೆ ತಲೆ ಕೊಡುವುದಕ್ಕೆ ಜೂನ್ 21ರಂದು ಹೋಗಿದ್ದರು. ಸದ್ಯ ಡಿಎಂ ವೆಂಕಟ ರಾಘವ್ ಅವರು ಹೋಗಿ ಜೀವ ಉಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಜಯಪಥ ಕಚೇರಿಗೆ ಫೋನ್ ನಂಬರ್ಗೆ ಚಾಲಕ ಜಳಕಿ ವಾಟ್ಸ್ಆಪ್ ಮಾಡಿದ್ದರೂ ಅದನ್ನು ನೋಡಿದ ಕೂಡಲೇ ಸಂಪಾದಕರು ಡಿಎಂ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದರು. ಬಳಿಕ ಡಿಎಂ ಅವರು ಎಲ್ಲವು ತಕ್ಕ ಮಟ್ಟಿಗೆ ಸರಿಯಾಗಿದೆ ನಾವು ಅವರ ಮನೆಯವರೆಗೂ ಹೋಗಿ ಬಿಟ್ಟು ಬಂದಿದ್ದೇವೆ ಎಂದು ತಿಳಿಸಿದ್ದರು.
ಆದರೆ ಇಂದು ಮತ್ತೆ ಚಾಲಕ ಕಂ ನಿರ್ವಾಹಕ ಜಲಕಿಗೆ ಈ ಸುರೇಶ್ ಬಾಬು ಮತ್ತೊಬ್ಬ ಸಿಬ್ಬಂದಿ ಕಿರುಕುಳ ಕೊಡುತ್ತಿದ್ದಾರೆ ಎಂದು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಸಂಬಂಧಟ್ಟ ಮೇಲಧಿಕಾರಿಗಳು ಚಾಲಕ ಕಂ ನಿರ್ವಾಹಕನಿಗೆ ಆಗುತ್ತಿರುವ ಕಿರುಕುಳನ್ನು ತಪ್ಪಿಸಬೇಕು ಜತೆಗೆ ಕಿರುಕುಳ ನೀಡುತ್ತಿರುವ ನೌಕರರ ಸಿಬ್ಬಂದಿಯನ್ನು ಕೂಡಲೆ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Related

You Might Also Like
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...
ಕೊಪ್ಪಳ: ಭಾರೀ ಮಳೆಗೆ ಕುಸಿದ ಮನೆ ಒಂದೂವರೆ ವರ್ಷದ ಮಗು ಸಾವು, 6 ಮಂದಿಗೆ ಗಾಯ
ಕೊಪ್ಪಳ: ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗುವೊಂದು ಮೃಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮನೆ...