KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೆ ಈ ಸಂಬಂಧ ಹನುಮಂತರಾಯ ಜಳಕಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದರು. ಈ ವಿಷಯ ತಿಳದ ಕೂಡಲೇ ಘಟಕ ವ್ಯವಸ್ಥಾಪಕರು ಸ್ಥಳಕ್ಕೆ ಹೋಗಿ ಆತನ ರಕ್ಷಣೆ ಮಾಡಿ ಬಳಿಕ ಅವರ ಮನೆಯವರೆಗೂ ಹೋಗಿ ಬಿಟ್ಟು ಬಂದಿದ್ದಾರೆ.
ಇದು ಕಳೆದ ಶನಿವಾರ ಅಂದರೆ ಜೂನ್ 21ರ ಸಂಜೆ ಘಟನೆ ನಡೆದಿತ್ತು. ಪಾಪ ಘಟಕ ವ್ಯವಸ್ಥಾಪಕರು ರಾತ್ರಿ 9 ಗಂಟೆವರೆಗೂ ಆತನಿಗೆ ಬುದ್ದಿ ಹೇಳಿ ಮನೆ ತನಕ ಹೋಗಿ ಬಿಟ್ಟು ಬಂದಿದ್ದಾರೆ. ಈ ವೇಳೆ ಹನುಮಂತರಾಯ ಜಳಕಿಯ ಪತ್ನಿಗೂ ಈತನಿಗೆ ಬುದ್ದಿ ಹೇಳಿ ಮದ್ಯಪಾನವನ್ನು ಬಿಡುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿ ಬಂದಿದ್ದಾರೆ.
ಈ ನಡುವೆ ಘಟಕದ ಡೀಸೆಲ್ ವಿಭಾಗದಲ್ಲಿ ಡ್ಯೂಟಿ ಮಾಡುತ್ತಿರುವ ಕಿರಾತಕ ಸುರೇಶ್ ಬಾಬು ಎಂಬಾತ ನನಗೆ ಭಾರಿ ಕಿರುಕುಳ ಕೊಡುತ್ತಿದ್ದಾನೆ ಈತನ ಜತೆಗೆ ಒಬ್ಬ ಸಂಚಾರ ಸಿಬ್ಬಂದಿಕೂಡ ಸೇರಿಕೊಂಡಿದ್ದು, ಈಗಾಗಲೇ ನಾನು 5 ಸಾವಿರ ರೂಪಾಯಿ ಲಂಚಕೊಟ್ಟಿದ್ದೇನೆ.
ಇಷ್ಟಾದರೂ ಮತ್ತೆ ನಿನಗೆ ಕೆಲಸ ಕಾಯಂ ಆಗಿರುವ ಪ್ರಮಾಣಪತ್ರ ಕೊಡಬೇಕಾದರೆ ನೀನು 15 ಸಾವಿರ ರೂಪಾಯಿಯನ್ನು ಕೊಡಬೇಕು ಎಂದು ಪೀಡಿಸಿದ್ದಾನೆ. ಅದನ್ನು ಕೊಡದೆ ಇರುವುದಕ್ಕೆ ಈಗ ನನ್ನನ್ನು ದೊಡ್ಡಬಳ್ಳಾಪುರ ಘಟಕದಿಂದ ವರ್ಗಾವಣೆ ಮಾಡಿಸಿದ್ದಾನೆ ಎಂಬ ಆರೋಪವನ್ನು ಹನುಮಂತರಾಯ ಜಳಕಿ ಮಾಡಿದ್ದಾರೆ.
ಈ ನಡುವೆ ದೊಡ್ಡಬಳ್ಳಾಪುರ ಘಟಕದ ಘಟಕ ವ್ಯವಸ್ಥಾಪಕ ವೆಂಕಟ ರಾಘವ್ ಅವರು ತುಂಬ ಒಳ್ಳೆಯವರು ಅವರಿಂದ ನನಗೆ ಯಾವುದೇ ಕಿರುಕುಳವಾಗಿಲ್ಲ. ಆದರೆ ಈ ಸುರೇಶ್ ಬಾಬು ಮತ್ತೊಬ್ಬ ಸಿಬ್ಬಂದಿ ಸೇರಿಕೊಂಡು ನನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಎಲ್ಲ ಆರೋಪಗಳನ್ನು ಮಾಡಿ ಜತೆಗೆ ಫೋನ್ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ರೈಲಿಗೆ ತಲೆ ಕೊಡುವುದಕ್ಕೆ ಜೂನ್ 21ರಂದು ಹೋಗಿದ್ದರು. ಸದ್ಯ ಡಿಎಂ ವೆಂಕಟ ರಾಘವ್ ಅವರು ಹೋಗಿ ಜೀವ ಉಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಜಯಪಥ ಕಚೇರಿಗೆ ಫೋನ್ ನಂಬರ್ಗೆ ಚಾಲಕ ಜಳಕಿ ವಾಟ್ಸ್ಆಪ್ ಮಾಡಿದ್ದರೂ ಅದನ್ನು ನೋಡಿದ ಕೂಡಲೇ ಸಂಪಾದಕರು ಡಿಎಂ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದರು. ಬಳಿಕ ಡಿಎಂ ಅವರು ಎಲ್ಲವು ತಕ್ಕ ಮಟ್ಟಿಗೆ ಸರಿಯಾಗಿದೆ ನಾವು ಅವರ ಮನೆಯವರೆಗೂ ಹೋಗಿ ಬಿಟ್ಟು ಬಂದಿದ್ದೇವೆ ಎಂದು ತಿಳಿಸಿದ್ದರು.
ಆದರೆ ಇಂದು ಮತ್ತೆ ಚಾಲಕ ಕಂ ನಿರ್ವಾಹಕ ಜಲಕಿಗೆ ಈ ಸುರೇಶ್ ಬಾಬು ಮತ್ತೊಬ್ಬ ಸಿಬ್ಬಂದಿ ಕಿರುಕುಳ ಕೊಡುತ್ತಿದ್ದಾರೆ ಎಂದು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಸಂಬಂಧಟ್ಟ ಮೇಲಧಿಕಾರಿಗಳು ಚಾಲಕ ಕಂ ನಿರ್ವಾಹಕನಿಗೆ ಆಗುತ್ತಿರುವ ಕಿರುಕುಳನ್ನು ತಪ್ಪಿಸಬೇಕು ಜತೆಗೆ ಕಿರುಕುಳ ನೀಡುತ್ತಿರುವ ನೌಕರರ ಸಿಬ್ಬಂದಿಯನ್ನು ಕೂಡಲೆ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...