CRIMENEWSಬೆಂಗಳೂರು

ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ: ಪೆಟ್ರೋಲ್ ಸುರಿದು ತನ್ನ ಲಿವ್‌ಇನ್ ಗೆಳತಿ ಸುಟ್ಟ ದುರುಳ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತನ್ನ ಲಿವ್ ಇನ್ ಗೆಳತಿ ಮತ್ತೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ವ್ಯಕ್ತಪಡಿಸಿ ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ.

ವನಜಾಕ್ಷಿ (26) ಮೃತ ಮಹಿಳೆ. ಆರೋಪಿ ಲಿವ್ ಇನ್ ಗೆಳೆಯ ವಿಠ್ಠಲ (52) ಹತ್ಯೆ ಮಾಡಿದವ. ಕ್ಯಾಬ್‌ ಚಾಲಕನಾಗಿದ್ದ ಈತ ಮಳೆನಲ್ಲಸಂದ್ರದಲ್ಲಿ ಕಳೆದ ಮೂರು ವರ್ಷಗಳಿಂದ ವನಜಾಕ್ಷಿ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ.

ಆದರೆ ಇತ್ತೀಚೆಗೆ ವನಜಾಕ್ಷಿ ಬೇರೊಬ್ಬನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ವಿಠ್ಠಲ ಅನುಮಾನಗೊಂಡು ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ. ಇದೇ ಸಮಯದಲ್ಲಿ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಕಾರಿನಲ್ಲಿ ಹೋಗುತ್ತಿರುವುದನ್ನು ಕಂಡು ಕೋಪಗೊಂಡಿದ್ದ.

ಅಲ್ಲದೆ ಆಕೆ ಹೋಗುತ್ತಿದ್ದ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಆರೋಪಿ ತನ್ನ ಕಾರಿನಲ್ಲಿದ್ದ 5 ಲೀಟರ್ ಪೆಟ್ರೋಲ್ ತೆಗೆದು ಬಂದು ವನಜಾಕ್ಷಿ ಮೇಲೆ ಸುರಿಯಲು ಮುಂದಾದ ಈ ವೇಳೆ ಭಯಭೀತಳಾದ ವನಜಾಕ್ಷಿ ಕಾರಿನಿಂದ ಇಳಿದು ಅಲ್ಲಿಂದ ಓಡಿಹೋಗಿದ್ದಾಳೆ. ಆದರೂ ಬಿಡದೆ ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದರಿಂದ ಆಕೆ ತೀವ್ರವಾಗಿ ಸುಟ್ಟು ಗಾಯಗಳಿಂದ ಒದ್ದಾಡುತ್ತಿದ್ದಾಗ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಸೆ.1) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಈ ಘಟನೆ ಸಂಬಂಧ ಹುಳಿಮಾವು ಪೊಲೀಸರು ಆರೋಪಿ ವಿಠ್ಠಲನನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ ಎಂಎಸ್ಪಿ ಗ್ಯಾರಂಟಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲದು: ಕುರುಬೂರು SSLC ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ ಸಿಎಂ ಇಂದಿನಿಂದ SSLC ಪರೀಕ್ಷೆ: ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದುರಿಸಿ