CrimeNEWSನಮ್ಮಜಿಲ್ಲೆ

ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂಬ ಶಂಕೆ: ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಟೆಕ್ಕಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಕಂಪನಿಯೊಂದರ ಟೆಕ್ಕಿಯೊಬ್ಬರು ನನ್ನ ಮೇಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಿ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಿ.12 ರಂದು ರಾತ್ರಿ ಯುವತಿ ಕೋರಮಂಗಲ ಪಬ್ ಒಂದಕ್ಕೆ ಹೋಗಿದ್ದಳು. ಬಳಿಕ ಪ್ರಜ್ಞೆ ಬಂದಾಗ ಆಕೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದು ತಿಳಿದುಬಂದಿದೆ. ತಕ್ಷಣ ಆಕೆ ಹತ್ತಿರ ಇದ್ದ ಮನೆಯೊಂದರ ಬಾಗಿಲು ಬಡಿದಿದ್ದಾಳೆ. ನಂತರ ಸ್ಥಳೀಯರು 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟೆಕ್ಕಿಯನ್ನು ರಕ್ಷಣೆ ಮಾಡಿದ್ದಾರೆ.

ಬಳಿಕ ಪೊಲೀಸರು ಯುವತಿಯನ್ನು ಕೋರಮಂಗಲ ಠಾಣೆಗೆ ಕರೆತಂದಿದ್ದಾರೆ. ಸದ್ಯ ಈ ಸಂಬಂಧ ದೂರು ದಾಖಲಿಸಿರುವ ಆಕೆ ಪ್ರಜ್ಞಾಹೀನಳಾಗಿದ್ದಾಗ ನನ್ನ ಮೇಲೆ ಅತ್ಯಾಚಾರ ಆಗಿರುವ ಶಂಕೆ ಇದೆ. ಹೀಗಾಗಿ ತನಿಖೆ ಮಾಡಿ ಎಂದು ದೂರು ನೀಡಿದ್ದಾಳೆ.

ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದು, ಆಕೆ ಹೇಗೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಬಂದಳು ಎಂಬ ಬಗ್ಗೆ ತೀವ್ರ ತಲೆಕೆಡಿಸಿಕೊಂಡು, ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್