CrimeNEWSನಮ್ಮಜಿಲ್ಲೆ

ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂಬ ಶಂಕೆ: ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಟೆಕ್ಕಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಕಂಪನಿಯೊಂದರ ಟೆಕ್ಕಿಯೊಬ್ಬರು ನನ್ನ ಮೇಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಿ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಿ.12 ರಂದು ರಾತ್ರಿ ಯುವತಿ ಕೋರಮಂಗಲ ಪಬ್ ಒಂದಕ್ಕೆ ಹೋಗಿದ್ದಳು. ಬಳಿಕ ಪ್ರಜ್ಞೆ ಬಂದಾಗ ಆಕೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದು ತಿಳಿದುಬಂದಿದೆ. ತಕ್ಷಣ ಆಕೆ ಹತ್ತಿರ ಇದ್ದ ಮನೆಯೊಂದರ ಬಾಗಿಲು ಬಡಿದಿದ್ದಾಳೆ. ನಂತರ ಸ್ಥಳೀಯರು 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟೆಕ್ಕಿಯನ್ನು ರಕ್ಷಣೆ ಮಾಡಿದ್ದಾರೆ.

ಬಳಿಕ ಪೊಲೀಸರು ಯುವತಿಯನ್ನು ಕೋರಮಂಗಲ ಠಾಣೆಗೆ ಕರೆತಂದಿದ್ದಾರೆ. ಸದ್ಯ ಈ ಸಂಬಂಧ ದೂರು ದಾಖಲಿಸಿರುವ ಆಕೆ ಪ್ರಜ್ಞಾಹೀನಳಾಗಿದ್ದಾಗ ನನ್ನ ಮೇಲೆ ಅತ್ಯಾಚಾರ ಆಗಿರುವ ಶಂಕೆ ಇದೆ. ಹೀಗಾಗಿ ತನಿಖೆ ಮಾಡಿ ಎಂದು ದೂರು ನೀಡಿದ್ದಾಳೆ.

ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದು, ಆಕೆ ಹೇಗೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಬಂದಳು ಎಂಬ ಬಗ್ಗೆ ತೀವ್ರ ತಲೆಕೆಡಿಸಿಕೊಂಡು, ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ