CRIMEನಮ್ಮಜಿಲ್ಲೆ

ತಿ.ನರಸೀಪುರ: ನದಿಯಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಿಸಲು ಹೋದ ಅಜ್ಜನೂ ಜಲಸಮಾಧಿ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾತನೊಂದಿಗೆ ಕಾವೇರಿ ನದಿ ದಂಡೆಗೆ ಹೋಗಿದ್ದ ವೇಳೆ ನದಿಗಿಳಿದ ಇಬ್ಬರು ಬಾಲಕರು ನೀರಿನಲ್ಲಿ ಈಜಲು ಹೋಗಿ ಮುಳುಗುತ್ತಿದ್ದನ್ನು ಗಮನಿಸಿದ ತಾತ ರಕ್ಷಿಸಲು ಹೋಗಿ ಮೊಮ್ಮಕ್ಕಳೊಂದಿಗೆ ಜಲಸಮಾಧಿಯಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ಪಟ್ಟಣದ ತಿರುಮಕೂಡಲು ನಿವಾಸಿ ಚೌಡಯ್ಯ (70) ಮೊಮ್ಮಕ್ಕಳಾದ ಭರತ್‌(13) ಹಾಗೂ ಧನುಷ್‌ (10) ನೀರಿನಲ್ಲಿ ಮುಳುಗಿ ಮೃತಪಟ್ಟವರು.

ಕಾವೇರಿ ನದಿ ಬಳಿ ತಾತನೊಂದಿಗೆ ಹೋದ ಈ ಬಾಲಕರು ನೀರಿನಲ್ಲಿ ಈಜಲು  ನದಿಗೆ ಇಳಿದಿದ್ದಾರೆ. ಆದರೆ ಈ ವೇಳೆ ನದಿಯ ಆಳಕ್ಕೆ ಹೋಗಿದ್ದು, ಇಬ್ಬರು ಮೇಲೆ ಬರುವುದಕ್ಕೆ ಒದ್ದಾಡುತ್ತಿದ್ದರು, ಇದನ್ನು ಗಮನಿಸಿದ ಅಜ್ಜ ಮೊಮ್ಮಕ್ಕಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅವರನ್ನು ರಕ್ಷಣೆ ಮಾಡುವುದಕ್ಕೆ ಹೋಗಿ ಅದು ಸಾಧ್ಯವಾಗದೆ ಮೊಮ್ಮಕ್ಕಳ ಜತೆಗೆ ತಾತನು ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ತಿ.ನರಸೀಪುರ ಪೊಲೀಸ್‌ಠಾಣೆಯ ಪೊಲೀಸರು ಮೂವರ ಮೃತದೇಹಗಳನ್ನು ನದಿಯಿಂದ ಹೊರತೆಗೆಸಿ ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು.

ಇತ್ತ ಮಕ್ಕಳು ಹಾಗೂ ತಾತನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಈ ಅವಘಡ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ