NEWSಆರೋಗ್ಯನಮ್ಮರಾಜ್ಯ

ಪೋಲಿಯೋ ಲಸಿಕೆ ಶೇ.100 ರಷ್ಟು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಿ : DC ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ರೋಗ ನಿರೋಧಕ ದಿನ ಆಚರಣೆಯ ಅಂಗವಾಗಿ ನಡೆಯುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಶೇಕಡ 100 ರಷ್ಟು ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ 2024ನೇ ಸಾಲಿನ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಸಂಬಂಧಪಟ್ಟ ಇಲಾಖೆಗಳ ಸಹಭಾಗಿತ್ವದಲ್ಲಿ ಶೇ100 ರಷ್ಟು ಪ್ರಗತಿ ಸಾಧಿಸಿ ಎಂದು ಹೇಳಿದರು. ಕೆಳೆದ ಬಾರಿಗಿಂತ ಈ ಬಾರಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಒತ್ತು ನೀಡಿ ಪ್ರತಿ ಮಗುವಿಗು ಲಸಿಕೆ ತಲುಪುವಂತೆ ಮಾಡಿ ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಲಸಿಕೆಯನ್ನು ತಲುಪಿಸಲು ಕ್ರಮ ಕೈಗೊಳ್ಳಿ ಎಂದರು.

ಗ್ರಾಮ ಪಂಚಾಯಿತಿ, ನಗರ ಸಭೆ, ಪುರ ಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಆಯುಷ್ ಇಲಾಖೆ ಅಧಿಕಾರಿ ಡಾ.ಸೀಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ‌.ಲತಾರೆಡ್ಡಿ, ಎಸ್ಎಂಒ ಡಾ.ನಾಗರಾಜ್ (WHO) ಸೇರಿದಂತೆ ಜಿಲ್ಲಾ ಮಟ್ಟದ ಕಾರ್ಯಕ್ರಮಾಧಿಕಾರಿಗಳು, ತಾಲೂಕು ಮಟ್ಟದ ಅರೋಗ್ಯಾಧಿಕಾರಿಗಳು, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ