NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರಿಗೆ ವೇತನ ಆಯೋಗದಂತೆ ಸಂಬಳ ಹೆಚ್ಚಳಕ್ಕೆ ಕ್ರಮವಹಿಸಿ: ನೂತನ ಎಂಡಿಗೆ APSSWA ಸಂಘ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ನೌಕರರಿಗೆ ಬಿಡಿಎ ಹಾಗೂ ಡಿಎ ಕೊಡಲು ಆದೇಶಿಸಿದಕ್ಕೆ ಸಂಸ್ಥೆಯ ಲೆಕ್ಕಪತ್ರ ಹಾಗೂ ಸಿಬ್ಬಂದಿ ಮೇಲ್ವಿಚಾರಕ ಮತ್ತು ಅಧೀಕ್ಷಕರ ಕ್ಷೇಮಾಭಿವೃದ್ಧಿ ಸಂಘ (APSSWA) ದಿಂದ ಅಭಿನಂದಿಸಲಾಯಿತು.

ಬುಧವಾರ ಎಂಡಿ ಅಕ್ರಮ್‌ ಪಾಷ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.

ಇನ್ನು ಪದಗ್ರಹಣ ಅದ ತಕ್ಷಣವೇ ನೌಕರರಿಗೆ ಬಿಡಿಎ ಹಾಗೂ ಡಿಎ ಕೊಡಲು ಆದೇಶಿಸಿರುವುದು ಸಂತಸದ ಬೆಳವಣಿಗೆ ಅದಂತೆ ಮುಂದುವರಿದು ಸರ್ಕಾರದ ವೇತನ ಆಯೋಗದಂತೆ ಸಾರಿಗೆ ನೌಕರರ ವೇತನ ಹೆಚ್ಚಿಸಲು ಕ್ರಮಕೈಗೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದರು.

ಸಂಘದಿಂದ ಮಂಡಿಸಿದ ಎಲ್ಲ ಸಂಗತಿಗಳನ್ನು ಶಾಂತಚಿತ್ತದಿಂದ ಆಲಿಸಿದ ವ್ಯವಸ್ಥಾಪಕ ನಿರ್ದೇಶಕರು ಈಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ಭರಸೆ ನೀಡಿದರು.

ಈ ಸಂದರ್ಭದಲ್ಲಿ ಲೆಕ್ಕಪತ್ರ, ಸಿಬ್ಬಂದಿ ಮೇಲ್ವಿಚಾರಕ, ಅಧೀಕ್ಷಕ ಸಂಘದ ಅಧ್ಯಕ್ಷ ವಿಜಯ ಚಿಕ್ಕೋಣ, ಉಪಾಧ್ಯಕ್ಷ ಯಲ್ಲಪ್ಪ ದಳಪತಿ, ಕಾನೂನು ಸಲಹೆಗಾರ ತಿಪ್ಪೇಶ್ವರ ಅಣಜಿ, ಚಂದ್ರಾ ಹಾಗೂ ಪ್ರವೀಣ ಬಾದರದಿನ್ನಿ ಇದ್ದರು.

Deva
the authorDeva

1 Comment

  • ಹುಚ್ರು ಯಾವ್ದು ಆಗೋದಿಲ್ಲ ಕೊಟ್ಟಿರೋದು ಮಾಡ್ಕೊಂಡ್ ಇರಿ 😁

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು