NEWSಕೃಷಿನಮ್ಮಜಿಲ್ಲೆ

ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಬೇಸಿಗೆಯ ದಿನವಾಗಿರುವುದರಿಂದ ಕಾಡಿನಲ್ಲಿ ನೀರು ಮತ್ತು ಮೇವು ಸಿಗದ ಕಾರಣ ಕಾಡಾನೆಗಳು ನೇರವಾಗಿ ನಾಡಿಗೆ ಬಂದು ರೈತರ ಜಮೀನಿಗೆ ನುಗ್ಗುತ್ತಿವೆ.

ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದ ಕಾರಣ ಜಿಲ್ಲೆಯ ಗಡಿಯಂಚಿನ ತಾಳವಾಡಿ ಬಳಿಯ ಗ್ರಾಮಸ್ಥರು ಆಕ್ರೋಶಗೊಂಡು ಜಮೀನಿಗೆ ನುಗ್ಗಿದ ಕಾಡಾನೆಯನ್ನು ಟ್ರ್ಯಾಕ್ಟರ್ ಮೂಲಕ ಕಾಡಿಗೆ ಓಡಿಸಿದ್ದಾರೆ.

ಈಗಾಗಲೇ ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಕಷ್ಟಪಟ್ಟು ಬೆಳೆದ ಬೆಳೆ ಫಸಲಿಗೆ ಬರುತ್ತಿದ್ದಂತೆಯೇ ಕಾಡಾನೆಗಳು ಸೇರಿದಂತೆ ವಿವಿಧ ವನ್ಯ ಪ್ರಾಣಿಗಳು ಜಮೀನಿಗೆ ನುಗ್ಗಿ ಫಸಲನ್ನು ತಿಂದು ಹಾಳು ಮಾಡುತ್ತಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಈ ನಡುವೆ ಕೃಷಿ ಜಮೀನಿಗೆ ನುಗ್ಗಿ ಫಸಲು ನಾಶ ಮಾಡಲು ಬರುತ್ತಿದ್ದು, ಅದರಂತೆ ಕಾಡಾನೆಯೊಂದು ಜಮೀನಿಗೆ ಬಂದಿದ್ದನ್ನು ಗಮನಿಸಿದ ರೈತರು ತಮ್ಮ ಟ್ರ್ಯಾಕ್ಟರ್‌ನಲ್ಲಿ ಭಾರಿ ಶಬ್ದದ ಜತೆಗೆ ಚಾಲನೆ ಮಾಡಿಕೊಂಡು ಹೋಗುವ ಮೂಲಕ ಹಿಮ್ಮೆಟ್ಟಿಸಿದ್ದಾರೆ.

ಇದು ಅಪಾಯಕಾರಿಯಾಗಿದ್ದರೂ ಅನ್ಯ ಮಾರ್ಗವಿಲ್ಲದೆ ಪ್ರಾಣದ ಹಂಗು ತೊರೆದು ರೈತರು ಈ ಕೆಲಸವನ್ನು ಮಾಡಿದ್ದಾರೆ.ಇನ್ನಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಇತ್ತ ಗಮನಹರಿಸಿ ಕಾಡಾನೆಗಳು ಕೃಷಿ ಜಮೀನಿಗೆ ನುಗ್ಗಿ ಫಸಲು ನಾಶ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ