CRIMENEWSದೇಶ-ವಿದೇಶಸಿನಿಪಥ

ಹೃದಯಾಘಾತದಿಂದ ತಮಿಳು ಚಲನಚಿತ್ರ ನಿರ್ದೇಶಕ ವಿಕ್ರಮ್ ಸುಗುಮಾರನ್ ನಿಧನ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳು ಚಲನಚಿತ್ರ ನಿರ್ದೇಶಕ ವಿಕ್ರಮ್ ಸುಗುಮಾರನ್ (47) ಬಸ್ಸಿನಲ್ಲಿ ಪ್ರಯಾಣಿಸುವಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೊಸ ಚಿತ್ರದ ಬಗ್ಗೆ ನಿರ್ಮಾಪಕರಿಗೆ ಕಥೆ ಹೇಳಲು ಮಧುರೈನಿಂದ ಚೆನ್ನೈಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿತು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಅಷ್ಟರಲ್ಲೇ ಇಹಲೋಕ ತ್ಯಜಿಸಿದರು ಎಂದು ವೈದ್ಯರು ಖಚಿತಪಡಿಸಿದರು.

ವಿಕ್ರಮ್ ಸುಗುಮಾರನ್ ಅವರ ಚೊಚ್ಚಲ ಚಿತ್ರ ‘ಮದ ಯಾನೈ ಕೂಟಂ’ ವಿಮರ್ಶಕರ ಮೆಚ್ಚುಗೆ ಪಡೆದ ಚಿತ್ರವಾಗಿದೆ.

ವಿಕ್ರಮ್ ಸುಗುಮಾರನ್ 1999 ಮತ್ತು 2000ರ ನಡುವೆ ನಿರ್ದೇಶಕ ಬಾಲು ಮಹೇಂದ್ರ ಅವರ ಸಹಾಯಕರಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಅವರು ‘ಮದ ಯಾನೈ ಕೂಟಂ’ ಚಿತ್ರದೊಂದಿಗೆ ಬೆಳಕಿಗೆ ಬಂದರು. ಅವರು ‘ಥೇರಂ ಪೋರಂ’ ಎಂಬ ಹೊಸ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ವಿಕ್ರಮ್ ಸುಗುಮಾರನ್ ಅವರ ಅಂತ್ಯಕ್ರಿಯೆ ಚೆನ್ನೈನಲ್ಲಿ ನಡೆಯಿತು. ಅವರ ನಿಧನಕ್ಕೆ ತಮಿಳು ಚಲನಚಿತ್ರ ನಟರು, ನಟಿಯರು ಮತ್ತು ಆಪ್ತ ವಲಯ ಸಂತಾಪ ಸೂಚಿಸುವ ಮೂಲಕ ಶ್ರಧಾಂಜಲಿ ಸಲ್ಲಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ