NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರಿಗೆ ವೇತನ ಹೆಚ್ಚಳ ಮಾಡಿ ಅಂಬೇಡ್ಕರರ ಗೌರವಿಸಿ- ಸಿಎಂ ಸಿದ್ದ ರಾಮಯ್ಯಗೆ ಸಂಚಾರ ನಿಯಂತ್ರಕರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷ ಪೂರೈಸಿರುವಿರಿ. ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ತಾವೇ ಉವಾಚಿಸಿರುವಂತೆ ಸ್ವಾತಂತ್ರ್ಯ , ಸಮಾನತೆ, ಭ್ರಾತೃತ್ವದ ಆಶಯಗಳನ್ನು ನೀಡಿದ ಅಂಬೇಡ್ಕರ್ ಅವರಂತೆ ತಾವು ನಡೆದುಕೊಳ್ಳುತ್ತಿರುವಿರಾ?

ಕ.ವಿ.ಪ್ರ.ಮಂಡಳಿಗೊಂದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೊಂದು ಸಂವಿಧಾನ ವಿದೆಯೇ? ಎಲ್ಲಿ ಹೋಯಿತು ಸಮಾನತೆ 2020 ರಿಂದ ಪರಿ ಪರಿಯಾಗಿ ಬೇಡಿದರೂ ಸಹ ಬಾಕಿ ವೇತನ ಪರಿಷ್ಕರಣೆ/ ಕ.ವಿ.ಪ್ರ.ಮಂಡಳಿಯವರಿಗೆ ನೀಡುತ್ತಿರುವ ಸರಿಸಮಾನ ವೇತನ ನೀಡಲು ನಿಮಗೇನಾಗಿದೆ?

ಕೆಎಸ್‌ಆರ್‌ಟಿಸಿ ನೌಕರರಿಗೆ ಅಂಬೇಡ್ಕರ್ ಸಂವಿಧಾನ ಅನ್ವಯಿಸುವುದಿಲ್ಲವೇ? ಮನುವಾದಿ ನೀವು, ನಿಮ್ಮ ಸರಕಾರ. ಅಂಬೇಡ್ಕರ್ ವಿರೋಧಿ ನೀವು. ನೀವು ನಿಜವಾಗಿಯೂ ಅಂಬೇಡ್ಕರ್ ಸಂವಿಧಾನ ಅಧ್ಯಯನ ಮಾಡಿದ್ದರೆ ಮೊದಲು ಸಾರಿಗೆ ನೌಕರರಿಗೆ ಕ.ವಿ.ಪ್ರ.ಮಂ. ನೌಕರರಿಗೆ ನೀಡುತ್ತಿರುವ ಸರಿ ಸಮಾನವೇತನ ನೀಡಿ.

ಇದರ ಜತೆಗೆ ವೇತನ ಪರಿಷ್ಕರಣೆಯ ಬಾಕಿ ಮೊಬಲಗು ಕೂಡಲೇ ಬಿಡುಗಡೆ ಮಾಡುವ ಮೂಲಕ ಅಂಬೇಡ್ಕರ್ ಅವರನ್ನು ಗೌರವಿಸಿ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಂಚಾರ ನಿಯಂತ್ರಕರೊಬ್ಬರು ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಸಮಾಜ ಕಲ್ಯಾಣ ಇಲಾಖೆಯು ಡಾ.ಬಿ.ಆರ್‌. ಅಂಬೇಡ್ಕರ್‌ ಭವದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ-2025 ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ಸಂವಿಧಾನ ವಿರೋಧಿ ಮನುವಾದಿಗಳ ಗುರುತಿಸಿ ಎಂದು ಹೇಳಿದ್ದರು. ಅಲ್ಲದೆ ಮನುವಾಧಿಗಳು ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಹೇಳಿದ್ದರು. ತಾವು ಹೇಳಿರುವಂತ ನಡೆದುಕೊಂಡು ಸಾರಿಗೆ ನೌಕರರಿಗ ಸರಿ ಸಮಾನ ವೇತನ ಜಾರಿ ಮಾಡುವ ಮೂಲಕ ಸಂವಿಧಾನಕ್ಕೆ ಬದ್ಧರಾಗಿರಿ ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ