ಗ್ರಾಮೀಣ ಪ್ರದೇಶದ ಮಕ್ಕಳ ಉನ್ನತ ಶಿಕ್ಷಣಕ್ಕೆ ತಾಲೂಕು ಮಟ್ಟದಲ್ಲಿ ಬೋಧನಾ ಕೇಂದ್ರ ತೆರೆಯಬೇಕು: ಚೇತನ್

ಬನ್ನೂರು: ಗ್ರಾಮೀಣ ಪ್ರದೇಶದ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ತಾಲೂಕು ಮಟ್ಟದಲ್ಲಿ ಬೋಧನಾ ಕೇಂದ್ರ ತೆರೆಯುವ ಮೂಲಕ ಪಟ್ಟಣ ಪ್ರದೇಶದ ಮಕ್ಕಳಿಗೆ ದೊರಕುವ ಶಿಕ್ಷಣ ಹಳ್ಳಿ ಮಕ್ಕಳಿಗೂ ಸಿಗುವಂತಾಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಖಜಾಂಚಿ ಎಂ.ಬಿ.ಚೇತನ್ ಹೇಳಿದರು.
ತಿ.ನರಸೀಪುರ ತಾಲೂಕಿನ ಬನ್ನೂರು ಎಪಿಎಂಸಿ ಆವರಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಬನ್ನೂರು ಗ್ರಾಮಾಂತರ ಘಟಕದ ವತಿಯಿಂದ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಟ್ಟಣ ಪ್ರದೇಶದ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಶುಲ್ಕ ಭರಿಸುವ ಸಾಮರ್ಥ ಹೊಂದಿರುತ್ತಾರೆ, ಹಾಗಾಗಿ ಅವರು ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತ ಮಕ್ಕಳಿದ್ದರೂ ಉನ್ನತ ಶಿಕ್ಷಣಕ್ಕೆ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿನ ಪ್ರತಿಭೆ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಉನ್ನತ ಶಿಕ್ಷಣ ಹಳ್ಳಿ ಮಕ್ಕಳಿಗೂ ದೊರಕಬೇಕೆಂಬ ಆಶಯ ನನ್ನದಾಗಿದ್ದು,ತಾಲೂಕು ಮಟ್ಟದಲ್ಲಿ ಐಎಎಸ್,ಕೆಎ ಎಸ್ ಹಾಗು ಐಪಿಎಸ್ ನಂತಹ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಕೋಚಿಂಗ್ ಸೆಂಟರ್ ಗಳನ್ನು ತಾಲೂಕು ಮಟ್ಟದಲ್ಲಿ ಆರಂಭಿಸಬೇಕು.ಆಮೂಲಕ ರಯತರು ಹಾಗು ಬಡ ಜನರ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಿಕೊಡಲು ಸರ್ಕಾರ ಮುಂದಾಗಬೇಕು.ಇದಕ್ಕಾಗಿ ನಾವೆಲ್ಲರೂ ಸಿಕ್ಷಣ ಸಚಿವರಿಗೆ ಮನವಿ ಸಲ್ಲಿಸುವ ಕೆಲಸ ಮಾಡಬೇಕು ಎಂದರು.
ಮುಂದುವರಿದು ಮಾತನಾಡಿದ ಅವರು ಮಾಡುವ ಕೆಲಸದಲ್ಲಿ ಶ್ರದ್ಧೆ,ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಅದರ ಜೊತೆಗೆ ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು. ಎಂದು ಹೇಳಿದರು.
ಆರ್ಥಿಕ ತಜ್ಞ ಟಿ.ವಿ.ಗೋಪಿನಾಥ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಮಕ್ಕಳಲ್ಲಿ ಬೆಳೆಯಬೇಕಾದರೆ ಮನೆಯ ಪರಿಸರ ಹಾಗೂ ಶಾಲೆಯ ಪರಿಸರ ಎರಡೂ ಅತಿ ಮುಖ್ಯ.ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ ಪಠ್ಯದಷ್ಟೇ ಇತರೆ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಲ್ಲಿ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜು ಮಾತನಾಡಿ, ಪ್ರಸಕ್ತ ಸನ್ನಿವೇಶ ದಲ್ಲಿ ರಾಜಕಾರಣಿಗಳು ಕೊಡುವ ಹಣದ ಆಮಿಷಕ್ಕೆ ಬಲಿಯಾಗಿ ನಮ್ಮ ರೈತರು ಮಾಡುವ ಕೆಲಸವನ್ನು ಬಿಟ್ಟು ಅವರ ಸನ್ಮಾನ, ಹುಟ್ಟುಹಬ್ಬ ಕಾರ್ಯಕ್ರಮಗಳನ್ನು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.ಅದು ಆಗಬಾರದು ಉತ್ತಮ ಸಾಧನೆ ಮಾಡಿದ ಯಾವುದೇ ಜಾತಿ ಧರ್ಮದ ವ್ಯಕ್ತಿಗೆ ಸನ್ಮಾನಿಸುವ ಕಾರ್ಯಕ್ರಮಗಳಾಗಬೇಕು ಎಂದರು.
ನಮ್ಮ ಟಿ.ವಿ.ಗೋಪಿನಾಥ್ ಅವರ ಮಗಳು ಗೀತಾ ಗೋಪಿನಾಥ್ ವಿಶ್ವದ ಆರ್ಥಿಕ ತಜ್ಞರಾಗಿ ಸಾಧನೆ ಮಾಡಿದ್ದಾರೆ. ಅವರಂತೆಯೇ ನಮ್ಮ ರೈತರ ಮಕ್ಕಳು ಸಾಧನೆ ಮಾಡುವಂತಾಗಬೇಕು. ಸಾಧನೆ ಯಾರೊಬ್ಬರ ಸ್ವತ್ತು ಅಲ್ಲ. ಕಠಿಣ ಪರಿಶ್ರಮ ಯಾವುದೇ ಸಾಧನೆ ಮಾಡಲು ಪ್ರೇರೇಪಣೆ ನೀಡುತ್ತದೆ. ಆದರೆ ಮಕ್ಕಳಲ್ಲಿ ಸಾಧನೆ ಮಾಡುವ ಮನಸ್ಸಿನೊಂದಿಗೆ ಛಲ ಇರಬೇಕು. ಆಗ ಮಾತ್ರವೇ ಸಾಧನೆ ಸಾಧ್ಯ ಎಂದರು.
ಬನ್ನೂರು ಸಂತೇ ಮಾಳದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಸಸಿ ವಿತರಿಸಲಾಯಿತು.
ಕನ್ನಡ ಸಾಹಿತ್ಯ ಕಲಾಕೂಟದ ಎಂ.ಚಂದ್ರಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೂಳೇಗೌಡ,ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರವೀಶ್,ಸಾಮಾಜಿಕ ವಲಯ ಅರಣ್ಯ ವಲಯದ ಗಸ್ತು ಅರಣ್ಯಪಾಲಕ ಚನ್ನಬಸವಯ್ಯ, ಅತ್ತಹಳ್ಳಿ ಲಿಂಗಣ್ಣ, ಅರುಣ್ ಕುಮಾರ್, ಕೇತುಪುರ ಗಿರಿರಾಜ್, ಬನ್ನೂರು ಸೂರಿ, ಕಿರಗಸೂರು ಶಂಕರ್, ಹೆಗ್ಗೂರು ರಂಗರಾಜು, ಕುಂಚನಹಳ್ಳಿ ಕುಳ್ಳೇಗೌಡ, ಮೆಡಿಕಲ್ ಮಹೇಶ್, ವೈನ್ ನಟೇಶ್, ಕೊಡಗಹಳ್ಳಿ ರಾಜಣ್ಣ, ಟೈಲರ್ ಸ್ವಾಮಿ, ಎ.ಪಿ ನವೀನ್, ಚಾಮನಹಳ್ಳಿ ನಿಂಗೇಗೌಡ, ಕರಿಯಪ್ಪ, ಎ.ಪಿ ಚೇತನ್ ಎ.ಎನ್. ಮಹೇಶ್, ರಂಗಸಮುದ್ರ ರೇವಣ್ಣ, ಯಾಚೇನಹಳ್ಳಿ ರಾಮಸ್ವಾಮಿ, ಬರಡನಪುರ ನಾಗರಾಜ್, ಉಡಿಗಾಲ ರೇವಣ್ಣ, ಮೂಡಲಪುರ ಶಿವಮೂರ್ತಿ, ಕುರುಬೂರು ಪ್ರದೀಪ್, ಹೆಗ್ಗೂರು ರಂಗರಾಜು, ಅತ್ತಹಳ್ಳಿ ಮೈಕ್ ಬಾಬು, ರಾಜೇಶ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಇದ್ದರು.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...