NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಸರ್ಕಾರವೇ ಕೊಟ್ಟಿರುವ 9 ಭರವಸೆಗಳ ಈಡೇರಿಸಲೇ ಬೇಕು : ನೌಕರರ ಪಟ್ಟು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಸರ್ಕಾರವೇ ಕೊಟ್ಟಿರುವ 9 ಭರವಸೆಗಳನ್ನು ಈಡೇರಿಸಿಕೊಡುವಲ್ಲಿ ಇನ್ನೂ ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಟ ನಡೆಸುವ ಬಗ್ಗೆ ಎಚ್ಚರಿಸಲು ಇಂದು ಸಾರಿಗೆ ನೌಕರರ ಕೂಟ ಸುದ್ದಿಗೋಷ್ಠಿ ನಡೆಸಲಿದೆ.

ನಗರದ ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ಮಧ್ಯಾಹ್ನ 1.30ಕ್ಕೆ ಸುದ್ದಿಗೋಷ್ಠಿ ಆಯೋಜಿಸಿದ್ದು ಸರ್ಕಾರ ಮತ್ತು ನಿಕಟ ಪೂರ್ವ ಸಾರಿಗೆ ಸಚಿವರು ಮತ್ತು ಹಾಲಿ ಮುಖ್ಯಮಂತ್ರಿಗಳು ಲಿಖಿತವಾಗಿ ನೌಕರರಿಗೆ ಕೊಟ್ಟಿರುವ ಭರವಸೆಗಳಿ ಈಗಾಗಲೇ 2 ವರ್ಷ ಕಳೆದರೂ ಇನ್ನೂ ಈಡೇರಿಸಿಲ್ಲ. ಇದರಿಂದ ನೌಕರರು ನಿತ್ಯ ವೇದನೆ ಅನುಭವಿಸುತ್ತಿದ್ದಾರೆ.

ಹೀಗಾಗಿ  ಕೂಡಲೇ ನೌಕರರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು. ಇಲ್ಲ ನೌಕರರು ಮತ್ತೆ 2021ರ ಏಪ್ರಿಲ್‌ನಲ್ಲಿ ನಡೆಸಿದ ಮುಷ್ಕರವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗುವುದು.

ಇದಲ್ಲದೆ ನೌಕರರು ಈಗಾಗಲೇ ನೂರಾರು ಮನವಿಗಳನ್ನು ಕೊಟ್ಟಿದ್ದು ಮುಷ್ಕರದ ವೇಳೆ ಆಗಿರುವ ಸುಳ್ಳು ಪೊಲೀಸ್‌ ಪ್ರಕರಣ ಸೇರಿದಂತೆ ಇತರ ಎಲ್ಲ ಸಮಸ್ಯೆಗಳಿಂದ ನೌಕರರಿಗೆ ಮುಕ್ತಿ ನೀಡಬೇಕು. ಇಲ್ಲದಿದ್ದರೆ ಅದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತಿದೆ ಎಂದು ಎಚ್ಚರಿಸುವ ಕೆಲಸವನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ