CrimeNEWSಮೈಸೂರು

ಚಾಲಕನ ನಿರ್ಲಕ್ಷ್ಯದಿಂದ ಶಾಲೆ ಬಾಲಕಿ ಮೇಲೆ ಹರಿದ ಬಸ್‌- ಸದ್ಯ ವಿದ್ಯಾರ್ಥಿನಿ ಪಾರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಶಾಲಾ ಬಾಲಕಿ ಮೇಲೆ ಚಾಲಕನ ಅಜಾಗರೂಕತೆಯಿಂದ ಬಸ್‌ ಹರಿಸಿರೋ ಘಟನೆ ಹುಣಸೂರಿನ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶಾಲಾ ವಾಹನ ಚಾಲಕ ಮೊದಲು ಬಸ್​​ನಿಂದ ಇಬ್ಬರು ಮಕ್ಕಳನ್ನು ಇಳಿಸುತ್ತಾನೆ. ಶಾಲಾ ವಾಹನದಿಂದ ಇಳಿದು ಅದೇ ವಾಹನದ ಮುಂಭಾಗದಿಂದ ಮನೆ ಕಡೆ ಹೋಗುತ್ತಿದ್ದಂತೆ ಏಕಾಏಕಿ ಚಾಲಕ ಶಾಲಾ ಬಸ್​​ ಅನ್ನು ಚಲಿಸಿಕೊಂಡು ಹೋಗುತ್ತಾನೆ. ನೋಡ ನೋಡುತ್ತಿದ್ದಂತೆ ಬಾಲಕಿಗೆ ಬಸ್​​ ಡಿಕ್ಕಿ ಹೊಡೆಯುತ್ತದೆ.

ಈ ವೇಳೆ ಬಾಲಕಿ ಬಸ್​​ ಅಡಿಯಲ್ಲಿ ಬೀಳುತ್ತಾಳೆ. ಇದನ್ನು ನೋಡಿದ ಕೂಡಲೇ ಸ್ಥಳೀಯರು ಬಾಲಕಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಲೆ ಎಂದು ಹೇಳಲಾಗುತ್ತಿದೆ. ಈ ಘಟನೆ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಘಟನೆಯೂ ಸೇರಿದಂತೆ ಮೈಸೂರು ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಬಳಿ ಬೈಕ್​ ಮತ್ತು ಬೊಲೆರೊ ವಾಹನದ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ತಡರಾತ್ರಿ ಮೈಸೂರಿನ ಯಾದವಗಿರಿ ಸಮೀಪ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣರಾಗಿದ್ದಾರೆ.

ಬೈಕ್​-ಬೊಲೆರೊ ವಾಹನ ಅಪಘಾತ: ಆಂಧ್ರಪ್ರದೇಶ ಮೂಲದ ಬೊಲೆರೋ ವಾಹನ ಪಿರಿಯಾಪಟ್ಟಣ ಕಡೆಯಿಂದ ಹುಣಸೂರಿಗೆ ತೆರಳುತ್ತಿತ್ತು. ಹುಣಸೂರಿನಿಂದ ಅತ್ತಿಗುಪ್ಪೆ ಕಡೆ ಬರುತ್ತಿದ್ದ ಬೈಕ್‌ ನಡುವೆ ಅರಸು ಕಲ್ಲಹಳ್ಳಿ ಗೇಟ್ ಬಳಿ ಮುಖಾ ಮುಖಿ ಡಿಕ್ಕಿಯಾಗಿದೆಎ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ (40), ನಾಗರಾಜು (57) ಮೃತರು. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ನಿಂದ ಬಿದ್ದು ಇಬ್ಬರು ಮೃತ: ತಡರಾತ್ರಿ ಮೈಸೂರಿನ ಯಾದವಗಿರಿ ಸಮೀಪ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಗೋಕುಲಂ ನಿವಾಸಿಗಳಾದ ಸಿದ್ದರಾಜು (20), ನಿರಂಜನ್ (20) ಮೃತದುರ್ದೈವಿಗಳು. ಬೈಕ್​ನಲ್ಲಿದ್ದ ಮತ್ತೋರ್ವನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ