NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಸಿಎಂ -ಒಪ್ಪದೆ ಶೇ.30ಕ್ಕೆ ಪಟ್ಟು ಹಿಡಿದಿರುವ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶೇ.40ರಷ್ಟು ವೇತನ ಹೆಚ್ಚಿಸುವ ಮೂಲಕ 7ನೇ ವೇತನ ಆಯೋಗ ವರದಿ ಜಾರಿಗೆ ಮಾಡಬೇಕು ಎಂದು ಆಗ್ರಹಿಸಿ‌ ರಾಜ್ಯಾದ್ಯಂತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುವು ಮೂಲಕ ರಾಜ್ಯ ಸರ್ಕಾರಿ ನೌಕರರ ಸಂಘ‌ದ ಅಧ್ಯಕ್ಷರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಥಮ ಪಿಯುಸಿ, ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇನ್ನು ರಾಜ್ಯಾದ್ಯಂತ ಸರ್ಕಾರಿ ಕಚೇರಿಯ ಸೇವೆ ಬಹುತೇಕ ಸ್ಥಗಿತವಾಗಿದ್ದು, ಸಾರ್ವಜನಿಕರು ಇದರಿಂದ ತೊಂದರೆ ಅನುಭವಿಸುವಂತಾಗಿದೆ. 2022 ಜು.1ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂಬುದು ಸರ್ಕಾರಿ ನೌಕರರ ಬೇಡಿಕೆ ಆಗಿದೆ. ‌

ಕಳೆದ ರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಹೀಗಾಗಿ ಇಂದು (ಮಾ.1) ಮುಷ್ಕರ ಆರಂಭಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಶೇ.17 ವೇತನ ಹೆಚ್ಚಿಸುವ ಬಗ್ಗೆ ತಕ್ಷಣ ಆದೇಶ ನೀಡುವುದಾಗಿ ತಿಳಿಸಿದ್ದಾರೆ.

ಏ.1ರಿಂದ ಜಾರಿಗೆ ಬರುವಂತೆ ಶೇ.17ರಷ್ಟು ವೇತನ ಪರಿಷ್ಕರಣೆ ಮಾಡಿ ಆದೇಶವನ್ನೂ ಹೊರಡಿಸಿದ್ದು, ಇದಕ್ಕೆ ಒಪ್ಪದಿದ್ದಲ್ಲಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ನೀಡಿರುವ ಶೇ.17ರಷ್ಟು ವೇತನ ಹೆಚ್ಚಳದ ಹೇಳಿಕೆ ಸಂಬಂಧ ನೌಕರರೊಂದಿಗೆ ಚರ್ಚಿಸಿ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ನೌಕರರೊಂದಿಗೆ ಸಭೆ ನಡೆಸಿದ ಸಂಘದ ಅಧ್ಯಕ್ಷ ಷಡಾಕ್ಷರಿ ಬಳಿಕ ಶೇ.30 ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಪಟ್ಟು ಹಿಡಿದುಕುಳಿತಿದ್ದಾರೆ. ಈ ಸಂಬಂಧ ಮತ್ತೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಋಕಾರಿ ನೌಕರರ ಸಂಘದ ಪದಾಧಿಕಾರಿಗಳು ಮಹತ್ವದ ಸಭೆ ನಡೆಸುತ್ತಿದ್ದು ಕೆಲ ನಿಮಿಷಗಳಲ್ಲಿ ಮುಷ್ಕರ ಹಿಂಪಡೆಯುವ ಬಗ್ಗೆ / ಮುಂದುವರಿಸುವ ಬಗ್ಗೆ ನಿರ್ಣಯ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ