NEWSಕ್ರೀಡೆನಮ್ಮರಾಜ್ಯ

ದೇಶ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಮಂಗಳೂರಿನ ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ” ಉದ್ಘಾಟಿಸಿ ಮಾತನಾಡಿದರು

ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ ಎಂದರು.

ಡಿವೈಎಸ್‌ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ.2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ.3ಕ್ಕೆ ಹೆಚ್ವಿಸಿದ್ದೇನೆ. ಜತೆಗೆ ಒಲಂಪಿಕ್‌ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಒಲಿಂಪಿಕ್‌ನಲ್ಲಿ ದೇಶಕ್ಕಾಗಿ ಪದಕ ತರಬೇಕು ಎಂದು ಹುರಿದುಂಬಿಸಿದರು.

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದರು.

ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ ಎಂದರು.

ಇನ್ನು ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಿದೆ ಎಂದರು.

Megha
the authorMegha

Leave a Reply

error: Content is protected !!
Latest news
KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ...