ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು

ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್ನಲ್ಲಿ ಸಮಾವೇಶಗೊಂಡಿತು.
ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು ಜಂತರ್ ಮಂತರ್ ನಲ್ಲಿ ಕಿಸಾನ್ ಮಹಾಪಂಚಾಯತ್ ರ್ಯಾಲಿ ನಡೆಸಿದರು ದೇಶದ ಹಲವು ರಾಜ್ಯಗಳಿಂದ ರೈತರು ತಂಡೋಪ ತಂಡವಾಗಿ ರ್ಯಾಲಿಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದರು.
ಕೃಷಿ ಉತ್ಪನ್ನಗಳಿಗೆ MSP ಗ್ಯಾರಂಟಿ ಕಾನೂನು ಸೇರಿದಂತೆ ರೈತಪರ ಬೇಡಿಕೆಗಳ ಅನುಷ್ಠಾನಕ್ಕಾಗಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ “ಕಿಸಾನ್ ಮಹಾಪಂಚಾಯತ್”ನಲ್ಲಿ ಕರ್ನಾಟಕದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಬಣದ ವಿವಿಧ ಜಿಲ್ಲೆಗಳ ನೂರಾರು ರೈತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಈ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಜಕೀಯೇತರ ರಾಷ್ಟ್ರಮಟ್ಟದ ವೇದಿಕೆ ನೇತೃತ್ವದ ಜಗಜಿತ್ ಸಿಂಗ್ ದಲೆವಾಲಾ ವಹಿಸಿದರು, ಇದರಲ್ಲಿ ದೇಶದಾದ್ಯಂತದ ಮಧ್ಯ ಪ್ರದೇಶ, ಬಿಹಾರ್, ಹರಿಯಾಣ, ಪಂಜಾಬ್, ಕರ್ನಾಟಕ ಹಾಗೂ ತಮಿಳುನಾಡು ಮತ್ತಿತರ ರಾಜ್ಯಗಳ ರೈತ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡಿವೆ.
ಹೋರಾಟದ ಮುಖ್ಯ ಬೇಡಿಕೆಗಳು: 1. ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ಖಾತರಿ ಕಾನೂನು ಜಾರಿಯಾಗಬೇಕು. 2. ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು.
3. ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಗಳಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಕುರಿ ಸಾಕಾಣಿಕೆ ಉದ್ಯಮಗಳನ್ನು ಹೊರಗಿಡಬೇಕು. 4. ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕೆಗಳಿಗೆ ವಶಪಡಿಸಿಕೊಳ್ಳುವ ನೀತಿ ಕೈಬಿಡಬೇಕು. 5. ರೈತ ಹೋರಾಟದಲ್ಲಿ ಭಾಗವಹಿಸಿದ ರೈತರ ಮೇಲಿರುವ ಎಲ್ಲಾ ಪೊಲೀಸು ದೂರುಗಳನ್ನು ರದ್ದುಪಡಿಸಬೇಕು.

ಕರ್ನಾಟಕದಿಂದ ರೈತರ ಮುಖಂಡರಾದ ಸುರೇಶ್ ಪಾಟೀಲ್ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಬಸವರಾಜ್ ಪಾಟೀಲ್, ರಮೇಶ್ ಹೂಗಾರ್, ಶಿವರಾಜ್ ನಾಯಕ್ ಮುಂತಾದವರು ಭಾಗವಹಿಸಿದರು.
Related


You Might Also Like
KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಸ್- ತಪ್ಪಿದ ಭಾರಿ ಅನಾಹುತ
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...
ಕೆಐಎಡಿಬಿ: ಭೂ ಸ್ವಾಧೀನ ಕುರಿತು ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ್ ರೈತರ ನಿಯೋಗದ ಜತೆ ಚರ್ಚೆ- ರಾಮಲಿಂಗಾರೆಡ್ಡಿ
ಆನೇಕಲ್: ತಾಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಪ್ರಸ್ತುತ...
KKRTC ನೌಕರ ನಿಧನ ಪ್ರಕರಣ: ಸಹೋದರನಿಗೆ ಅನುಕಂಪದ ಉದ್ಯೋಗ ಪಡೆಯುವ ಹಕ್ಕಿದೆ- ಹೈಕೋರ್ಟ್ ತೀರ್ಪು
ಬೆಂಗಳೂರು: ಸರ್ಕಾರಿ ನೌಕರನ ಪತ್ನಿ, ಪತಿಗಿಂತ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿರಲಿಲ್ಲದಿದ್ದಾಗ ಹಾಗೂ ಆನಂತರದಲ್ಲಿ ಸರ್ಕಾರಿ ನೌಕರನೂ ನಿಧನರಾದಾಗ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರರಿಗೆ ಅನುಕಂಪದ ಆಧಾರದಲ್ಲಿ...
ದೇವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಯೋಗದ ಅಧ್ಯಕ್ಷ ನಾಗಣ್ಣಗೌಡ ಭೇಟಿ
ಗಾಯಗೊಂಡ ಮೂವರು ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ...
NWKRTC: DA ಅರಿಯರ್ಸ್ ಬಗ್ಗೆ ಚರ್ಚಿಸಿ ಆದೇಶ ಮಾಡುವೆ-ಕೂಟದ ಪದಾಧಿಕಾರಿಗಳ ಜತೆ ವ್ಯವಸ್ಥಾಪಕ ನಿರ್ದೇಶಕರ ಚರ್ಚೆ
ಹುಬ್ಬಳ್ಳಿ: ಸಾರಿಗೆ ನೌಕರರ ಕೂಟದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಲಯ ಮಟ್ಟದ ಕುಂದು ಕೊರತೆ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರ ಜತೆ...
ಗಣಪನ ವಿಸರ್ಜನೆಗೆ 41 ಕಲ್ಯಾಣಿಗಳು, 489 ಸಂಚಾರಿ ವಾಹನಗಳು ಸಜ್ಜು
ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು ಹಾಗೂ...
ರಸ್ತೆ ಅಗೆದೆಡೆ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ಕೊಡಿ: ಆಡಳಿತಗಾರ ತುಷಾರ್ ಗಿರಿನಾಥ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್...
ಆ.28ರಂದು ಕನಿಷ್ಠ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರ ಮುಸ್ಸಂಜೆಯ ಇಳಿವಯಸ್ಸಿನಲ್ಲಿರುವ ಪ್ರಬುದ್ಧ ಇಪಿಎಸ್-95 ನಿವೃತ್ತರು ಕಳೆದೊಂದು ದಶಕದಿಂದ ದೇಶಾದ್ಯಂತ ನಡೆಸಿದ ಹೋರಾಟಕ್ಕೆ ಯಾವುದೇ ಪ್ರತಿಫಲ ಕೊಡದೆ ಉದ್ಧಟತನದಿಂದ ನಡೆದುಕೊಳ್ಳುತ್ತಿರುವುದಕ್ಕೆ ಸಮಸ್ತ ನಿವೃತ್ತರು...