NEWSದೇಶ-ವಿದೇಶನಮ್ಮರಾಜ್ಯ

ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ 140 ಕೋಟಿ ಭಾರತೀಯರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ  ಮಾತನಾಡಿದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಹೇಳಿದರು.

ಇನ್ನುಮುಂದೆ ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದನ್ನು ನಿಲ್ಲಿಸಲಾಗುವುದು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧರ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಗೌರವಿಸಿದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...