ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.
ನಿನ್ನೆ ತಡರಾತ್ರಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮಧ್ಯರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಗೆ ಬಿಸಾಕಿ ಪರಾರಿಯಾಗಿದ್ದಾನೆ.
ಇನ್ನು ಆಟೋದಲ್ಲಿ ಒಬ್ಬನೇ ಬಂದಿದ್ದ ಎಂದು ಹೇಳಲಾಗುತ್ತಿದೆ. ಹತ್ಯೆಯಾದ ಮಹಿಳೆ 30 ರಿಂದ 35 ವರ್ಷದವರು ಎಂದು ಹೇಳಾಗುತ್ತಿದೆ. ಸದ್ಯ ಕೊಲೆಯಾದ ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಸಂಬಂಧಿಕರಿಗಾಗಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.
ಇತ್ತ ಈ ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಪ್ರಕರಣ ಹೇಗೆ ಬೆಳಕಿಗೆ ಬಂತು?: ಶನಿವಾರ ತಡರಾತ್ರಿ 1:40ರ ವೇಳೆಗೆ ವ್ಯಕ್ತಿಯೊಬ್ಬರು ಕಸ ಹಾಕಲು ಸ್ಕೇಟಿಂಗ್ ಗ್ರೌಂಡ್ ಬಳಿ ಬಂದಿದ್ದರು. ಈ ವೇಳೆ ಕಸದ ಗುಡ್ಡೆಯಲ್ಲಿದ್ದ ಚೀಲವೊಂದರಲ್ಲಿ ತಲೆಕೂದಲು ಕಾಣಿಸಿದೆ. ಚೀಲ ಬಿಚ್ಚಿ ನೋಡಿದಾಗ ಮಹಿಳೆಯ ದೇಹ ಚೀಲದಲ್ಲಿರುವುದು ಗೊತ್ತಾಗಿದೆ.
ತಕ್ಷಣವೇ ಅವರು ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಒಬ್ಬನೇ ವ್ಯಕ್ತಿ ಆಟೋದಲ್ಲಿ ಮೂಟೆ ಸಮೇತ ತಂದು ಬಿಸಾಡಿ ಹೋಗಿರುವುದು ಗೊತ್ತಾಗಿದೆ. ಸದ್ಯ ಪೊಲೀಸರು ಮೃತಪಟ್ಟಿರೋದು 30-35ನೇ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದೆ.
ಮೃತ ಮಹಿಳೆ ಅರ್ಬನ್ ಕಂಪನಿ ಟಿ ಶರ್ಟ್ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಆಕೆಯ ದೇಹದ ಮೇಲೆ ಒಳ ಉಡುಪುಗಳು ಇರಲಿಲ್ಲವಾದ್ದರಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...