CRIMENEWSಬೆಂಗಳೂರು

ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.

ನಿನ್ನೆ ತಡರಾತ್ರಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮಧ್ಯರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಗೆ ಬಿಸಾಕಿ ಪರಾರಿಯಾಗಿದ್ದಾನೆ.

ಇನ್ನು ಆಟೋದಲ್ಲಿ ಒಬ್ಬನೇ ಬಂದಿದ್ದ ಎಂದು ಹೇಳಲಾಗುತ್ತಿದೆ. ಹತ್ಯೆಯಾದ ಮಹಿಳೆ 30 ರಿಂದ 35 ವರ್ಷದವರು ಎಂದು ಹೇಳಾಗುತ್ತಿದೆ. ಸದ್ಯ ಕೊಲೆಯಾದ ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಸಂಬಂಧಿಕರಿಗಾಗಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಇತ್ತ ಈ ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಪ್ರಕರಣ ಹೇಗೆ ಬೆಳಕಿಗೆ ಬಂತು?: ಶನಿವಾರ ತಡರಾತ್ರಿ 1:40ರ ವೇಳೆಗೆ ವ್ಯಕ್ತಿಯೊಬ್ಬರು ಕಸ ಹಾಕಲು ಸ್ಕೇಟಿಂಗ್ ಗ್ರೌಂಡ್ ಬಳಿ ಬಂದಿದ್ದರು. ಈ ವೇಳೆ ಕಸದ ಗುಡ್ಡೆಯಲ್ಲಿದ್ದ ಚೀಲವೊಂದರಲ್ಲಿ ತಲೆಕೂದಲು ಕಾಣಿಸಿದೆ. ಚೀಲ ಬಿಚ್ಚಿ ನೋಡಿದಾಗ ಮಹಿಳೆಯ ದೇಹ ಚೀಲದಲ್ಲಿರುವುದು ಗೊತ್ತಾಗಿದೆ.

ತಕ್ಷಣವೇ ಅವರು ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಒಬ್ಬನೇ ವ್ಯಕ್ತಿ ಆಟೋದಲ್ಲಿ ಮೂಟೆ ಸಮೇತ ತಂದು ಬಿಸಾಡಿ ಹೋಗಿರುವುದು ಗೊತ್ತಾಗಿದೆ. ಸದ್ಯ ಪೊಲೀಸರು ಮೃತಪಟ್ಟಿರೋದು 30-35ನೇ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದೆ.

ಮೃತ ಮಹಿಳೆ ಅರ್ಬನ್ ಕಂಪನಿ ಟಿ ಶರ್ಟ್ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಆಕೆಯ ದೇಹದ ಮೇಲೆ ಒಳ ಉಡುಪುಗಳು ಇರಲಿಲ್ಲವಾದ್ದರಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ